ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಸಾದದ ರೂಪದಲ್ಲಿ ನೀಡಲಾಗುವ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವುದಾಗಿ ಪರೀಕ್ಷೆಯಿಂದ ಸಾಬೀತಾಗಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ತಿರುಪತಿ ತಿಮ್ಮಪ್ಪನ ದೇವಾಲಯ ಹಿಂದೂ ಧರ್ಮೀಯರ ಪವಿತ್ರ ದೇವಾಲಯಗಳಲ್ಲಿ ಒಂದು. ಮಾಂಸಾಹಾರಿಗಳೂ ಮಾಂಸ ಸೇವನೆಯನ್ನು ಬಿಟ್ಟು ಭಕ್ತಿಯಿಂದ ದೇವಾಲಯಕ್ಕೆ ಬಂದು ಹೋಗುತ್ತಾರೆ. ಹೀಗಿರುವಾಗ ತಿಮ್ಮಪ್ಪನ ಪ್ರಸಾದದ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಬಳಸಿರುವುದು ಭಕ್ತರಲ್ಲಿ ಆಘಾತವನ್ನುಂಟು ಮಾಡಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಆಚರಣೆಗಳನ್ನು ಮಾಡುವ ಹಕ್ಕನ್ನು ಸಂವಿಧಾನ ನೀಡಿದೆ. ಇಂತಹ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವುದು ಕಾನೂನುಬಾಹಿರ ಎಂಬುದು ತಿಳಿದಿದ್ದರೂ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶವನ್ನು ಸೇರಿಸಿರುವುದು ಶಿಕ್ಷಾರ್ಹ ಅಪರಾಧ. ಆದ್ದರಿಂದ ಸಂಬಂಧಪಟ್ಟ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ.
-ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…