Andolana originals

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್

ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ

ಕೆ.ಆರ್.ನಗರ: ಫೆಬ್ರವರಿ ೧೭ರ ಮಂಗಳವಾರ ಶ್ರೀ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಇದಕ್ಕಾಗಿ ಆದಿಶಕ್ತಿ ತೋಪಮ್ಮ ಟ್ರಸ್ಟ್ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಪಟ್ಟಣದ ೯ ಗ್ರಾಮಗಳ ಒಕ್ಕಲುತನದಿಂದ ಪೂಜೆ ಪಡೆಯುವ ಶ್ರೀ ಆದಿಶಕ್ತಿ ತೋಪಮ್ಮ ಪಟ್ಟಣದ ಹೆಬ್ಬಾಗಿಲು ಮೈಸೂರು-ಹಾಸನ ರಸ್ತೆಯ ಎಡಭಾಗದಲ್ಲಿ ನೆಲೆಸಿದ್ದಾಳೆ.

ಆದಿಶಕ್ತಿ ತೋಪಮ್ಮ ಅಥವಾ ತೋಪಮ್ಮ ದೇವಿ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಹಳೆಯ ಮೈಸೂರು ಭಾಗ ದಲ್ಲಿ (ಮಂಡ್ಯ, ಮೈಸೂರು ಜಿಲ್ಲೆ) ಪೂಜಿಸಲ್ಪಡುವ ಅತ್ಯಂತ ಶಕ್ತಿಶಾಲಿ ಗ್ರಾಮದೇವತೆ. ಇವಳು ದುರ್ಗಾ ಅಥವಾ ಪಾರ್ವತಿಯ ಅವತಾರವೆಂದು ನಂಬಲಾಗಿದ್ದು, ಗ್ರಾಮದ ರಕ್ಷಕಿ, ಬೆಳೆಗಳಿಗೆ ಒಳಿತು ಮಾಡುವವರು ಮತ್ತು ಮಕ್ಕಳನ್ನು ಕಾಪಾಡುವ ತಾಯಿಯಾಗಿ ಪೂಜಿಸಲ್ಪಡುತ್ತಾಳೆ. ತೋಪಮ್ಮ ದೇವಿಗೆ ಹರಕೆ ಹೊತ್ತರೆ, ಭಕ್ತರ ಕಷ್ಟಗಳು ದೂರಾಗುತ್ತವೆ ಮತ್ತು ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ ಜನರಲ್ಲಿದೆ.

ಈ ದೇವಿಯ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಉತ್ಸವದಲ್ಲಿ ದೇವಿಯ ಆಭರಣಗಳು, ಪೂಜಾ ವಿಧಿವಿಧಾನಗಳು, ಮತ್ತು ಭಕ್ತರ ಹರಕೆಗಳು, ಮುತ್ತೈದೆಯರು ದೇವಿಗೆ ಮಡಿಲು ತುಂಬುವುದು ವಿಶೇಷವಾಗಿದೆ.

ಐತಿಹ್ಯ: ದೇವಿಯು ಸಾಮಾನ್ಯವಾಗಿ ತೋಪಿನ ಮರ (ಒಂದು ರೀತಿಯ ಕಾಡು ಮರ ಅಥವಾ ಪವಿತ್ರ ಮರ) ಅಥವಾ ಅರಣ್ಯ ಪ್ರದೇಶದಲ್ಲಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ಅದರಿಂದಲೇ ‘ತೋಪಮ್ಮ’ ಎಂಬ ಹೆಸರು ಬಂದಿದೆ ಎನ್ನಲಾಗಿದೆ. ಹಲವು ವರ್ಷಗಳ ಹಿಂದೆ ಭಕ್ತರೇ ಪೂಜೆ ಮಾಡಿಕೊಳ್ಳುತ್ತಿದ್ದರು. ತದ ನಂತರ ಅರ್ಚಕರನ್ನು ನೇಮಿಸಿ ಪೂಜೆ ಸಲ್ಲಿಸಲಾಗುತ್ತಿದೆ.

” ಆದಿಶಕ್ತಿ ತೋಪಮ್ಮ ದೇವಸ್ಥಾನಕ್ಕೆ ಬಂದು ಶ್ರದ್ಧಾಭಕ್ತಿಯಿಂದ ಭಕ್ತರು ಪೂಜಿಸಿದರೆ ವಿವಾಹ, ಸಂತಾನ ಭಾಗ್ಯ ಲಭಿಸುತ್ತದೆ. ವ್ಯಾಪಾರ, ವ್ಯವಹಾರ ಲಾಭ ಉಂಟಾಗುತ್ತದೆ. ವ್ಯಾಜ್ಯಗಳು ಬಗೆಹರಿಯುತ್ತವೆ. ದೂರವಾಗಿ ಶೀಘ್ರವಾಗಿ ಜೀವನದಲ್ಲಿ ಸುಖ, ಶಾಂತಿ ನೆಲೆಸುವ ಜತೆಗೆ ಇಷ್ಟಾರ್ಥಗಳು ಈಡೇರುತ್ತವೆ ಎಂಬುದು ಭಕ್ತರ ನಂಬಿಕೆಯಾಗಿದೆ. ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ.”

-ಕೆ.ಪಿ.ಜಗದೀಶ್, ಕಾರ್ಯದರ್ಶಿ, ಶ್ರೀ ಆದಿಶಕ್ತಿ ತೋಪಮ್ಮ ಟ್ರಸ್ಟ್

” ದೇಗುಲದಲ್ಲಿ ಪ್ರತಿನಿತ್ಯ ವಿಶೇಷ ಪೂಜೆಗಳು ನಡೆಯುತ್ತವೆ. ಮಂಗಳವಾರ, ಶುಕ್ರವಾರ ಹಾಗೂ ಭಾನುವಾರ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ನವರಾತ್ರಿ ಸಂದರ್ಭದಲ್ಲಿ ೯ ದಿನಗಳು ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗುತ್ತದೆ. ಆಷಾಢ ಮಾಸದಲ್ಲಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ. ಕಾರ್ತಿಕ ಮಾಸದಲ್ಲಿ ದೀಪೋತ್ಸವ ಹಮ್ಮಿಕೊಳ್ಳಲಾಗುತ್ತದೆ.”

-ಚೌಕಹಳ್ಳಿ ರಾಜಣ್ಣ, ಅಧ್ಯಕ್ಷರು, ಶ್ರೀ ಆದಿಶಕ್ತಿ ತೋಪಮ್ಮ ಟ್ರಸ್ಟ್‌ 

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

9 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

12 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

12 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

12 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

12 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

12 hours ago