Andolana originals

ಮಂಜಿನ ನಗರಿಯಲ್ಲಿ ಸಮೃದ್ಧವಾದ ನೀರಿನ ಸಂಗ್ರಹ

• ನವೀನ್ ಡಿಸೋಜ

ಸುಸ್ಥಿತಿಯಲ್ಲಿರುವ ಮೋಟಾರ್‌ಗಳು; ಈ ಬಾರಿ ಮಡಿಕೇರಿ ನಿವಾಸಿಗಳಿಗಿಲ್ಲ ನೀರಿನ ಚಿಂತೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಬೇಸಿಗೆಗೂ ಮುನ್ನವೇ ಸೆಕೆಯಿಂದ ತತ್ತರಿಸುವಂತಾಗಿದೆ. ಆದರೆ ಮಂಜಿನನಗರಿಯಲ್ಲಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲವೆಂದು ಅಧಿಕಾರಿಗಳು ಅಭಯ ನೀಡಿದ್ದಾರೆ. ಕುಂಡಾಮೇಸ್ತಿ ಮತ್ತು ಕೂಟುಹೊಳೆ ಸೇರಿದಂತೆ ಮಡಿಕೇರಿ ನಗರಕ್ಕೆ ನೀರು ಪೂರೈಸುವ ಎಲ್ಲ ಸಂಗ್ರಹಗಾರಗಳಲ್ಲಿಯೂ ನೀರು ಸಮೃದ್ಧವಾಗಿದ್ದು, ಬೇಸಿಗೆಯಲ್ಲಿ ನಗರ ನಿವಾಸಿಗಳಿಗೆ ನೀರಿನ ಚಿಂತೆ ದೂರಾಗಿದೆ.

ಈ ಬಾರಿ ಫೆಬ್ರವರಿ ತಿಂಗಳಲ್ಲಿಯೇ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದ್ದು, ಬೇಸಿಗೆಯ ವಾತಾವರಣ ಕಂಡುಬರುತ್ತಿದೆ. ಹೀಗಾಗಿ ಬೇಸಿಗೆಯಲ್ಲಿ ಅಲ್ಲಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಆತಂಕ ಶುರುವಾಗಿತ್ತು. ಆದರೆ ಮಡಿಕೇರಿ ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ನಗರಸಭೆ ಮಾಹಿತಿ ನೀಡಿದೆ. ಸದ್ಯ ಎಲ್ಲೆಡೆ ನೀರಿನ ಸಂಗ್ರಹವಿದ್ದು, ಬೇಸಿಗೆಗೆ ಸಮಸ್ಯೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ನಗರಸಭೆ ಆಯುಕ್ತ ರಮೇಶ್ ತಿಳಿಸಿದ್ದಾರೆ.

ಕಳೆದ ಮಾನ್ಸೂನ್‌ನಲ್ಲಿ ಮಡಿಕೇರಿ ನಗರದಲ್ಲಿ ಹಿಂದಿನ ವರ್ಷ ಮತ್ತು ಅದರ ಹಿಂದಿನ ವರ್ಷ ಬೇಸಿಗೆಯಲ್ಲಿಯೂ ಮಡಿಕೇರಿಯಲ್ಲಿ ನೀರಿಗೆ ಬರವಿರಲಿಲ್ಲ. ಆದರೆ 2023ರ ಬೇಸಿಗೆಯಲ್ಲಿ ಮೋಟಾರ್ ಕೈಕೊಟ್ಟ ಪರಿಣಾಮ ಹಲವು ದಿನಗಳ ಕಾಲ ಮಡಿಕೇರಿ ನಿವಾಸಿಗಳು ಪರದಾಡುವ ಪರಿಸ್ಥಿತಿ ಮಡಿಕೇರಿ ನಗರಕ್ಕೆ ನೀರು ಪೂರೈಸುವ ಕುಂಡಾಮೇಸ್ಟ್ರಿಯಲ್ಲಿ ನೀರಿನ ಸಂಗ್ರಹ ಉತ್ತಮವಾಗಿರುವುದು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಜಲ ಒಳಹರಿವೂ ಉತ್ತಮವಾಗಿದೆ. ಮೂಲಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ. ಮುಖ್ಯವಾಗಿ ಮಡಿಕೇರಿ ನಗರಕ್ಕೆ ಶೇ.70ರಷ್ಟು ನೀರು ಪೂರೈಸುವ ಕೂಟು ಹೊಳೆಯಲ್ಲಿ ಇನ್ನೂ ನೀರಿನ ಸಂಗ್ರಹವಿದ್ದು, ನೀರು ಬತ್ತಿಹೋಗದಂತೆ ನೋಡಿಕೊಳ್ಳುತ್ತಿರುವ ನಗರಸಭೆ, ಕುಂಡಾಮೇಸ್ತ್ರಿ ಕಿರು ಅಣೆಕಟ್ಟೆಯಿಂದ ಈಗಾಗಲೇ ಕೂಟುಹೊಳೆಗೆ ನೀರು ಹರಿಸುತ್ತಿದೆ. 300 ಎಚ್‌ ಪಿ ಸಾಮರ್ಥ್ಯದ ಮೂರು ಪಂಪ್‌ಗಳ ಮೂಲಕ ನೀರು ಹರಿಸಲಾಗುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ. ಕುಂಡಾಮೇಸ್ತ್ರಿಯಲ್ಲಿಯೂ ನೀರು ಸಮೃದ್ಧವಾಗಿದ್ದು, ಜಲಮೂಲಗಳಿಂದ ನೀರಿಗಾಗಿ ನಿರ್ಮಾಣವಾಗಿತ್ತು.

2024ರ ಬೇಸಿಗೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವಧಿಗಿಂತ ಮೊದಲೇ ಕೂಟುಹೊಳೆ ಬತ್ತಿತ್ತು. ನಿರಂತರವಾಗಿ ಕುಂಡಾಮೇಷ್ಠಿಯಿಂದ ನೀರನ್ನು ಪಂಪ್ ಮಾಡಲಾಗುತ್ತಿತ್ತಾದರೂ ಮೋಟಾರ್

ಕೆಟ್ಟುಹೋಗಿ ನೀರಿಗೆ ಸಮಸ್ಯೆ ಎದುರಾಗಿತ್ತು. ನಗರದ ಕೆಲ ಬಡಾವಣೆಗಳಿಗೆ 2 ದಿನಗಳಿಗೊಮ್ಮೆ ನೀರು ಪೂರೈಸುವ ಮೂಲಕ ನಗರಸಭೆ ಸಮಸ್ಯೆಯನ್ನು ನಿಭಾಯಿಸಿತ್ತು. ಹೀಗಾಗಿ ಈ ಬಾರಿ ಮೋಟಾರ್ ಸಮಸ್ಯೆ ಬಾರದಂತೆ ಎಚ್ಚರವಹಿಸುವುದು ನಗರಸಭೆಗೆ ಸವಾಲಾಗಿದೆ.

ಕೂಟು ಹೊಳೆಯಲ್ಲಿರುವ 300 ಎಚ್‌ ಪಿ ಸಾಮರ್ಥ್ಯದ ಮೂರು ಮೋಟಾರ್‌ಗಳು, ಕುಂಡಾಮೇಸ್ತಿಯಲ್ಲಿರುವ ಅಷ್ಟೇ ಸಾಮರ್ಥ್ಯದ ಮೂರು ಮೋಟಾರ್‌ಗಳನ್ನು ಇತ್ತೀಚೆಗೆ ಸುಸ್ಥಿತಿಯಲ್ಲಿದ್ದು, ಸದ್ಯಕ್ಕೆ ಯಾವುದೇ ಸಮಸ್ಯೆ ಪರಿಶೀಲಿಸಲಾಗಿದ್ದು, ಸುಸ್ಥಿತಿಯಲ್ಲಿವೆ. ಇಲ್ಲ ಎಂದು ನಗರಸಭೆ ಆಯುಕ್ತ ರಮೇಶ್ ಹಾಗೆಯೇ ರೋಷಾನಾರ, ಪಂಪಿನ ಕೆರೆ ಮತ್ತು ತಿಳಿಸಿದ್ದಾರೆ.

ಮಾನ್ಸೂನ್‌ನಲ್ಲಿ ಮಳೆ ಉತ್ತಮವಾಗಿದ್ದ ಹಿನ್ನೆಲೆಯಲ್ಲಿ ಕೂಟುಹೊಳೆಯಲ್ಲಿ ಇನ್ನೂ ನೀರಿದೆ. ಜತೆಗೆ ಕುಂಡಾ ಮೇಸ್ಟ್ರಿಯಿಂದಲೂ ನಿರಂತರವಾಗಿ ನೀರು ಹರಿಸುತ್ತಿದ್ದೇವೆ. ಮಡಿಕೇರಿ ನಗರದ ಅವಶ್ಯಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸಂಗ್ರಹವಿದ್ದು, ಈ ಬಾರಿ ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗುವುದಿಲ್ಲ.
-ಎಚ್.ಆರ್.ರಮೇಶ್, ಪೌರಾಯುಕ್ತ.

ಮಡಿಕೇರಿ ನಗರ ಸುಮಾರು 39,000 ಜನಸಂಖ್ಯೆಯನ್ನು ಹೊಂದಿದ್ದು, ಪ್ರತಿದಿನ 52.7 ಲಕ್ಷ ಲೀಟರ್ ನೀರಿನ ಬೇಡಿಕೆಯಿದೆ. ವಲಸಿಗರ, ಪ್ರವಾಸಿಗರ ನೀರಿನ ಬೇಡಿಕೆ 0.225 ಮೆಗಾ ಲೀ. ಇದ್ದು, ಶೇ.15ರಷ್ಟು ಸೋರಿಕೆ ಸೇರಿದಂತೆ ಒಟ್ಟು 65 ಲಕ್ಷ ಲೀಟರ್ ನೀರಿನ ಬೇಡಿಕೆಯಿದೆ. ಸದ್ಯ ಇಷ್ಟು ಪ್ರಮಾಣದ ನೀರು ಪೂರೈಕೆಯಾಗುತ್ತಿದ್ದು, ಈ ಬಾರಿ ನೀರಿನ ಸಮಸ್ಯೆ ಉಂಟಾಗುವುದಿಲ್ಲವೆಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago