Andolana originals

ಅಡಗನಹಳ್ಳಿ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಭೇರ್ಯ ಮಹೇಶ್

ಎಸ್‌ಡಿಎಂಸಿ ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿಕೆ 

ಕೆ.ಆರ್.ನಗರ: ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿಗೆ ಅಡಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ೨೦೨೫-೨೬ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯ ವೈಖರಿಯನ್ನು ಪರಿಗಣಿಸಿ ಅತ್ಯುತ್ತಮ ಪ್ರಶಸ್ತಿ ನೀಡಿದೆ.

ಈ ಶಾಲೆ ೧೯೩೪ರಲ್ಲಿ ಪ್ರಾರಂಭವಾಗಿದ್ದು, ಶತಮಾನೋತ್ಸವದ ಅಂಚಿನಲ್ಲಿದೆ. ಶಾಲೆ ಆರಂಭದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿತ್ತು. ಪ್ರಸ್ತುತ ಒಂದರಿಂದ ಏಳನೇ ತರಗತಿವರೆಗೆ ೩೭ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಮುಖ್ಯ ಶಿಕ್ಷಕ ಹಾಗೂ ಇಬ್ಬರು ಸಹ ಶಿಕ್ಷಕರು ಇದ್ದಾರೆ. ಒಂದು ಎಕರೆ ವಿಸ್ತೀರ್ಣದಲ್ಲಿ ಮಕ್ಕಳ ಕಲಿಗೆ ಅನುಕೂಲಕರವಾದ ವಾತಾವರಣವನ್ನು ಕಟ್ಟಿಕೊಡಲಾಗಿದೆ. ಇದರೊ ಟ್ಟಿಗೆ ಅಂಗನವಾಡಿ ಕೇಂದ್ರ ಕೂಡ ನಡೆಯುತ್ತಿದೆ ಯುಕೋ ಕ್ಲಬ್, ಚಿತ್ರಕಲೆ, ವಿಜ್ಞಾನ ಪ್ರಯೋಗಾಲಯ, ಕ್ರೀಡಾ ಚಟುವಟಿಕೆ ಕ್ರಿಯಾಶೀಲವಾಗಿವೆ. ತಂತ್ರಜ್ಞಾನದ ಬಳಕೆಯಲ್ಲಿ ಮುಂದುವರಿದಿದ್ದು, ಪ್ರೊಜೆಕ್ಟರ್, ಕಂಪ್ಯೂಟರ್ ಉಪಯೋಗಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತಿದೆ. ಇದರೊಂದಿಗೆ ಶಾಲಾವರಣದಲ್ಲಿ ಅತ್ಯುತ್ತಮ ಕೈತೋಟ ನಿರ್ಮಿಸಲಾಗಿದೆ. ಆಯುರ್ವೇದ ಔಷಧಿಗಳಿಗೆ ಸಂಬಂಧಿಸಿದ ವಿವಿಧ ಬಗೆಯ ಸಸ್ಯಗಳನ್ನು ಬೆಳೆಸಲಾಗಿದೆ.

ಪ್ರಶಸ್ತಿ ದೊರೆತ ಸಂಭ್ರಮವನ್ನು ಹಂಚಿಕೊಂಡ ಎಸ್‌ಡಿಎಂಸಿ ಅಧ್ಯಕ್ಷ ಎ.ಸಿ.ಮಹೇಶ್ ಹಾಗೂ ಉಪಾಧ್ಯಕ್ಷೆ ರಮ್ಯ ಮಾತನಾಡಿ, ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲಾಗಿದೆ. ಶಾಲೆಯ ವಾತಾವರಣದಲ್ಲಿ ಮತ್ತಷ್ಟು ಸೃಜನಶೀಲತೆಯನ್ನು ತರುವ ಪ್ರಯತ್ನದಲ್ಲಿ ಸಮಿತಿ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.

ಶಾಲೆಯಲ್ಲಿ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ ತ ಮುಖ್ಯ ಶಿಕ್ಷಕ ಬ್ಯಾಡರಹಳ್ಳಿ ಭಾಸ್ಕರ್ ಮಾತನಾಡಿ, ಶಾಲೆಯಲ್ಲಿನ ಸಮರ್ಪಕ ನಿರ್ವಹಣೆಯ ಹಿನ್ನೆಲೆಯ ಜೊತೆಗೆ ಸ್ಥಳೀಯ ದಾನಿಗಳು ಮತ್ತು ಪಂಚಾಯಿತಿಯ ಸಹಕಾರದೊಂದಿಗೆ ಬಹುತೇಕವಾಗಿ ಶಾಲೆಯ ವಾತಾವರಣವನ್ನು ಕಲಿಕೆಯ ಪ್ರಯೋಗಕ್ಕೆ ವಿಸ್ತರಿಸಲಾಗಿದೆ ಎಂದರು.

” ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನೂ ಒದಗಿಸಿ ಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ದಾನಿಗಳ ಸಹಕಾರ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರ ಬಹಳ ಪ್ರಮುಖವಾಗಿದೆ. ಶಾಲೆಯನ್ನು ಮತ್ತಷ್ಟು ಮಕ್ಕಳ ಕಲಿಕೆಯ ಕಡೆ ಕೊಂಡೊಯ್ಯುವ ಚಿಂತನೆ ಹೊಂದಲಾಗಿದೆ.”

-ಬ್ಯಾಡರಹಳ್ಳಿ ಭಾಸ್ಕರ್, ಮುಖ್ಯಶಿಕ್ಷಕ

 

 

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago