Andolana originals

ಚುರುಕುಗೊಂಡ ಭತ್ತದ ನಾಟಿ ಕಾರ್ಯ

ಭೇರ್ಯ ಮಹೇಶ್

ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು; ೨೪ ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶದಲ್ಲಿ ಭತ್ತದ ನಾಟಿ

ಕೆ.ಆರ್.ನಗರ: ಭತ್ತದನಾಡು ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಭತ್ತದ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ರೈತರು ಭತ್ತದ ಸಸಿ ಮಡಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಎತ್ತ ಕಣ್ಣು ಹಾಯಿಸಿದರೂ ಭತ್ತದ ಸಸಿ ಮಡಿ ಸಿದ್ಧಗೊಳಿಸುತ್ತಿರುವ ದೃಶ್ಯಗಳು ಕಾಣುತ್ತಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು ಈ ಬಾರಿ ಜೂನ್ ತಿಂಗಳಲ್ಲಿಯೇ ಕಾವೇರಿ ನದಿ ಮೈದುಂಬಿತ್ತು. ಈ ಹಿನ್ನೆಲೆಯಲ್ಲಿ ನೀರಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಅವಳಿ ತಾಲ್ಲೂಕುಗಳ ರೈತರಿಗಾಗಿ, ಬಳ್ಳೂರು ಮತ್ತು ಸಕ್ಕರೆ ಬಳಿಯ ಚಾಮರಾಜ ಅಣೆಕಟ್ಟೆಯಿಂದ ಶಾಸಕ ಡಿ.ರವಿಶಂಕರ್ ನಾಲೆಗಳಿಗೆ ನೀರು ಹರಿಸಿದ್ದಾರೆ. ರೈತರು ತಮ್ಮ ಜಮೀನುಗಳಿಗೆ ನೀರು ಹರಿಯುತ್ತಿದ್ದಂತೆ ಭತ್ತದ ಕೃಷಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಎರಡೂ ತಾಲ್ಲೂಕುಗಳಲ್ಲಿ ಅಂದಾಜು ೨೪ ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಈ ಭಾಗದ ಅಚ್ಚುಕಟ್ಟು ಪ್ರದೇಶಕ್ಕೆ ಕಾವೇರಿ, ಹಾರಂಗಿ ಮತ್ತು ಹೇಮಾವತಿ ನದಿಗಳ ನಾಲೆಗಳ ಮೂಲಕ ನೀರು ಒದಗಿಸಲಾಗುತ್ತದೆ.

ಕೊನೆಯ ಹಂತದವರೆಗೂ ನಾಲೆಗೆ ನೀರು ಹರಿಸುವ ಉದ್ದೇಶದಿಂದ ೨೦೧೪-೧೫ನೇ ಸಾಲಿನಲ್ಲಿ ನಾಲೆಗಳ ಆಧುನೀಕರಣ ಮಾಡಲಾಗಿದೆ. ಈ ಬಾರಿ ನೀರು ಸರಾಗವಾಗಿ ಹರಿಯಲು ನಾಲೆಗಳಲ್ಲಿ ತುಂಬಿದ್ದ ಹೂಳು, ಜಂಗಲ್‌ಗಳನ್ನು ತೆರವು ಮಾಡಲಾಗಿದೆ.

ಭತ್ತದ ಬಿತ್ತನೆ ಬೀಜ ಪೂರೈಕೆ:  ಈಗಾಗಲೇ ಕೃಷಿ ಇಲಾಖೆಯಿಂದ ಅವಳಿ ತಾಲ್ಲೂಕುಗಳ ೬ ರೈತ ಸಂಪರ್ಕ ಕೇಂದ್ರಗಳಲ್ಲಿ ವಿವಿಧ ತಳಿಗಳಾದ ಐ.ಆರ್.೬೪, ಎಂಟಿಯು ೧೦೦೧, ಜ್ಯೋತಿ, ಬಿ.ಆರ್.೨೬೫೫, ಆರ್.ಎನ್. ಆರ್., ೧೫೦೮೨, ಭತ್ತದ ಬಿತ್ತನೆ ಬೀಜವನ್ನು ಸಬ್ಸಿಡಿ ದರದಲ್ಲಿ ಪೂರೈಕೆ ಮಾಡಲಾಗಿದೆ. ರೈತರು ತಮ್ಮ ಜಮೀನಿಗೆ ಹೊಂದುವ ತಳಿಯನ್ನು ಆಯ್ಕೆ ಮಾಡಿ ಬಿತ್ತನೆ ಮಾಡುವಲ್ಲಿ ನಿರತರಾಗಿದ್ದಾರೆ.

ಅಲ್ಲದೇ ರಾಗಿಯ ಬಿತ್ತನೆಗೆ ವಿವಿಧ ತಳಿಗಳಾದ ಎಂ.ಎಲ್.೩೬೫, ಜೋಳ, ಕಾವೇರಿ ಕಂಪೆನಿಯ ಶಿಂಷಾ ೫೧೭, ಕೆಎಂಹೆಚ್ ೨೪೪, ಪ್ರೊಲೈಲ್ ಕಂಪೆನಿಯ ಪಿಸಿಎಸ್ ೧೦೫, ಮಾರಾಟ ಮಾಡಲಾಗುತ್ತಿದೆ.

ಹೈಬ್ರೀಡ್ ಬಿತ್ತನೆ ಭತ್ತ ತಳಿಗೆ ಮೊರೆ:  ಅಧಿಕ ಇಳುವರಿ ಪಡೆಯಲು ರೈತರು ಈಗಾಗಲೇ ಹೈಬ್ರೀಡ್ ಭತ್ತದ ತಳಿಯ ಮೊರೆ ಹೋಗಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಕ್ಕೆ ಹೈಬ್ರೀಡ್ ತಳಿಯನ್ನು ಮಾರಾಟ ಮಾಡದೇ ದುಪ್ಪಟ್ಟು ಹಣ ಪಡೆಯಲಾಗುತ್ತಿದೆ. ಆದರೂ ಕೂಡ ರೈತರು ಹೈಬ್ರೀಡ್ ಭತ್ತದ ತಳಿಯನ್ನು ಕೊಂಡು ಕೊಳ್ಳುತಿ ದ್ದಾರೆ. ಬೀಜೋಪಚಾರ ಮಾಡಿ ಭತ್ತದ ಸಸಿ ಮಡಿ ಮಾಡಬೇಕು ಎಂದು ಸಲಹೆ ಸೂಚನೆ ನೀಡಿರುವ ಕೃಷಿ ಅಧಿಕಾರಿಗಳು, ಒಂದು ವೇಳೆ ರೋಗಬಾಧೆಯಿಂದ ನಷ್ಟವಾದರೆ ಇದಕ್ಕೂ ಮೊದಲು ತಪ್ಪದೇ ಕಡ್ಡಾಯವಾಗಿ ಬೆಳೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

” ಜೂನ್ ಮೊದಲ ವಾರದಲ್ಲೇ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆಯು ಈ ಬಾರಿ ಅನ್ನದಾತನ ಕೈಹಿಡಿದಿದೆ. ತಾಲ್ಲೂಕಿನ ನಾಲೆಗಳಿಗೆ ನೀರು ಹರಿಸಿದ್ದು ನೀರಿಗಾಗಿ ಕಾಯುತ್ತಿದ್ದ ನಮಗೆ ಸಂತಸ ತಂದಿದೆ. ಖುಷಿಯಿಂದ ಭತ್ತದ ಬಿತ್ತನೆ ಕಾರ್ಯ ಮಾಡಿದ್ದೇವೆ.”

 -ಗಂಧನಹಳ್ಳಿ ಹೇಮಂತ್, ಪ್ರಗತಿಪರ ರೈತ, ಗಂಧನಹಳ್ಳಿ 

” ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ಗಳಲ್ಲಿ ೯೭೦ ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ದಾಸ್ತಾನು ಮಾಡಿದ್ದು, ಇದರಲ್ಲಿ ೨೫೦ ಕ್ವಿಂಟಾಲ್‌ನ್ನು ರೈತರಿಗೆ ಸಹಾಯಧನದಡಿ ರೈತ ಸಂಪರ್ಕ ಕೇಂದ್ರದಲ್ಲಿ ಮಾರಾಟ ಮಾಡಲಾಗಿದೆ. ಮುಂದಿನ ಸಾಲಿನಿಂದ ಹೈಬ್ರಿಡ್ ತಳಿಯನ್ನು ವಿತರಿಸಲು ಕ್ರಮವಹಿಸಲಾಗುವುದು. ಈಗಾಗಲೇ ಗೊಬ್ಬರವನ್ನು ದಾಸ್ತಾನು ಮಾಡಲಾಗಿದೆ. ನಿಗದಿತ ದರಕ್ಕೆ ಮಾರಾಟ ಮಾಡುವಂತೆ ಟ್ರೇಡರ್ಸ್ ಮಾಲೀಕರಿಗೆ ಸೂಚಿಸಲಾಗಿದೆ.”

 -ಮಲ್ಲಿಕಾರ್ಜುನ್, ಸಹಾಯಕ ಕೃಷಿ ನಿರ್ದೇಶಕ, ಕೆ.ಆರ್.ನಗರ

ಆಂದೋಲನ ಡೆಸ್ಕ್

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago