Andolana originals

ಆಬಲವಾಡಿ ತೋಪಿನ ತಿಮ್ಮಪ್ಪ ದೇವರಿಗೆ ಹರಿಸೇವೆ

ಎಂ.ಆರ್.ಚಕ್ರಪಾಣಿ

ಸಹಸ್ರಾರು ಜನರಿಗೆ ತಾವರೆ ಎಲೆಯಲ್ಲಿ ಪಂಕ್ತಿ ಊಟ

ಮದ್ದೂರು: ಶ್ರೀ ಮಹಾವಿಷ್ಣು ಲಕ್ಷ್ಮಿದೇವಿಯನ್ನು ಅರಸಿಕೊಂಡು ಬಂದ ಪುಣ್ಯ ಕ್ಷೇತ್ರ ತಾಲ್ಲೂಕಿನ ಆಬಲವಾಡಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ತೋಪಿನ ತಿಮ್ಮಪ್ಪ ಸ್ವಾಮಿ ದೇಗುಲಕ್ಕೆ ಸುಮಾರು ೮೨೩ ವರ್ಷಗಳ ಇತಿಹಾಸವಿದ್ದು, ಇಷ್ಟಾರ್ಥಗಳನ್ನು ಈಡೇರಿಸುವ ದೈವವೆಂದು ಜನರಲ್ಲಿ ನಂಬಿಕೆ ನೆಲೆಸಿದೆ.

ದೇಗುಲಕ್ಕೆ ಆಗಮಿಸಿ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿದರೆ  ಇಷ್ಟಾರ್ಥಗಳು ನೆರವೇರುತ್ತವೆ ಎಂಬ ಅಪಾರ ನಂಬಿಕೆ ಜನರಲ್ಲಿದೆ. ಮಂಡ್ಯ, ಬೆಂಗಳೂರು, ಮೈಸೂರು, ರಾಮನಗರ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ  ತಿಮ್ಮಪ್ಪ ನಿಗೆ ಅಪಾರವಾದ ಭಕ್ತರು ಇದ್ದಾರೆ. ಶನಿವಾರ ಮತ್ತು ಬುಧವಾರ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತವೆ.ಪ್ರತಿ ವರ್ಷದ ಆಷಾಢ ಮಾಸದಲ್ಲಿ ತೋಪಿನ ತಿಮ್ಮಪ್ಪನ ಹರಿಸೇವೆ ಹಾಗೂ ಕಾರ್ತಿಕ ಮಾಸದ ಕಡೆಯ ಸೋಮವಾರ ದೀಪೋತ್ಸವ, ವೈಕುಂಠ ಏಕಾದಶಿ, ರಥ ಸಪ್ತಮಿ ಸೇರಿದಂತೆ ವಿಶೇಷ ದಿನಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ದೇಗುಲದಲ್ಲಿ ಹಮ್ಮಿಕೊಳ್ಳುವುದು ವಿಶೇಷವಾಗಿದೆ. ಇಂತಹ ವಿಶೇಷ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಜನರು ಆಗಮಿಸಿ ಹರಕೆ ಸಲ್ಲಿಸುವುದು ವಾಡಿಕೆ.

ತಾವರೆ ಎಲೆ ಊಟ ಇಲ್ಲಿನ ವಿಶೇಷ: ಸಾಮಾನ್ಯವಾಗಿ ದೇವರ ಹರಿ ಸೇವೆಗೆ ಇಸ್ತ್ರಿ ಎಲೆಯಲ್ಲಿ ಊಟ ಕೊಡುವುದು ವಿಶೇಷ. ಆಬಲವಾಡಿ ತೋಪಿನ ದೇವಸ್ಥಾನದಲ್ಲಿ ನಡೆಯುವ ಹರಿ ಸೇವೆಯಲ್ಲಿ ಲಕ್ಷ್ಮಿದೇವಿಗೆ ತಾವರೆ ಎಲೆಯಲ್ಲಿ ನೈವೇದ್ಯ ನೆರವೇರಿಸಿ, ಹರಿಸೇವೆಗೆ ಆಗಮಿಸುವ ಸಹಸ್ರಾರು ಜನರಿಗೂ ತಾವರೆ ಎಲೆಯಲ್ಲಿ ಊಟ ಬಡಿಸಲಾಗುತ್ತದೆ. ತಾವರೆ ಎಲೆಯನ್ನು ಮದ್ದೂರು ಮುಂತಾದ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿರುವ ಕೆರೆಗಳಿಗೆ ಹೋಗಿ ಸಂಗ್ರಹಿಸಲಾಗುತ್ತದೆ. ಹರಿಸೇವೆಗೆ ಗ್ರಾಮಸ್ಥರು, ದಾನಿಗಳು ತಾವರೆಎಲೆ, ಅಕ್ಕಿ, ಬೇಳೆ, ಸೌದೆ, ಬೆಲ್ಲ, ತುಪ್ಪ ಇನ್ನಿತರ ವಸ್ತುಗಳನ್ನು ಕಾಣಿಕೆ ರೂಪದಲ್ಲಿ ನೀಡುವುದಲ್ಲದೆ, ದೇವರ ಆರ್ಥಿಕ ಸಹಾಯವನ್ನೂ ಮಾಡುತ್ತಾರೆ. ಹರಿಸೇವೆಯಲ್ಲಿ ಆಬಲವಾಡಿ ಗ್ರಾಮಸ್ಥರು ಒಟ್ಟಾಗಿ ಸೇರಿ ಸಹಸ್ರಾರು ಜನರಿಗೆ ಊಟ ಉಣಬಡಿಸುವುದನ್ನು ನೋಡುವುದೇ ಚೆಂದ.

ಕಾರ್ಯಕ್ರಮದ ವಿವರ: ಆಬಲವಾಡಿಯ ತೋಪಿನ ತಿಮ್ಮಪ್ಪ ದೇಗುಲದಲ್ಲಿ ಜು.೧೨ರ ಶನಿವಾರ ಹರಿಸೇವೆ ನಡೆದಿದ್ದು, ಜು.೧೩ರ ಭಾನುವಾರ ಕೂಡ ಹರಿಸೇವೆ ಸಡಗರ ಸಂಭ್ರಮದಿಂದ ನಡೆಯಲಿದೆ. ತೋಪಿನ ತಿಮ್ಮಪ್ಪ ಕಲ್ಯಾಣ ಮಂದಿರ ಸೇವಾ ಟ್ರಸ್ಟ್ ಹಾಗೂ ಭಕ್ತಾದಿಗಳು ಹಾಗೂ ಗ್ರಾಮಸ್ಥರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಜು.೧೨ರಂದು ಶನಿವಾರ ಮಧ್ಯಾಹ್ನ ಮೀಸಲು ನೀರು ತರುವುದು, ೨ ಗಂಟೆಗೆ ತಲೆ ಮುಡಿ, ಮಹಾ ಮಂಗಳಾರತಿ, ರಾತ್ರಿ ೬ ಗಂಟೆಗೆ ಬಂಡಿ ಮರೆವಣಿಗೆ, ಮಧ್ಯರಾತ್ರಿ ೧೨ ಗಂಟೆಗೆ ಬಾಯಿ ಬೀಗ, ರಾತ್ರಿ ೧ ಗಂಟೆಗೆ ಸೋಮನ ಕುಣಿತ, ಜವಳಿ ಕುಣಿತ, ಮಂಗಳ ವಾದ್ಯ, ಮದ್ದಿನ ತಮಾಷೆ ಮತ್ತು ತಮಟೆಗಳೊಂದಿಗೆ ತಿಮ್ಮಪ್ಪ ದೇವರ ಉತ್ಸವ ಮೂರ್ತಿ ಶ್ರೀಲಕ್ಷ್ಮಿ ದೇವಿ, ಶ್ರೀಬಂಕದ ಘಟ್ಟಮ್ಮ, ಮದ್ದೇನಟ್ಟಮ್ಮ ದೇವರುಗಳ ಭವ್ಯ ಮೆರವಣಿಗೆ ಜರುಗಿತು. ಜು.೧೩ರ ಭಾನುವಾರ ದೇಗುಲದ ಆವರಣದಲ್ಲಿ ಸಹಸ್ರಾರು ಜನರಿಗೆ ಬೆಳಿಗ್ಗೆ ೮ ಯಿಂದ ಮಧ್ಯಾಹ್ನ ೧೨ ಗಂಟೆಯ ವರೆಗೆ ತಾವರೆ ಎಲೆಯಲ್ಲಿ ಅನ್ನಸಂತರ್ಪಣೆ (ಹರಿಸೇವೆ) ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಒಂದೇ ಬಾರಿ ೨೦ ರಿಂದ ೩೦ ಸಾವಿರ ಜನರಿಗೆ ಊಟ ಬಡಿಸುವುದು ವಿಶೇಷವಾಗಿದ್ದು,ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಬಲವಾಡಿ ಗ್ರಾಮಸ್ಥರು, ಯಜಮಾನರು, ತೋಪಿನ ತಿಮ್ಮಪ್ಪ ಕಲ್ಯಾಣ ಮಂದಿರ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಟ್ರಸ್ಟಿಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮನವಿ ಮಾಡಿದ್ದಾರೆ

” ತೋಪಿನತಿಮ್ಮಪ್ಪ ನಮ್ಮ ಮನೆ ದೇವರು, ಚಿಕ್ಕವಯಸ್ಸಿನಿಂದಲೂ ದೇಗುಲಕ್ಕೆ ತೆರಳಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸುತ್ತೇವೆ. ದೇಗುಲಕ್ಕೆ ಬಂದು ಶ್ರದ್ಧಾಭಕ್ತಿಯಿಂದಪೂಜಿಸಿದರೆ ಇಷ್ಟಾರ್ಥಗಳು ನೆರೆವೇರುತ್ತವೆ.”

-ಸುರೇಶ್, ಅಧ್ಯಕ್ಷರು, ಆಬಲವಾಡಿ ಗ್ರಾ.ಪಂ.

ಆಂದೋಲನ ಡೆಸ್ಕ್

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

3 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

3 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

3 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago