Andolana originals

ವಿ.ನಾಲೆಯುದ್ದಕ್ಕೂ ತಡೆಗೋಡೆ ನಿರ್ಮಾಣಕ್ಕೆ ಕ್ರಮ

ಸರಣಿ ಅವಘಡಗಳ ಕೂಪ: ಕೊನೆಗೂ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ

೨.೫ ಕಿ.ಮೀ. ದೂರ ಮೆಟಲ್ ಕ್ರಾಸ್‌ಬ್ಯಾರಿಯರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿ

ಹೇಮಂತ್‌ಕುಮಾರ್

ಮಂಡ್ಯ: ಹಲವು ಅವಘಡಗಳು ಸಂಭವಿಸಿದ ಬಳಿಕ ಎಚ್ಚೆತ್ತುಕೊಂಡ ಆಡಳಿತ ಕೊನೆಗೂ ವಾಹನ ಸಂಚಾರ ದಟ್ಟಣೆ ಇರುವ ಆಯ್ದ ಸ್ಥಳಗಳಲ್ಲಿ ವಿಶ್ವೇಶ್ವರಯ್ಯ ನಾಲೆ ಏರಿಯ ಮೇಲೆ ತಡೆಗೋಡೆ ನಿರ್ಮಿಸಲು ಯೋಜನೆ ರೂಪಿಸುವ ಮೂಲಕ ಮುಂದಾಗುವ ಅನಾಹುತಗಳನ್ನು ತಡೆಗಟ್ಟಲು ಕ್ರಮ ಕೈಗೊಂಡಿರುವುದರಿಂದ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

ಮಂಡ್ಯ ತಾಲ್ಲೂಕಿನ, ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತಿಬ್ಬನಹಳ್ಳಿ (ಜಯಪುರ) ಗ್ರಾಮವು ಕೆಆರ್‌ಎಸ್‌ನಿಂದ ೩೨ನೇ ಕಿ.ಮೀ. ದೂರಲ್ಲಿದೆ. ಏಷ್ಯಾದ ಮೊದಲ ಜಲ ಸುರಂಗವಿರುವ ಸ್ಥಳವಿದು. ಹಾಗಾಗಿ ಟನಲ್ ಹುಲಿಕೆರೆಯೆಂದೇ ಪ್ರಸಿದ್ಧಿ. ಇಲ್ಲಿಂದ ಜಯಪುರದವರೆಗೆ ಮೂರು ಕಿ.ಮೀ. ದೂರದ ಕಾಲುವೆಯು ಬಲಭಾಗದಲ್ಲಿ ಹರಿಯುತ್ತದೆ. ಈ ಕಾಲುವೆಯ ಒಂದು ಬದಿಗೆ ತಡೆಗೋಡೆಯನ್ನು ಆರು ಅಡಿ ಎತ್ತರದಲ್ಲಿ ನಿರ್ಮಿಸಿದರೆ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದು ಗ್ರಾಮಸ್ಥರ ಆಗ್ರಹ. ಈ ಭಾಗದಲ್ಲಿ ಶಾಲೆ ಕಾಲೇಜಿನ ಮಕ್ಕಳು ಓಡಾಡುತ್ತಿರುತ್ತಾರೆ. ಖಾಸಗಿ ಸಂಸ್ಥೆ ಬಸ್ಸುಗಳು ಹಾಗೂ ಸರ್ಕಾರಿ ಬಸ್ಸುಗಳು ಹೆಚ್ಚು ಸಂಚರಿಸುತ್ತವೆ. ಹಾಗೆಯೇ ಈ ಭಾಗದ ತರಕಾರಿ, ಕಬ್ಬು, ಭತ್ತ, ಬೆಳೆಯುವ ರೈತರು ಇದೇ ಮಾರ್ಗವಾಗಿ ಕೃಷಿ ಉತ್ಪನ್ನಗಳನ್ನು ಸಾಗಿಸುತ್ತಾರೆ.

ಮಂಡ್ಯದಿಂದ ಹುಲಿಕೆರೆ ಮಾರ್ಗವಾಗಿ ಪಾಂಡವಪುರ, ಮೈಸೂರು-ಬೆಂಗಳೂರಿಗೆ ಹೋಗುವ ಖಾಸಗಿ ವಾಹನಗಳು ಸೇರಿದಂತೆ ಇತರ ಹಳ್ಳಿಗಳಿಗೆ ಹೋಗುವ ಬಸ್ಸುಗಳು ಕೂಡ ಇದೇ ಹಾದಿಯಲ್ಲಿ ಸಾಗುತ್ತವೆ. ಈಗಾಗಲೇ ಈ ಭಾಗದಲ್ಲಿ ಸರಣಿ ದುರಂತಗಳು ಸಂಭವಿಸಿವೆ.

ನಾಮಕಾವಸ್ತೆಗೆ ತಡೆಗೋಡೆ ನಿರ್ಮಾಣ ಜಯಪುರ ಗ್ರಾಮದಲ್ಲಿ ಹೆಚ್ಚು ಕಡಿದಾದ ತಿರುವಿದೆ. ನಾಮಕಾವಸ್ತೆಗೆ ಅರ್ಧ ಕಿ.ಮೀ. ಮಾತ್ರ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದಾರೆ. ಇಂತಹ ಅನಾಹುತಗಳನ್ನು ತಡೆಯಲು ಕಾಲುವೆಯ ಪಕ್ಕ ತಡೆಗೋಡೆ ಹಾಗೂ ಒತ್ತುವರಿಯಾಗಿರುವ ಜಾಗವನ್ನು ತೆರವು ಮಾಡಿ ಜಾಗವನ್ನು ವಿಸ್ತರಿಸಿ ಪೂರ್ಣ ಪ್ರಮಾಣದ ರಸ್ತೆಯನ್ನು ನಿರ್ಮಿಸುವ ಮೂಲಕ ಅವಘಡಗಳನ್ನು ತಡೆಗಟ್ಟುವಂತೆ ಜಯಪುರದ ಗ್ರಾಮಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.

ಕಾಮಗಾರಿ ಆರಂಭ: ಇದೀಗ ಜಿಲ್ಲಾಡಳಿತ, ನೀರಾವರಿ ಇಲಾಖೆ ಎಚ್ಚೆತ್ತುಕೊಂಡಿದ್ದು, ವಿಸಿ ನಾಲೆ ಟನಲ್‌ನ ಎಕ್ಸಿಟ್ ಪಾಯಿಂಟ್‌ನಿಂದ ಹಳೆ ಮದ್ದೂರು ಶಾಖಾ ನಾಲೆಯವರೆಗೆ ತಡೆಗೋಡೆ ನಿರ್ಮಿಸುವ ಕಾಮಗಾರಿ ಆರಂಭಿಸಿದೆ.ತಮ್ಮ ಮನವಿಗೆ ಸ್ಪಂದಿಸಿದ್ದಕ್ಕಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತು ಜಿಲ್ಲಾಧಿಕಾರಿ ಕುಮಾರ್ ಅವರಿಗೆ ಸ್ಥಳೀಯ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

ಅಸಲಿಗೆ ಇದು ವಾಹನ ಸಂಚಾರದ ರಸ್ತೆಯೇ ಅಲ್ಲ!:

ಮಂಡ್ಯ: ಯಾವುದೇ ಅವಘಡಗಳು ಸಂಭವಿಸಿದ ಕೂಡಲೇ ನೀರಾವರಿ ಇಲಾಖೆಯವರು ತಡೆಗೋಡೆ ನಿರ್ಮಿಸಿಲ್ಲ. ಅವರಿಗೆ ಮಾನವೀಯತೆಯೇ ಇಲ್ಲ ಎಂದು ಜನರು ಆರೋಪಿಸುವುದು ವಾಡಿಕೆಯಾಗಿದೆ. ಆದರೆ, ವಾಸ್ತವವೇ ಬೇರೆ ಇದೆ. ಟನಲ್ ಹುಲಿಕೆರೆ ಉದ್ದಕ್ಕೂ ಇರುವ ರಸ್ತೆಯು ವಿ.ನಾಲೆಯ ಸರ್ವೀಸ್ ರಸ್ತೆಯಾಗಿದ್ದು, ಇದನ್ನು ಲೋಕೋಪಯೋಗಿ ಇಲಾಖೆ ಸಾರ್ವಜನಿಕ ಸಂಚಾರ ರಸ್ತೆಯನ್ನಾಗಿ ಬಳಸಿಕೊಂಡು ಡಾಂಬರು ಹಾಕಿ ವಾಹನಗಳಿಗೆ ಅನುವು ಮಾಡಿಕೊಟ್ಟಿದೆ. ಆದರೂ ನಮ್ಮ ಕಾವೇರಿ ನೀರಾವರಿ ನಿಗಮವು ಮಾನವೀಯತೆ ದೃಷ್ಟಿಯಿಂದ ಸುಮಾರು ೨.೫ ಕಿ.ಮೀ. ದೂರ ಮೆಟಲ್ ಕ್ರಾಸ್‌ಬ್ಯಾರಿಯರ್ ಅಳವಡಿಸುವ ಕಾರ್ಯ ಕೈಗೊಂಡಿದೆ ಎಂದು ನಿಗಮದ ಪಾಂಡವಪುರ ವಿಭಾಗದ ಎಇಇ ಜಯರಾಮ್ ತಿಳಿಸಿದ್ದಾರೆ.

ಅವಘಡಗಳ ಸರಣಿ: 

■ ೨೦೧೮ ನವೆಂಬರ್: ಪಾಂಡವಪುರ ತಾಲ್ಲೂಕಿನ ಕನಗನಮರಡಿಯ ವಿಶ್ವೇಶ್ವರಯ್ಯ ವಿತರಣಾ ನಾಲೆ ಯಲ್ಲಿ ಬಸ್ ಅಪಘಾತಕ್ಕೆ ಒಳಗಾಗಿ ೩೦ ಜನ ಸಾವು

■ ೨೦೨೩ನವೆಂಬರ್ ೭: ಪಾಂಡವಪುರ ಬಳಿಯ ಬನಘಟ್ಟದ ವಿ.ನಾಲೆಯಲ್ಲಿ ಕಾರು ಬಿದ್ದು, ಐವರು ಸಾವನ್ನಪ್ಪಿದ್ದರು

■ ೨೦೨೩ ಜುಲೈ ೨೭: ಮಂಡ್ಯ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ಕಾರು ವಿ.ನಾಲೆಗೆ ಪಲ್ಟಿಯಾಗಿ, ಚಾಲಕ ಲೋಕೇಶ್ ಮೃತಪಟ್ಟಿದ್ದರು.

 ■೨೦೨೩ ಜುಲೈ ೨೯: ಶ್ರೀರಂಗಪಟ್ಟಣ ತಾಲ್ಲೂಕಿನ ಗಾಮನಹಳ್ಳಿ ಬಳಿ ಕಾರೊಂದು ವಿ.ನಾಲೆಗೆ ಬಿದ್ದು, ನಾಲ್ವರು ಮೃತಪಟ್ಟಿದ್ದರು.

■ ೨೦೨೩ ನವೆಂಬರ್ ೮: ಪಾಂಡವಪುರ ತಾಲ್ಲೂಕಿನ ಬನಘಟ್ಟ ಬಳಿ ಕಾರು ವಿ.ನಾಲೆಗೆ ಬಿದ್ದು ಐವರು ದಾರುಣವಾಗಿ ಸಾವನ್ನಪ್ಪಿದ್ದರು.

■ ೨೦೨೪ ಮಾ.೧೨: ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ಸ್ವಿಫ್ಟ್ ಕಾರೊಂದು ನಾಲೆಯೊಳಗೆ ಬಿದ್ದು, ಕಾರಿನಲ್ಲಿದ್ದ ಇಬ್ಬರ ಪೈಕಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago