ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಸಾದದ ರೂಪದಲ್ಲಿ ನೀಡಲಾಗುವ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವುದಾಗಿ ಪರೀಕ್ಷೆಯಿಂದ ಸಾಬೀತಾಗಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ತಿರುಪತಿ ತಿಮ್ಮಪ್ಪನ ದೇವಾಲಯ ಹಿಂದೂ ಧರ್ಮೀಯರ ಪವಿತ್ರ ದೇವಾಲಯಗಳಲ್ಲಿ ಒಂದು. ಮಾಂಸಾಹಾರಿಗಳೂ ಮಾಂಸ ಸೇವನೆಯನ್ನು ಬಿಟ್ಟು ಭಕ್ತಿಯಿಂದ ದೇವಾಲಯಕ್ಕೆ ಬಂದು ಹೋಗುತ್ತಾರೆ. ಹೀಗಿರುವಾಗ ತಿಮ್ಮಪ್ಪನ ಪ್ರಸಾದದ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಬಳಸಿರುವುದು ಭಕ್ತರಲ್ಲಿ ಆಘಾತವನ್ನುಂಟು ಮಾಡಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಆಚರಣೆಗಳನ್ನು ಮಾಡುವ ಹಕ್ಕನ್ನು ಸಂವಿಧಾನ ನೀಡಿದೆ. ಇಂತಹ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವುದು ಕಾನೂನುಬಾಹಿರ ಎಂಬುದು ತಿಳಿದಿದ್ದರೂ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶವನ್ನು ಸೇರಿಸಿರುವುದು ಶಿಕ್ಷಾರ್ಹ ಅಪರಾಧ. ಆದ್ದರಿಂದ ಸಂಬಂಧಪಟ್ಟ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ.
-ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…