Andolana originals

ಉದ್ಘಾಟನೆಗಾಗಿ ಕಾದಿರುವ ಹಳ್ಳಿಸಂತೆ ಕಟ್ಟಡ

ತೆರಕಣಾಂಬಿಯಲ್ಲಿ 32 ಮಳಿಗೆಗಳ ಹಳ್ಳಿ ಸಂತೆ ; ಮಹಿಳೆಯರು ತಯಾರಿಸಿದ ವಸ್ತುಗಳ ಮಾರಾಟಕ್ಕೆ ಅವಕಾಶ

ರವಿ ಎನ್. ಲಕ್ಕೂರು

ತೆರಕಣಾಂಬಿ (ಗುಂಡ್ಲುಪೇಟೆ ತಾ. ): ಹೋಬಳಿ ಕೇಂದ್ರವಾದ ತೆರಕಣಾಂಬಿ ಗ್ರಾಮ ದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನ ಗಳಿಗೆ ಮಾರುಕಟ್ಟೆ ಕಲ್ಪಿಸಲು ನಿರ್ಮಿಸಿರುವ ಹಳ್ಳಿ ಸಂತೆ ಕಟ್ಟಡ ಉದ್ಘಾಟನೆಗೆ ಸಜ್ಜುಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಫಲಾನುಭವಿಗಳ ಸಮಾವೇಶದಲ್ಲಿ ಹಳ್ಳಿ ಸಂತೆಯನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ, ಸಮಾವೇಶ ಮುಂದೂಡಿದ್ದರಿಂದ ಉದ್ಘಾಟನೆ ಆಗಲಿಲ್ಲ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಎನ್‌ಆರ್‌ಎಲ್‌ಎಂ ಯೋಜನೆಯಡಿ ಈ ಹಳ್ಳಿ ಸಂತೆ ಕಟ್ಟಡವನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ (ಕೆಆರ್‌ಐಡಿಎಲ್) ನಿರ್ಮಾಣ ಮಾಡಲಾಗಿದೆ. ಇದರ ಅಂದಾಜು ವೆಚ್ಚ ೫೨ ಲಕ್ಷ ರೂ. ಗಳಾಗಿದೆ.

ತೆರಕಣಾಂಬಿ-ಚಾಮರಾಜನಗರ ಮುಖ್ಯ ರಸ್ತೆಯ ಬದಿಯಲ್ಲೇ (ತೆರಕಣಾಂಬಿ ಪೊಲೀಸ್ ಠಾಣೆ ಸಮೀಪ) ೩೨ ಮಳಿಗೆಗಳ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯಗಳು, ನೀರಿನ ವ್ಯವಸ್ಥೆ ಹಾಗೂ ನೀರಿನ ತೊಟ್ಟಿಯನ್ನು ನಿರ್ಮಿಸಲಾಗಿದೆ. ಹಳ್ಳಿಸಂತೆ ಮುಂಭಾಗ ಕೌಂಟರ್‌ಅನ್ನು ತೆರೆಯಲಾಗಿದೆ.

ತೆರಕಣಾಂಬಿ ಹೋಬಳಿಯ ೯ ಗ್ರಾಪಂ ವ್ಯಾಪ್ತಿಯಲ್ಲಿರುವ ಎನ್‌ಆರ್‌ಎಲ್‌ಎಂ ಒಕ್ಕೂ ಟದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಈ ಮಳಿಗೆಗಳನ್ನು ನೀಡಲಾಗುತ್ತದೆ. ಎನ್‌ಆರ್ ಎಲ್‌ಎಂ ಯೋಜನೆಯಡಿ ಸಾಲ ಪಡೆದು ಸ್ವ ಸಹಾಯ ಸಂಘಗಳ ಮಹಿಳೆಯರು ತಯಾರಿ ಸಿದ ಹಪ್ಪಳ, ಉಪ್ಪಿನಕಾಯಿ, ಬಟ್ಟೆಗಳು, ಕರಕು ಶಲ ವಸ್ತುಗಳು, ತಿಂಡಿ-ತಿನಿಸುಗಳು, ಅಲಂಕಾ ರಿಕ ವಸ್ತುಗಳನ್ನು ಹಳ್ಳಿ ಸಂತೆ ಕಟ್ಟಡದ ಮಳಿಗೆ ಗಳಲ್ಲಿ ಮಾರಾಟ ಮಾಡಲು ಅವಕಾಶ ನೀಡ ಲಾಗುವುದು. ಮಹಿಳೆಯರು ವ್ಯಾಪಾರ ಚಟು ವಟಿಕೆಗಳಲ್ಲಿ ಪಾಲ್ಗೊಂಡು ಆರ್ಥಿಕವಾಗಿ ಸ್ವಾವ ಲಂಬಿಗಳಾಗಲಿ ಎಂಬುದು ಹಳ್ಳಿ ಸಂತೆಯ ಉದ್ದೇಶವಾಗಿದೆ. ಮಳಿಗೆಗಳಿಗೆ ಬಾಡಿಗೆ ನಿಗದಿ ಮಾಡಿಲ್ಲ. ಕಟ್ಟಡದ ನಿರ್ವಹಣೆಗೆ ಶುಲ್ಕ ಪಡೆಯಲಾಗುತ್ತದೆ. ವಾಣಿಜ್ಯ ಕೇಂದ್ರ ವಾದ ತೆರಕಣಾಂಬಿ ಗ್ರಾಮದಲ್ಲಿ ಪ್ರತಿ ಗುರು ವಾರ ಎಪಿಎಂಸಿ ಪ್ರಾಂಗಣದಲ್ಲಿ ಭರ್ಜರಿ ಸಂತೆ ನಡೆಯುತ್ತದೆ. ಹಳ್ಳಿ ಸಂತೆಯೂ ಆರಂಭವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

11 mins ago

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

2 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

4 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

4 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

5 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

5 hours ago