Andolana originals

ಉದ್ಘಾಟನೆಗಾಗಿ ಕಾದಿರುವ ಹಳ್ಳಿಸಂತೆ ಕಟ್ಟಡ

ತೆರಕಣಾಂಬಿಯಲ್ಲಿ 32 ಮಳಿಗೆಗಳ ಹಳ್ಳಿ ಸಂತೆ ; ಮಹಿಳೆಯರು ತಯಾರಿಸಿದ ವಸ್ತುಗಳ ಮಾರಾಟಕ್ಕೆ ಅವಕಾಶ

ರವಿ ಎನ್. ಲಕ್ಕೂರು

ತೆರಕಣಾಂಬಿ (ಗುಂಡ್ಲುಪೇಟೆ ತಾ. ): ಹೋಬಳಿ ಕೇಂದ್ರವಾದ ತೆರಕಣಾಂಬಿ ಗ್ರಾಮ ದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನ ಗಳಿಗೆ ಮಾರುಕಟ್ಟೆ ಕಲ್ಪಿಸಲು ನಿರ್ಮಿಸಿರುವ ಹಳ್ಳಿ ಸಂತೆ ಕಟ್ಟಡ ಉದ್ಘಾಟನೆಗೆ ಸಜ್ಜುಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಫಲಾನುಭವಿಗಳ ಸಮಾವೇಶದಲ್ಲಿ ಹಳ್ಳಿ ಸಂತೆಯನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ, ಸಮಾವೇಶ ಮುಂದೂಡಿದ್ದರಿಂದ ಉದ್ಘಾಟನೆ ಆಗಲಿಲ್ಲ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಎನ್‌ಆರ್‌ಎಲ್‌ಎಂ ಯೋಜನೆಯಡಿ ಈ ಹಳ್ಳಿ ಸಂತೆ ಕಟ್ಟಡವನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದಿಂದ (ಕೆಆರ್‌ಐಡಿಎಲ್) ನಿರ್ಮಾಣ ಮಾಡಲಾಗಿದೆ. ಇದರ ಅಂದಾಜು ವೆಚ್ಚ ೫೨ ಲಕ್ಷ ರೂ. ಗಳಾಗಿದೆ.

ತೆರಕಣಾಂಬಿ-ಚಾಮರಾಜನಗರ ಮುಖ್ಯ ರಸ್ತೆಯ ಬದಿಯಲ್ಲೇ (ತೆರಕಣಾಂಬಿ ಪೊಲೀಸ್ ಠಾಣೆ ಸಮೀಪ) ೩೨ ಮಳಿಗೆಗಳ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯಗಳು, ನೀರಿನ ವ್ಯವಸ್ಥೆ ಹಾಗೂ ನೀರಿನ ತೊಟ್ಟಿಯನ್ನು ನಿರ್ಮಿಸಲಾಗಿದೆ. ಹಳ್ಳಿಸಂತೆ ಮುಂಭಾಗ ಕೌಂಟರ್‌ಅನ್ನು ತೆರೆಯಲಾಗಿದೆ.

ತೆರಕಣಾಂಬಿ ಹೋಬಳಿಯ ೯ ಗ್ರಾಪಂ ವ್ಯಾಪ್ತಿಯಲ್ಲಿರುವ ಎನ್‌ಆರ್‌ಎಲ್‌ಎಂ ಒಕ್ಕೂ ಟದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಈ ಮಳಿಗೆಗಳನ್ನು ನೀಡಲಾಗುತ್ತದೆ. ಎನ್‌ಆರ್ ಎಲ್‌ಎಂ ಯೋಜನೆಯಡಿ ಸಾಲ ಪಡೆದು ಸ್ವ ಸಹಾಯ ಸಂಘಗಳ ಮಹಿಳೆಯರು ತಯಾರಿ ಸಿದ ಹಪ್ಪಳ, ಉಪ್ಪಿನಕಾಯಿ, ಬಟ್ಟೆಗಳು, ಕರಕು ಶಲ ವಸ್ತುಗಳು, ತಿಂಡಿ-ತಿನಿಸುಗಳು, ಅಲಂಕಾ ರಿಕ ವಸ್ತುಗಳನ್ನು ಹಳ್ಳಿ ಸಂತೆ ಕಟ್ಟಡದ ಮಳಿಗೆ ಗಳಲ್ಲಿ ಮಾರಾಟ ಮಾಡಲು ಅವಕಾಶ ನೀಡ ಲಾಗುವುದು. ಮಹಿಳೆಯರು ವ್ಯಾಪಾರ ಚಟು ವಟಿಕೆಗಳಲ್ಲಿ ಪಾಲ್ಗೊಂಡು ಆರ್ಥಿಕವಾಗಿ ಸ್ವಾವ ಲಂಬಿಗಳಾಗಲಿ ಎಂಬುದು ಹಳ್ಳಿ ಸಂತೆಯ ಉದ್ದೇಶವಾಗಿದೆ. ಮಳಿಗೆಗಳಿಗೆ ಬಾಡಿಗೆ ನಿಗದಿ ಮಾಡಿಲ್ಲ. ಕಟ್ಟಡದ ನಿರ್ವಹಣೆಗೆ ಶುಲ್ಕ ಪಡೆಯಲಾಗುತ್ತದೆ. ವಾಣಿಜ್ಯ ಕೇಂದ್ರ ವಾದ ತೆರಕಣಾಂಬಿ ಗ್ರಾಮದಲ್ಲಿ ಪ್ರತಿ ಗುರು ವಾರ ಎಪಿಎಂಸಿ ಪ್ರಾಂಗಣದಲ್ಲಿ ಭರ್ಜರಿ ಸಂತೆ ನಡೆಯುತ್ತದೆ. ಹಳ್ಳಿ ಸಂತೆಯೂ ಆರಂಭವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

9 hours ago