Andolana originals

ಮಂಜಿನ ನಗರಿಯಲ್ಲಿ ಸಮೃದ್ಧವಾದ ನೀರಿನ ಸಂಗ್ರಹ

• ನವೀನ್ ಡಿಸೋಜ

ಸುಸ್ಥಿತಿಯಲ್ಲಿರುವ ಮೋಟಾರ್‌ಗಳು; ಈ ಬಾರಿ ಮಡಿಕೇರಿ ನಿವಾಸಿಗಳಿಗಿಲ್ಲ ನೀರಿನ ಚಿಂತೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಬೇಸಿಗೆಗೂ ಮುನ್ನವೇ ಸೆಕೆಯಿಂದ ತತ್ತರಿಸುವಂತಾಗಿದೆ. ಆದರೆ ಮಂಜಿನನಗರಿಯಲ್ಲಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲವೆಂದು ಅಧಿಕಾರಿಗಳು ಅಭಯ ನೀಡಿದ್ದಾರೆ. ಕುಂಡಾಮೇಸ್ತಿ ಮತ್ತು ಕೂಟುಹೊಳೆ ಸೇರಿದಂತೆ ಮಡಿಕೇರಿ ನಗರಕ್ಕೆ ನೀರು ಪೂರೈಸುವ ಎಲ್ಲ ಸಂಗ್ರಹಗಾರಗಳಲ್ಲಿಯೂ ನೀರು ಸಮೃದ್ಧವಾಗಿದ್ದು, ಬೇಸಿಗೆಯಲ್ಲಿ ನಗರ ನಿವಾಸಿಗಳಿಗೆ ನೀರಿನ ಚಿಂತೆ ದೂರಾಗಿದೆ.

ಈ ಬಾರಿ ಫೆಬ್ರವರಿ ತಿಂಗಳಲ್ಲಿಯೇ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದ್ದು, ಬೇಸಿಗೆಯ ವಾತಾವರಣ ಕಂಡುಬರುತ್ತಿದೆ. ಹೀಗಾಗಿ ಬೇಸಿಗೆಯಲ್ಲಿ ಅಲ್ಲಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಆತಂಕ ಶುರುವಾಗಿತ್ತು. ಆದರೆ ಮಡಿಕೇರಿ ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ನಗರಸಭೆ ಮಾಹಿತಿ ನೀಡಿದೆ. ಸದ್ಯ ಎಲ್ಲೆಡೆ ನೀರಿನ ಸಂಗ್ರಹವಿದ್ದು, ಬೇಸಿಗೆಗೆ ಸಮಸ್ಯೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ನಗರಸಭೆ ಆಯುಕ್ತ ರಮೇಶ್ ತಿಳಿಸಿದ್ದಾರೆ.

ಕಳೆದ ಮಾನ್ಸೂನ್‌ನಲ್ಲಿ ಮಡಿಕೇರಿ ನಗರದಲ್ಲಿ ಹಿಂದಿನ ವರ್ಷ ಮತ್ತು ಅದರ ಹಿಂದಿನ ವರ್ಷ ಬೇಸಿಗೆಯಲ್ಲಿಯೂ ಮಡಿಕೇರಿಯಲ್ಲಿ ನೀರಿಗೆ ಬರವಿರಲಿಲ್ಲ. ಆದರೆ 2023ರ ಬೇಸಿಗೆಯಲ್ಲಿ ಮೋಟಾರ್ ಕೈಕೊಟ್ಟ ಪರಿಣಾಮ ಹಲವು ದಿನಗಳ ಕಾಲ ಮಡಿಕೇರಿ ನಿವಾಸಿಗಳು ಪರದಾಡುವ ಪರಿಸ್ಥಿತಿ ಮಡಿಕೇರಿ ನಗರಕ್ಕೆ ನೀರು ಪೂರೈಸುವ ಕುಂಡಾಮೇಸ್ಟ್ರಿಯಲ್ಲಿ ನೀರಿನ ಸಂಗ್ರಹ ಉತ್ತಮವಾಗಿರುವುದು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಜಲ ಒಳಹರಿವೂ ಉತ್ತಮವಾಗಿದೆ. ಮೂಲಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ. ಮುಖ್ಯವಾಗಿ ಮಡಿಕೇರಿ ನಗರಕ್ಕೆ ಶೇ.70ರಷ್ಟು ನೀರು ಪೂರೈಸುವ ಕೂಟು ಹೊಳೆಯಲ್ಲಿ ಇನ್ನೂ ನೀರಿನ ಸಂಗ್ರಹವಿದ್ದು, ನೀರು ಬತ್ತಿಹೋಗದಂತೆ ನೋಡಿಕೊಳ್ಳುತ್ತಿರುವ ನಗರಸಭೆ, ಕುಂಡಾಮೇಸ್ತ್ರಿ ಕಿರು ಅಣೆಕಟ್ಟೆಯಿಂದ ಈಗಾಗಲೇ ಕೂಟುಹೊಳೆಗೆ ನೀರು ಹರಿಸುತ್ತಿದೆ. 300 ಎಚ್‌ ಪಿ ಸಾಮರ್ಥ್ಯದ ಮೂರು ಪಂಪ್‌ಗಳ ಮೂಲಕ ನೀರು ಹರಿಸಲಾಗುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ. ಕುಂಡಾಮೇಸ್ತ್ರಿಯಲ್ಲಿಯೂ ನೀರು ಸಮೃದ್ಧವಾಗಿದ್ದು, ಜಲಮೂಲಗಳಿಂದ ನೀರಿಗಾಗಿ ನಿರ್ಮಾಣವಾಗಿತ್ತು.

2024ರ ಬೇಸಿಗೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವಧಿಗಿಂತ ಮೊದಲೇ ಕೂಟುಹೊಳೆ ಬತ್ತಿತ್ತು. ನಿರಂತರವಾಗಿ ಕುಂಡಾಮೇಷ್ಠಿಯಿಂದ ನೀರನ್ನು ಪಂಪ್ ಮಾಡಲಾಗುತ್ತಿತ್ತಾದರೂ ಮೋಟಾರ್

ಕೆಟ್ಟುಹೋಗಿ ನೀರಿಗೆ ಸಮಸ್ಯೆ ಎದುರಾಗಿತ್ತು. ನಗರದ ಕೆಲ ಬಡಾವಣೆಗಳಿಗೆ 2 ದಿನಗಳಿಗೊಮ್ಮೆ ನೀರು ಪೂರೈಸುವ ಮೂಲಕ ನಗರಸಭೆ ಸಮಸ್ಯೆಯನ್ನು ನಿಭಾಯಿಸಿತ್ತು. ಹೀಗಾಗಿ ಈ ಬಾರಿ ಮೋಟಾರ್ ಸಮಸ್ಯೆ ಬಾರದಂತೆ ಎಚ್ಚರವಹಿಸುವುದು ನಗರಸಭೆಗೆ ಸವಾಲಾಗಿದೆ.

ಕೂಟು ಹೊಳೆಯಲ್ಲಿರುವ 300 ಎಚ್‌ ಪಿ ಸಾಮರ್ಥ್ಯದ ಮೂರು ಮೋಟಾರ್‌ಗಳು, ಕುಂಡಾಮೇಸ್ತಿಯಲ್ಲಿರುವ ಅಷ್ಟೇ ಸಾಮರ್ಥ್ಯದ ಮೂರು ಮೋಟಾರ್‌ಗಳನ್ನು ಇತ್ತೀಚೆಗೆ ಸುಸ್ಥಿತಿಯಲ್ಲಿದ್ದು, ಸದ್ಯಕ್ಕೆ ಯಾವುದೇ ಸಮಸ್ಯೆ ಪರಿಶೀಲಿಸಲಾಗಿದ್ದು, ಸುಸ್ಥಿತಿಯಲ್ಲಿವೆ. ಇಲ್ಲ ಎಂದು ನಗರಸಭೆ ಆಯುಕ್ತ ರಮೇಶ್ ಹಾಗೆಯೇ ರೋಷಾನಾರ, ಪಂಪಿನ ಕೆರೆ ಮತ್ತು ತಿಳಿಸಿದ್ದಾರೆ.

ಮಾನ್ಸೂನ್‌ನಲ್ಲಿ ಮಳೆ ಉತ್ತಮವಾಗಿದ್ದ ಹಿನ್ನೆಲೆಯಲ್ಲಿ ಕೂಟುಹೊಳೆಯಲ್ಲಿ ಇನ್ನೂ ನೀರಿದೆ. ಜತೆಗೆ ಕುಂಡಾ ಮೇಸ್ಟ್ರಿಯಿಂದಲೂ ನಿರಂತರವಾಗಿ ನೀರು ಹರಿಸುತ್ತಿದ್ದೇವೆ. ಮಡಿಕೇರಿ ನಗರದ ಅವಶ್ಯಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸಂಗ್ರಹವಿದ್ದು, ಈ ಬಾರಿ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗುವುದಿಲ್ಲ.
-ಎಚ್.ಆರ್.ರಮೇಶ್, ಪೌರಾಯುಕ್ತ.

ಮಡಿಕೇರಿ ನಗರ ಸುಮಾರು 39,000 ಜನಸಂಖ್ಯೆಯನ್ನು ಹೊಂದಿದ್ದು, ಪ್ರತಿದಿನ 52.7 ಲಕ್ಷ ಲೀಟರ್ ನೀರಿನ ಬೇಡಿಕೆಯಿದೆ. ವಲಸಿಗರ, ಪ್ರವಾಸಿಗರ ನೀರಿನ ಬೇಡಿಕೆ 0.225 ಮೆಗಾ ಲೀ. ಇದ್ದು, ಶೇ.15ರಷ್ಟು ಸೋರಿಕೆ ಸೇರಿದಂತೆ ಒಟ್ಟು 65 ಲಕ್ಷ ಲೀಟರ್ ನೀರಿನ ಬೇಡಿಕೆಯಿದೆ. ಸದ್ಯ ಇಷ್ಟು ಪ್ರಮಾಣದ ನೀರು ಪೂರೈಕೆಯಾಗುತ್ತಿದ್ದು, ಈ ಬಾರಿ ನೀರಿನ ಸಮಸ್ಯೆ ಉಂಟಾಗುವುದಿಲ್ಲವೆಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago