Andolana originals

ಕಾಡುಪ್ರಾಣಿಗಳ ಹಾವಳಿ ತಡೆಗೆ ಜಾಲರಿಯುಳ್ಳ ತಂತಿಬೇಲಿ

ಮಂಜು ಕೋಟೆ

ಕೋಟೆ: ರೈತ, ಗುತ್ತಿಗೆದಾರ ದೊರೆದಾಸ್‌ರಿಂದ ಹಲವರ ಜಮೀನುಗಳಿಗೆ ಜಾಲರಿ ತಂತಿಬೇಲಿ ಅಳವಡಿಕೆ

ಎಚ್.ಡಿ.ಕೋಟೆ: ರೈತರು ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಿ ಬೆಳೆಯನ್ನು ಉಳಿಸಿಕೊಳ್ಳಲು ಹೊಸ ರೀತಿಯ ತಂತಿ ಬೇಲಿಗೆ ಮೊರೆ ಹೋಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿರುವುದರಿಂದ ಕಾಡುಪ್ರಾಣಿಗಳ ಹಾವಳಿ ಇದೆ. ರೈತರ ಜಮೀನುಗಳಿಗೆ ಒಂದಲ್ಲ ಒಂದು ಪ್ರಾಣಿಗಳು ಬಂದು ಬೆಳೆ ತಿಂದು ನಾಶಪಡಿಸುತ್ತಿವೆ.

ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲ್ಲಿಯವರೆಗೆ ಸೋಲಾರ್ ಹಾಗೂ ಇನ್ನಿತರ ತಂತಿ ಬೇಲಿಗಳನ್ನು ಲಕ್ಷಾಂತರ ರೂ. ಖರ್ಚು ಮಾಡಿ ಅಳವಡಿಸಲಾಗುತ್ತಿತ್ತು. ಆದರೆ, ಜಿಂಕೆ, ಹಂದಿ ಇನ್ನಿತರ ಪ್ರಾಣಿಗಳು ಬುದ್ಧಿವಂತಿಕೆಯಿಂದ ಜಮೀನಿಗೆ ಲಗ್ಗೆ ಇಟ್ಟು ಬೆಳೆಗಳನ್ನು ತಿಂದು ನಾಶ ಮಾಡುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಅರಣ್ಯ ಇಲಾಖೆಯವರು ಕೋಟ್ಯಂತರ ರೂ. ವೆಚ್ಚದಲ್ಲಿ ಕಾಡಂಚಿನಲ್ಲಿ ಅಳವಡಿಸಿರುವ ರೈಲ್ವೆ ಕಂಬಿ ತಡೆಗೋಡೆಗಳನ್ನೂ ದಾಟಿ ಕೆಲವೊಂದು ಪ್ರಾಣಿಗಳು ಗ್ರಾಮ ಮತ್ತು ಜಮೀನಿಗೆ ಬರುತ್ತಿವೆ.

ಸಾಲ ಮಾಡಿ ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶ ಮಾಡಿದರೆ ರೈತರ ಬದುಕು ಚಿಂತಾಜನಕವಾಗಲಿದೆ. ಹೀಗಾಗಿ ರೈತರು ಮತ್ತು ಗ್ರಾಮಸ್ಥರು ರೈಲ್ವೆ ಕಂಬಿಗೆ ಮತ್ತು ಪ್ರತ್ಯೇಕವಾಗಿ ಜಾಲರಿಯ ರೀತಿಯ ತಂತಿ ಬೇಲಿಯನ್ನು ಕೆಲವು ಭಾಗಗಳಲ್ಲಿ ಅಳವಡಿಸಿಕೊಂಡಿದ್ದಾರೆ. ಇಂತಹ ಸ್ಥಳದಲ್ಲಿ ವನ್ಯಪ್ರಾಣಿಗಳ ಹಾವಳಿ ಕಡಿಮೆಯಾಗಿದೆ.

ರೈತ ಮತ್ತು ಗುತ್ತಿಗೆದಾರರಾಗಿರುವ ದಾಸನಪುರದ ದೊರೆದಾಸ್ ಮತ್ತಿತರರು ರೈತರ ಜಮೀನು ಗಳಿಗೆ ಜಾಲರಿಯ ತಂತಿ ಬೇಲಿಯನ್ನು ಅಳವಡಿಸಿದ್ದು, ಅನೇಕ ರೈತರು ಇಂತಹ ಯೋಜನೆಯ ಮೂಲಕ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳಿಗೆ ಸಹಾಯಧನ ನೀಡಲು ಮುಂದಾಗುತ್ತಿವೆ.

ಅದೇ ರೀತಿ ರೈತರು ತಮ್ಮ ಜಮೀನುಗಳಲ್ಲಿ ಇತ್ತೀಚೆಗೆ ಅಳವಡಿಸಿಕೊಳ್ಳು ತ್ತಿರುವ ಇಂತಹ ಜಾಲರಿಯ ತಂತಿಬೇಲಿಗೆ ಕೂಡ ಸಹಾಯಧನ ನೀಡಿದರೆ ಮತ್ತಷ್ಟು ರೈತರು ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅನುಕೂಲವಾಗಲಿದೆ ಎನ್ನುವುದು ಸ್ಥಳೀಯರ ಆಶಯವಾಗಿದೆ.

” ಕಾಡಂಚಿನಲ್ಲಿ ನಮ್ಮ ಗ್ರಾಮ ಮತ್ತು ಜಮೀನುಗಳಿರು ವುದರಿಂದ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದೆ. ನಿರಂತರವಾಗಿ ಬೆಳೆ ನಾಶ ಮಾಡುತ್ತಿದ್ದರಿಂದ ನಾವು ಕಂಗಾಲಾಗಿದ್ದೆವು. ಈಗ ಹೊಸ ರೀತಿಯ ಜಾಲರಿಯುಳ್ಳ ತಂತಿ ಬೇಲಿ ಅಳವಡಿಸುತ್ತಿದ್ದು, ಪ್ರಾಣಿಗಳ ಹಾವಳಿ ಕಡಿಮೆ ಯಾಗಿದೆ. ಇದನ್ನು ರೈತರಿಗೆ ಕಡಿಮೆ ದರದಲ್ಲಿ ಒದಗಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ.”

ದೊರೆದಾಸ್, ರೈತ ಮುಖಂಡ, ಗುತ್ತಿಗೆದಾರ

” ಅನೇಕ ಜಮೀನುಗಳಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಸಿದ್ದರೂ ಕೆಲವೊಂದು ಪ್ರಾಣಿಗಳು ನುಗ್ಗಿ ಬೆಳೆಗಳನ್ನು ಸಂಪೂರ್ಣ ನಾಶ ಮಾಡುತ್ತಿವೆ. ಅದಕ್ಕಾಗಿ ಹೊಸ ರೀತಿಯ ಜಾಲರಿಯ ತಂತಿ ಬೇಲಿಯನ್ನು ದೊರೆದಾಸ್ ಅವರ ಮೂಲಕ ಅಳವಡಿಸಿಕೊಂಡಿದ್ದೇವೆ. ಇದರಿಂದ ಕೆಲವೊಂದು ಪ್ರಾಣಿಗಳ ಹಾವಳಿ ಕಡಿಮೆಯಾಗಿದೆ.”

ವೆಂಕಟೇಶ್, ರೈತ, ಬಡಗಲಪುರ

ಆಂದೋಲನ ಡೆಸ್ಕ್

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

7 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

7 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

8 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

8 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

8 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

9 hours ago