Andolana originals

ಎಸಿ ಕಾವ್ಯರಾಣಿ ಪ್ರಕರಣ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆ ಘಂಟೆ

ಮಂಜು ಕೋಟೆ

ಕೋಟೆ: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿ, ನೌಕರರಿಗೆ ನಡುಕ 

ಎಚ್.ಡಿ.ಕೋಟೆ: ಹುಣಸೂರು ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ತಾಲ್ಲೂಕಿನಲ್ಲಿ ಜಮೀನಿನ ವಿಚಾರವಾಗಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ  ಎಚ್ಚರಿಕೆ ಘಂಟೆ ಯಾಗಿದೆ.

ತಾಲ್ಲೂಕಿನ ಕನಕನತಿಟ್ಟು ಗ್ರಾಮದ ಸಮೀಪದಲ್ಲಿ ವೈದ್ಯರಾದ ರೂಪಾ ಅವರ ೪ ಎಕರೆ ೨೦ ಗುಂಟೆ ಜಮೀನು ಹೊಂದಿದ್ದು, ಈ ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಹುಣಸೂರು ಎಸಿ ಕಾವ್ಯರಾಣಿ ಅವರು ೨೦ ಲಕ್ಷ ರೂ.ಗೆ ಬೇಡಿಕೆ ಇಟ್ಟು ೫.೫೦ ಲಕ್ಷ ರೂ.ಗಳನ್ನು ತಮ್ಮ ಆಪ್ತ ಸಹಾಯಕ ಶಿವಕುಮಾರ್ ಮೂಲಕ ಪಡೆಯುತ್ತಿದ್ದಾಗ ಲೋಕಾಯುಕ್ತರು ದಾಳಿ ಮಾಡಿ ಬಂಧಿಸಿದ್ದಾರೆ.

ತಾಲ್ಲೂಕಿನಲ್ಲಿ ಈಗಾಗಲೇ ಅನೇಕ ಭೂ ಮಾಫಿಯಾ ಭ್ರಷ್ಟಾಚಾರ ಮತ್ತು ಹಗರಣಗಳ ಸರಣಿ ನಡೆದು, ಅಧಿಕಾರಿಗಳ ಅಮಾನತ್ತು, ಲೋಕಾ ಯುಕ್ತರ ದಾಳಿ ನಡೆದಿವೆ. ಅಧಿಕಾರಿಗಳ ಕಾರ್ಯ ವೈಖರಿಗೆ ಸಾರ್ವಜನಿಕರಲ್ಲಿ, ರೈತರಲ್ಲಿ ಅಸಮಾಧಾನ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ತಾಲ್ಲೂಕಿನ ಜಮೀನಿಗೆ ಸಂಬಂಧಿಸಿದ ಪ್ರಕರಣದ ವಿಚಾರವಾಗಿ ಹುಣಸೂರಿನ ಎಸಿ ಕಾವ್ಯರಾಣಿ ವಿರುದ್ಧ ಭ್ರಷ್ಟಾಚಾರದ ಕಾಯ್ದೆ ಅಡಿ ಪ್ರಕರಣ ದಾಖಲಾಗಿರುವುದು ಇಂತಹ ಅಧಿಕಾರಿಗಳಿಗೆ ಎಚ್ಚರಿಕೆಯಾಗಿದೆ.

ನಾಗರಹೊಳೆ, ಬಂಡೀಪುರ ಹಾಗೂ ಕಬಿನಿ ಹಿನ್ನೀರಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಜಮೀನುಗಳ ವಿಚಾರವಾಗಿ ಭೂಮಾಫಿಯಾ ಭಾರೀ ಪ್ರಮಾಣದಲ್ಲಿ ನಡೆಯುತ್ತಿದ್ದು ದಲ್ಲಾಳಿಗಳು, ಅಧಿಕಾರಿಗಳಿಗೆ ನಿತ್ಯವೂ ಹಬ್ಬವಾದಂತಿದೆ.ಶ್ರೀಮಂತರು, ರಾಜಕಾರಣಿಗಳು, ಪ್ರಭಾವಿಗಳು ತಮ್ಮ ಪ್ರಭಾವ ಬಳಸಿಕೊಂಡು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು. ಕೆಲವರು ಅಧಿಕಾರಿಗಳ ನಡೆಯಿಂದ ಬೇಸತ್ತು ಲೋಕಾಯುಕ್ತರ ಮೊರೆ ಹೋಗುತ್ತಿದ್ದಾರೆ. ಇನ್ನೊಂದು ಕಡೆ ಅಮಾಯಕ ರೈತರು, ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಬೇಕಾದರೆ ನಿತ್ಯವೂ ಕಚೇರಿ ಮತ್ತು ಅಧಿಕಾರಿಗಳ ಬಳಿ ಅಲೆದಾಡಬೇಕಿದೆ.

” ಹುಣಸೂರು ಉಪವಿಭಾಗಾಧಿಕಾರಿ ಕಾವ್ಯರಾಣಿಯವರ ಪ್ರಕರಣದ ನಂತರವಾದರೂ ತಾಲ್ಲೂಕಿನ ಬಹುತೇಕ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತಾಲ್ಲೂಕಿನ ಅಭಿವೃದ್ಧಿಗೆ, ರೈತರ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ, ಸಮರ್ಪಕವಾಗಿ ಮಾಡಲು ಮುಂದಾಗಬೇಕಿದೆ.”

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

8 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

9 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

11 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

12 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

14 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

19 mins ago