Andolana originals

ಉದ್ಘಾಟನೆಗಾಗಿ ಕಾದಿರುವ ಹಳ್ಳಿಸಂತೆ ಕಟ್ಟಡ

ತೆರಕಣಾಂಬಿಯಲ್ಲಿ 32 ಮಳಿಗೆಗಳ ಹಳ್ಳಿ ಸಂತೆ ; ಮಹಿಳೆಯರು ತಯಾರಿಸಿದ ವಸ್ತುಗಳ ಮಾರಾಟಕ್ಕೆ ಅವಕಾಶ

ರವಿ ಎನ್. ಲಕ್ಕೂರು

ತೆರಕಣಾಂಬಿ (ಗುಂಡ್ಲುಪೇಟೆ ತಾ. ): ಹೋಬಳಿ ಕೇಂದ್ರವಾದ ತೆರಕಣಾಂಬಿ ಗ್ರಾಮ ದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನ ಗಳಿಗೆ ಮಾರುಕಟ್ಟೆ ಕಲ್ಪಿಸಲು ನಿರ್ಮಿಸಿರುವ ಹಳ್ಳಿ ಸಂತೆ ಕಟ್ಟಡ ಉದ್ಘಾಟನೆಗೆ ಸಜ್ಜುಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಫಲಾನುಭವಿಗಳ ಸಮಾವೇಶದಲ್ಲಿ ಹಳ್ಳಿ ಸಂತೆಯನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ, ಸಮಾವೇಶ ಮುಂದೂಡಿದ್ದರಿಂದ ಉದ್ಘಾಟನೆ ಆಗಲಿಲ್ಲ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಎನ್‌ಆರ್‌ಎಲ್‌ಎಂ ಯೋಜನೆಯಡಿ ಈ ಹಳ್ಳಿ ಸಂತೆ ಕಟ್ಟಡವನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ (ಕೆಆರ್‌ಐಡಿಎಲ್) ನಿರ್ಮಾಣ ಮಾಡಲಾಗಿದೆ. ಇದರ ಅಂದಾಜು ವೆಚ್ಚ ೫೨ ಲಕ್ಷ ರೂ. ಗಳಾಗಿದೆ.

ತೆರಕಣಾಂಬಿ-ಚಾಮರಾಜನಗರ ಮುಖ್ಯ ರಸ್ತೆಯ ಬದಿಯಲ್ಲೇ (ತೆರಕಣಾಂಬಿ ಪೊಲೀಸ್ ಠಾಣೆ ಸಮೀಪ) ೩೨ ಮಳಿಗೆಗಳ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯಗಳು, ನೀರಿನ ವ್ಯವಸ್ಥೆ ಹಾಗೂ ನೀರಿನ ತೊಟ್ಟಿಯನ್ನು ನಿರ್ಮಿಸಲಾಗಿದೆ. ಹಳ್ಳಿಸಂತೆ ಮುಂಭಾಗ ಕೌಂಟರ್‌ಅನ್ನು ತೆರೆಯಲಾಗಿದೆ.

ತೆರಕಣಾಂಬಿ ಹೋಬಳಿಯ ೯ ಗ್ರಾಪಂ ವ್ಯಾಪ್ತಿಯಲ್ಲಿರುವ ಎನ್‌ಆರ್‌ಎಲ್‌ಎಂ ಒಕ್ಕೂ ಟದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಈ ಮಳಿಗೆಗಳನ್ನು ನೀಡಲಾಗುತ್ತದೆ. ಎನ್‌ಆರ್ ಎಲ್‌ಎಂ ಯೋಜನೆಯಡಿ ಸಾಲ ಪಡೆದು ಸ್ವ ಸಹಾಯ ಸಂಘಗಳ ಮಹಿಳೆಯರು ತಯಾರಿ ಸಿದ ಹಪ್ಪಳ, ಉಪ್ಪಿನಕಾಯಿ, ಬಟ್ಟೆಗಳು, ಕರಕು ಶಲ ವಸ್ತುಗಳು, ತಿಂಡಿ-ತಿನಿಸುಗಳು, ಅಲಂಕಾ ರಿಕ ವಸ್ತುಗಳನ್ನು ಹಳ್ಳಿ ಸಂತೆ ಕಟ್ಟಡದ ಮಳಿಗೆ ಗಳಲ್ಲಿ ಮಾರಾಟ ಮಾಡಲು ಅವಕಾಶ ನೀಡ ಲಾಗುವುದು. ಮಹಿಳೆಯರು ವ್ಯಾಪಾರ ಚಟು ವಟಿಕೆಗಳಲ್ಲಿ ಪಾಲ್ಗೊಂಡು ಆರ್ಥಿಕವಾಗಿ ಸ್ವಾವ ಲಂಬಿಗಳಾಗಲಿ ಎಂಬುದು ಹಳ್ಳಿ ಸಂತೆಯ ಉದ್ದೇಶವಾಗಿದೆ. ಮಳಿಗೆಗಳಿಗೆ ಬಾಡಿಗೆ ನಿಗದಿ ಮಾಡಿಲ್ಲ. ಕಟ್ಟಡದ ನಿರ್ವಹಣೆಗೆ ಶುಲ್ಕ ಪಡೆಯಲಾಗುತ್ತದೆ. ವಾಣಿಜ್ಯ ಕೇಂದ್ರ ವಾದ ತೆರಕಣಾಂಬಿ ಗ್ರಾಮದಲ್ಲಿ ಪ್ರತಿ ಗುರು ವಾರ ಎಪಿಎಂಸಿ ಪ್ರಾಂಗಣದಲ್ಲಿ ಭರ್ಜರಿ ಸಂತೆ ನಡೆಯುತ್ತದೆ. ಹಳ್ಳಿ ಸಂತೆಯೂ ಆರಂಭವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಆಂದೋಲನ ಡೆಸ್ಕ್

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

54 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

1 hour ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

1 hour ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

1 hour ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

2 hours ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

2 hours ago