Andolana originals

ಓದುಗರ ಪತ್ರ: ಮುನಿರತ್ನ ವಿರುದ್ಧ ಕಠಿಣ ಕ್ರಮ ಅಗತ್ಯ

ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ.

ಮುನಿರತ್ನ ತಮಗೆ ಎಲ್ಲ ಸಮುದಾಯದವರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮು ದಾಯದವರೂ ಮತ ನೀಡಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ ಎಂಬುದನ್ನು ಮರೆತಂತಿದೆ.

ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕ ಜೀವನದಲ್ಲಿರುವವರು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಬಗ್ಗೆ ಗಮನಹರಿಸಬೇಕು. ಎಲ್ಲ ಸಮುದಾಯದವರನ್ನೂ ಸಮಾನವಾಗಿ ಕಂಡು ಸಮಾನತೆಯ ಸಂದೇಶವನ್ನು ರವಾನಿಸುವ ಮೂಲಕ ಭಾವೈಕ್ಯತೆ ಸಾಧಿಸುವುದು ಅವರ ಗುರಿಯಾಗಿರಬೇಕು. ಆದರೆ ಇಲ್ಲಿ ಶಾಸಕ ಮುನಿರತ್ನ ಜನರನ್ನು ಜಾತಿಯ ಆಧಾರದ ಮೇಲೆ ಅಳೆದಿದ್ದು, ಒಂದು ಸಮುದಾಯವನ್ನು ಅವಹೇಳನ ಮಾಡಿರುವುದು ಎಷ್ಟು ಸರಿ? ಇವರ ಮೇಲೆ ಕೇಳಿ ಬಂದಿರುವ ಆರೋಪ ನಿಜವೇ ಆಗಿದ್ದರೆ ಅವರು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರಾಗಿ ಮುಂದುವರಿಯಲು ಯೋಗ್ಯರಲ್ಲ. ಆದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು.

ಈ ಜಾತಿನಿಂದನೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವ ಜತೆಗೆ ಸರ್ಕಾರವೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ.
-ಎಂ.ಎಸ್.ಪರಮಾನಂದ,
ರಾಜ್ಯ ಕಾರ್ಯದರ್ಶಿ, ಬಿಜೆಪಿ ಎಸ್ಸಿ ಮೋರ್ಚಾ,

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago