ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಸಾದದ ರೂಪದಲ್ಲಿ ನೀಡಲಾಗುವ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವುದಾಗಿ ಪರೀಕ್ಷೆಯಿಂದ ಸಾಬೀತಾಗಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ತಿರುಪತಿ ತಿಮ್ಮಪ್ಪನ ದೇವಾಲಯ ಹಿಂದೂ ಧರ್ಮೀಯರ ಪವಿತ್ರ ದೇವಾಲಯಗಳಲ್ಲಿ ಒಂದು. ಮಾಂಸಾಹಾರಿಗಳೂ ಮಾಂಸ ಸೇವನೆಯನ್ನು ಬಿಟ್ಟು ಭಕ್ತಿಯಿಂದ ದೇವಾಲಯಕ್ಕೆ ಬಂದು ಹೋಗುತ್ತಾರೆ. ಹೀಗಿರುವಾಗ ತಿಮ್ಮಪ್ಪನ ಪ್ರಸಾದದ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಬಳಸಿರುವುದು ಭಕ್ತರಲ್ಲಿ ಆಘಾತವನ್ನುಂಟು ಮಾಡಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಆಚರಣೆಗಳನ್ನು ಮಾಡುವ ಹಕ್ಕನ್ನು ಸಂವಿಧಾನ ನೀಡಿದೆ. ಇಂತಹ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವುದು ಕಾನೂನುಬಾಹಿರ ಎಂಬುದು ತಿಳಿದಿದ್ದರೂ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶವನ್ನು ಸೇರಿಸಿರುವುದು ಶಿಕ್ಷಾರ್ಹ ಅಪರಾಧ. ಆದ್ದರಿಂದ ಸಂಬಂಧಪಟ್ಟ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ.
-ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…