Andolana originals

ಓದುಗರ ಪತ್ರ: ಮುನಿರತ್ನ ವಿರುದ್ಧ ಕಠಿಣ ಕ್ರಮ ಅಗತ್ಯ

ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ.

ಮುನಿರತ್ನ ತಮಗೆ ಎಲ್ಲ ಸಮುದಾಯದವರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮು ದಾಯದವರೂ ಮತ ನೀಡಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ ಎಂಬುದನ್ನು ಮರೆತಂತಿದೆ.

ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕ ಜೀವನದಲ್ಲಿರುವವರು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಬಗ್ಗೆ ಗಮನಹರಿಸಬೇಕು. ಎಲ್ಲ ಸಮುದಾಯದವರನ್ನೂ ಸಮಾನವಾಗಿ ಕಂಡು ಸಮಾನತೆಯ ಸಂದೇಶವನ್ನು ರವಾನಿಸುವ ಮೂಲಕ ಭಾವೈಕ್ಯತೆ ಸಾಧಿಸುವುದು ಅವರ ಗುರಿಯಾಗಿರಬೇಕು. ಆದರೆ ಇಲ್ಲಿ ಶಾಸಕ ಮುನಿರತ್ನ ಜನರನ್ನು ಜಾತಿಯ ಆಧಾರದ ಮೇಲೆ ಅಳೆದಿದ್ದು, ಒಂದು ಸಮುದಾಯವನ್ನು ಅವಹೇಳನ ಮಾಡಿರುವುದು ಎಷ್ಟು ಸರಿ? ಇವರ ಮೇಲೆ ಕೇಳಿ ಬಂದಿರುವ ಆರೋಪ ನಿಜವೇ ಆಗಿದ್ದರೆ ಅವರು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರಾಗಿ ಮುಂದುವರಿಯಲು ಯೋಗ್ಯರಲ್ಲ. ಆದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು.

ಈ ಜಾತಿನಿಂದನೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವ ಜತೆಗೆ ಸರ್ಕಾರವೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ.
-ಎಂ.ಎಸ್.ಪರಮಾನಂದ,
ರಾಜ್ಯ ಕಾರ್ಯದರ್ಶಿ, ಬಿಜೆಪಿ ಎಸ್ಸಿ ಮೋರ್ಚಾ,

ಆಂದೋಲನ ಡೆಸ್ಕ್

Recent Posts

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

15 mins ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

20 mins ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

51 mins ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

2 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

2 hours ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

2 hours ago