Andolana originals

ರಾಷ್ಟ್ರೀಯ ಹೆದ್ದಾರಿ ಬದಿಯ ಅಂಗಡಿಗಳ ತೆರವಿಗೆ ಕ್ರಮ

ನವೀನ್ ಡಿಸೋಜ

ಹೆದ್ದಾರಿ ಉಪ ವಿಭಾಗದಿಂದ ಸಿದ್ಧತೆ; ಶೀಘ್ರದಲ್ಲೇ ಅನಧಿಕೃತ ಫಲಕ, ತಾತ್ಕಾಲಿಕ ಅಂಗಡಿಗಳ ತೆರವು 

ಮಡಿಕೇರಿ: ರಾಷ್ಟ್ರೀಯ ಹೆದ್ದಾರಿ ೨೭೫ರ ಸಂಪಾಜೆಯಿಂದ ಕುಶಾಲನಗರದವರೆಗಿನ ರಸ್ತೆಬದಿಯಲ್ಲಿ ತೆರವುಗೊಳಿಸಿದ್ದ ಅಕ್ರಮ ಅಂಗಡಿಗಳು ಮತ್ತೆ ತಲೆ ಎತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗ ಮತ್ತೆ ಕ್ರಮಕ್ಕೆ ಮುಂದಾಗಿದೆ.

ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯಿಂದ ಕುಶಾಲನಗರದವರೆಗೆ ನಿಯಮ ಬಾಹಿರವಾಗಿ ಅಳವಡಿಸಲಾಗಿದ್ದ ಜಾಹೀರಾತು ಫಲಕಗಳು ಮತ್ತು ಅಕ್ರಮ ಅಂಗಡಿ ಗಳನ್ನು ಹೆದ್ದಾರಿ ಮಡಿಕೇರಿ ಉಪ ವಿಭಾಗದ ಅಧಿಕಾರಿಗಳು ತೆರವುಗೊಳಿಸಿದ್ದರು. ಇದೀಗ ಅದೇ ಸ್ಥಳಗಳಲ್ಲಿ ಮತ್ತೆ ಬೋರ್ಡ್ ಗಳು ರಾರಾಜಿಸುತ್ತಿದ್ದು, ಅಂಗಡಿಗಳು ತಲೆ ಎತ್ತಿವೆ. ಈ ಅಂಗಡಿಗಳ ತೆರವಿಗೆ ಈಗ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಈ ಹಿಂದೆ ಅಂಗಡಿಗಳು ಮತ್ತು ಜಾಹೀರಾತು ಫಲಕ ಅಳವಡಿಸಿದವರಿಗೆ ಎಚ್ಚರಿಕೆ ನೀಡಿದರೂ ತೆರವು ಮಾಡದ ಹಿನ್ನೆಲೆಯಲ್ಲಿ ಇಲಾಖೆಯಿಂದ ಜೆಸಿಬಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿತ್ತು. ಈಗ ಮತ್ತೆ ಅದೇ ಸ್ಥಳಗಳಲ್ಲಿ ಅಕ್ರಮವಾಗಿ ಅಂಗಡಿಗಳನ್ನು ಹಾಕಿಕೊಳ್ಳಲಾಗಿದೆ. ಹೀಗಾಗಿ ಮತ್ತೆ ಅಂಗಡಿ ಮಳಿಗೆಗಳ ಮಾಲೀಕರು ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಿರುವವರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಅ.೨೬ರವರೆಗೆ ಸ್ವಯಂಪ್ರೇರಿತರಾಗಿ ತೆರವುಗೊಳಿಸಬೇಕೆಂದು ಸೂಚಿಸಲಾಗಿದ್ದು, ಅ. ೨೭ರಿಂದ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಸಂಪಾಜೆಯಿಂದ ಕುಶಾಲನಗರದವರೆಗೆ ರಾಷ್ಟ್ರೀಯ ಹೆದ್ದಾರಿ ೨೭೫ರ ಎರಡೂ ಬದಿಗಳಲ್ಲಿ ಅಲ್ಲಲ್ಲಿ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿಕೊಂಡು ಹಣ್ಣು, ಜ್ಯೂಸ್, ಎಳನೀರು ಮತ್ತಿತರ ವಸ್ತುಗಳ ವ್ಯಾಪಾರ ಮಾಡಲಾಗುತ್ತದೆ. ಇದರಿಂದ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳವರು ಅಲ್ಲಿ ನಿಲ್ಲಿಸಿ ಖರೀದಿಗೆ ಮುಂದಾಗುತ್ತಾರೆ. ಈ ಸಂದರ್ಭದಲ್ಲಿ ಹೈವೇಯಲ್ಲಿ ಸಂಚರಿಸುವ ಇತರ ವಾಹನಗಳಿಗೆ ಅಡಚಣೆ ಉಂಟಾಗುತ್ತಿದೆ. ಇದಲ್ಲದೇ ಕೆಲವು ತಿರುವುಗಳಲ್ಲಿ ಅಂಗಡಿಗಳನ್ನು ಹಾಕಿಕೊಂಡಿರುವುದರಿಂದ ಎದುರಿನಿಂದ ಬರುವ ವಾಹನಗಳು ಕಾಣಿಸದೇ ಅಪಘಾತಗಳಾಗುತ್ತಿವೆ. ಈ ಬಗ್ಗೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಲಾಖೆ ಈಗ ಕ್ರಮಕ್ಕೆ ಮುಂದಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಒಂದಷ್ಟು ಬೋರ್ಡ್‌ಗಳು ಹೋಂಸ್ಟೇ ಮತ್ತು ಜುವೆಲರಿ ಶಾಪ್‌ಗಳಿಗೆ ಸೇರಿವೆ. ಶೇ.೮೦ ಹೋಟೆಲ್ ಮತ್ತು ರೆಸಾರ್ಟ್‌ಗಳ ಜಾಹೀರಾತುಗಳು ಮತ್ತು ಕಿ.ಮೀ ಸೂಚನಾ ಫಲಕಗಳಾಗಿವೆ. ಇವುಗಳನ್ನು ತೆರವುಗೊಳಿಸುವಂತೆ ಈ ಹಿಂದೆಯೇ ಅಧಿಕಾರಿಗಳು ಸೂಚನೆ ನೀಡಿದ್ದರಾದರೂ ಕೆಲ ಪ್ರಭಾವಿಗಳು ನೋಟಿಸ್ ನೀಡಲು ಹೋಗಿದ್ದ ಅಧಿಕಾರಿಗಳನ್ನೇ ಬೆದರಿಸಿದ್ದರು. ಅಂಗಡಿಗಳ ತೆರವು ವಿಚಾರದಲ್ಲಿಯೂ ಇಂತಹದ್ದೇ ಸವಾಲನ್ನು ಅಧಿಕಾರಿಗಳು ಎದುರಿಸಿದರಾದರೂ ಕೊನೆಗೆ ಪೊಲೀಸರ ಸಮ್ಮುಖದಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದರು.

ರಾಷ್ಟ್ರೀಯ ಹೆದ್ದಾರಿ ನಿಯಮ ಏನು?: ಹೆದ್ದಾರಿ ಪ್ರಾಧಿಕಾರದ ನಿಯಮದಂತೆ ಹೆದ್ದಾರಿಯ ಮಧ್ಯಭಾಗದಿಂದ ಒಂದು ಬದಿಗೆ ೪೦ ಮೀಟರ್‌ವರೆಗೆ ಯಾವುದೇ ಕಟ್ಟಡ, ತಾತ್ಕಾಲಿಕ ಶೆಡ್‌ಗಳ ನಿರ್ಮಾಣ ಅಥವಾ ಯಾವುದೇ ವ್ಯಾಪಾರ ವಹಿವಾಟಿಗೆ ಅವಕಾಶವಿಲ್ಲ. ಹೆದ್ದಾರಿ ಗಡಿ ರೇಖೆಯಿಂದ ೧೨ಮೀಟರ್ ಅಂತರದಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗೆ ಅವಕಾಶವಿರುವುದಿಲ್ಲ. ಕೆಲವರು ಸಂಬಂಧಪಟ್ಟ ಪಂಚಾಯ್ತಿಗಳು, ಹೆದ್ದಾರಿ ಪ್ರಾಧಿಕಾರ ಅಥವಾ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆಯದೇ ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದರಿಂದಾಗಿ ವಾಹನ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ವಾಹನ ಚಾಲಕರಿಂದ ದೂರುಗಳೂ ಬಂದಿವೆ ಎಂದು ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಭಿಯಂತರ ಗಿರೀಶ್ ತಿಳಿಸಿದ್ದಾರೆ.

” ಈ ಹಿಂದೆಯೂ ಹೆದ್ದಾರಿ ಬದಿಯಲ್ಲಿರುವ ಅಕ್ರಮ ಜಾಹೀರಾತು ಫಲಕಗಳು ಮತ್ತು ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು. ಇದಾದ ಕೆಲವೇ ತಿಂಗಳಲ್ಲಿ ಮತ್ತೆ ಬೋರ್ಡ್ಗಳು ಕಾಣಿಸಿಕೊಂಡಿವೆ. ಅಂಗಡಿಗಳೂ ತಲೆ ಎತ್ತಿವೆ. ಹೀಗಾಗಿ ಮತ್ತೆ ಸಾರ್ವಜನಿಕ ಪ್ರಕಟಣೆ ಮೂಲಕ ಅ.೨೬ರ ವರೆಗೆ ಗಡುವು ನೀಡಿದ್ದೇವೆ. ಅ.೨೭ರಿಂದ ತೆರವು ಕಾರ್ಯಾಚರಣೆ ನಡೆಸುತ್ತೇವೆ.ʼ

-ಜಿ.ಎಚ್.ಗಿರೀಶ್, ಸಹಾಯಕ ಕಾರ್ಯಪಾಲಕ ಅಭಿಯಂತರ, ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗ 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago