ತೆರಕಣಾಂಬಿಯಲ್ಲಿ 32 ಮಳಿಗೆಗಳ ಹಳ್ಳಿ ಸಂತೆ ; ಮಹಿಳೆಯರು ತಯಾರಿಸಿದ ವಸ್ತುಗಳ ಮಾರಾಟಕ್ಕೆ ಅವಕಾಶ
ರವಿ ಎನ್. ಲಕ್ಕೂರು
ತೆರಕಣಾಂಬಿ (ಗುಂಡ್ಲುಪೇಟೆ ತಾ. ): ಹೋಬಳಿ ಕೇಂದ್ರವಾದ ತೆರಕಣಾಂಬಿ ಗ್ರಾಮ ದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನ ಗಳಿಗೆ ಮಾರುಕಟ್ಟೆ ಕಲ್ಪಿಸಲು ನಿರ್ಮಿಸಿರುವ ಹಳ್ಳಿ ಸಂತೆ ಕಟ್ಟಡ ಉದ್ಘಾಟನೆಗೆ ಸಜ್ಜುಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಫಲಾನುಭವಿಗಳ ಸಮಾವೇಶದಲ್ಲಿ ಹಳ್ಳಿ ಸಂತೆಯನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ, ಸಮಾವೇಶ ಮುಂದೂಡಿದ್ದರಿಂದ ಉದ್ಘಾಟನೆ ಆಗಲಿಲ್ಲ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಎನ್ಆರ್ಎಲ್ಎಂ ಯೋಜನೆಯಡಿ ಈ ಹಳ್ಳಿ ಸಂತೆ ಕಟ್ಟಡವನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ (ಕೆಆರ್ಐಡಿಎಲ್) ನಿರ್ಮಾಣ ಮಾಡಲಾಗಿದೆ. ಇದರ ಅಂದಾಜು ವೆಚ್ಚ ೫೨ ಲಕ್ಷ ರೂ. ಗಳಾಗಿದೆ.
ತೆರಕಣಾಂಬಿ-ಚಾಮರಾಜನಗರ ಮುಖ್ಯ ರಸ್ತೆಯ ಬದಿಯಲ್ಲೇ (ತೆರಕಣಾಂಬಿ ಪೊಲೀಸ್ ಠಾಣೆ ಸಮೀಪ) ೩೨ ಮಳಿಗೆಗಳ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯಗಳು, ನೀರಿನ ವ್ಯವಸ್ಥೆ ಹಾಗೂ ನೀರಿನ ತೊಟ್ಟಿಯನ್ನು ನಿರ್ಮಿಸಲಾಗಿದೆ. ಹಳ್ಳಿಸಂತೆ ಮುಂಭಾಗ ಕೌಂಟರ್ಅನ್ನು ತೆರೆಯಲಾಗಿದೆ.
ತೆರಕಣಾಂಬಿ ಹೋಬಳಿಯ ೯ ಗ್ರಾಪಂ ವ್ಯಾಪ್ತಿಯಲ್ಲಿರುವ ಎನ್ಆರ್ಎಲ್ಎಂ ಒಕ್ಕೂ ಟದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಈ ಮಳಿಗೆಗಳನ್ನು ನೀಡಲಾಗುತ್ತದೆ. ಎನ್ಆರ್ ಎಲ್ಎಂ ಯೋಜನೆಯಡಿ ಸಾಲ ಪಡೆದು ಸ್ವ ಸಹಾಯ ಸಂಘಗಳ ಮಹಿಳೆಯರು ತಯಾರಿ ಸಿದ ಹಪ್ಪಳ, ಉಪ್ಪಿನಕಾಯಿ, ಬಟ್ಟೆಗಳು, ಕರಕು ಶಲ ವಸ್ತುಗಳು, ತಿಂಡಿ-ತಿನಿಸುಗಳು, ಅಲಂಕಾ ರಿಕ ವಸ್ತುಗಳನ್ನು ಹಳ್ಳಿ ಸಂತೆ ಕಟ್ಟಡದ ಮಳಿಗೆ ಗಳಲ್ಲಿ ಮಾರಾಟ ಮಾಡಲು ಅವಕಾಶ ನೀಡ ಲಾಗುವುದು. ಮಹಿಳೆಯರು ವ್ಯಾಪಾರ ಚಟು ವಟಿಕೆಗಳಲ್ಲಿ ಪಾಲ್ಗೊಂಡು ಆರ್ಥಿಕವಾಗಿ ಸ್ವಾವ ಲಂಬಿಗಳಾಗಲಿ ಎಂಬುದು ಹಳ್ಳಿ ಸಂತೆಯ ಉದ್ದೇಶವಾಗಿದೆ. ಮಳಿಗೆಗಳಿಗೆ ಬಾಡಿಗೆ ನಿಗದಿ ಮಾಡಿಲ್ಲ. ಕಟ್ಟಡದ ನಿರ್ವಹಣೆಗೆ ಶುಲ್ಕ ಪಡೆಯಲಾಗುತ್ತದೆ. ವಾಣಿಜ್ಯ ಕೇಂದ್ರ ವಾದ ತೆರಕಣಾಂಬಿ ಗ್ರಾಮದಲ್ಲಿ ಪ್ರತಿ ಗುರು ವಾರ ಎಪಿಎಂಸಿ ಪ್ರಾಂಗಣದಲ್ಲಿ ಭರ್ಜರಿ ಸಂತೆ ನಡೆಯುತ್ತದೆ. ಹಳ್ಳಿ ಸಂತೆಯೂ ಆರಂಭವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…