Andolana originals

ಕೆಲಸ ಅರಸಿ ಕೊಡಗಿಗೆ ಗುಳೆ ಹೊರಟ ಆದಿವಾಸಿ ಜನರು

ಹನೂರು ತಾಲ್ಲೂಕಿನ ಮ.ಬೆಟ್ಟ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಲ 150ಕ್ಕೂ ಹೆಚ್ಚು ಮಂದಿ ಗುಳೆ

ಹನೂರು: ತಾಲ್ಲೂಕಿನ ಕಾಡಂಚಿನ ಗ್ರಾಮ ಗಳ ಆದಿವಾಸಿ ಸಮುದಾಯದವರು ನರೇಗಾ ಯೋಜನೆಯಡಿ ಸಮರ್ಪಕವಾಗಿ ಕೂಲಿ ಕೆಲಸ ಸಿಗದೇ ಇರುವುದರಿಂದ ಕೊಡಗಿನ ಕಾಫಿ ತೋಟಗಳಿಗೆ ಗುಳೆ ಹೊರಟಿದ್ದಾರೆ.

ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಣೆ ಹೊಲ, ಮೆಂದಾರೆ, ಗೊರಸಾಣೆ, ಕೋಣನಕೆರೆ, ಪೊನ್ನಾಚಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಪೊನ್ನಾಚಿ ಗ್ರಾಮದವರು, ಮೀಣ್ಯಂ ಗ್ರಾಪಂ ವ್ಯಾಪ್ತಿಯ ಸೂಳೆಕೋಬೆ ಗ್ರಾಮದ ೧೫೦ಕ್ಕೂ ಹೆಚ್ಚು ನಿವಾಸಿಗಳು ಬುಧವಾರ ತಡರಾತ್ರಿ ೫ ಗೂಡ್ಸ್ ವಾಹನಗಳಲ್ಲಿ ಕೂಲಿ ಕೆಲಸಕ್ಕಾಗಿ ಕೊಡಗಿಗೆ ತೆರಳಿದ್ದಾರೆ.

ಮ. ಬೆಟ್ಟಕ್ಕೆ ಬರುತ್ತಿದ್ದ ಬಹುತೇಕ ಭಕ್ತಾದಿ ಗಳು ಜಾತ್ರಾ ಮಹೋತ್ಸವ, ಹಬ್ಬ ಹರಿದಿನ, ಅಮಾವಾಸ್ಯೆ, ರಜಾ ದಿನಗಳು ಸೇರಿದಂತೆ ವಿಶೇಷ ದಿನಗಳಲ್ಲಿ ನಾಗಮಲೆ ಕ್ಷೇತ್ರಕ್ಕೆ ಪಾದ ಯಾತ್ರೆಯ ಮೂಲಕ ತೆರಳಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ ೧ ವರ್ಷದಿಂದ ನಾಗಮಲೆ ಕ್ಷೇತ್ರಕ್ಕೆ ಭಕ್ತಾದಿಗಳು ತೆರಳಲು ನಿಷೇಧ ಹೇರಲಾಗಿದೆ. ಇದರಿಂದ ಭಕ್ತರನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಬಹುತೇಕ ಕುಟುಂಬಗಳು ಬೀದಿಗೆ ಬಂದಿವೆ.

ನಾಗಮಲೆ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದರಿಂದ ಕಾಡಂಚಿನ ಗ್ರಾಮಗಳ ಜನರು ಇಂಡಿಗನತ್ತ ಗ್ರಾಮದಲ್ಲಿ ಹೋಟೆಲ್, ಟೀ ಅಂಗಡಿ, ಕಡಲೆಕಾಯಿ, ಸ್ಥಳೀಯವಾಗಿ ಬೆಳೆಯುವ ಪದಾರ್ಥಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. ೧ ವರ್ಷದಿಂದ ನಾಗಮಲೆ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಹಾಗೂ ಜೀಪ್‌ಗಳ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ಇದನ್ನೇ ನಂಬಿ ಜೀವನ ನಡೆಸುತ್ತಿದ್ದ ಹಲವಾರು ಕುಟುಂಬಗಳು ಕೂಲಿ ಅರಸಿ ತಮಿಳುನಾಡು, ಕೇರಳ ರಾಜ್ಯಗಳ ಕಡೆಗೆ ವಲಸೆ ಹೊರಟಿದ್ದಾರೆ.

೨ ತಿಂಗಳುಗಳಿಂದ ಆನ್‌ಲೈನ್ ಮೂಲಕ ನಾಗಮಲೆ ಕ್ಷೇತ್ರಕ್ಕೆ ತೆರಳಲು ಅರಣ್ಯ ಇಲಾಖೆ ವತಿಯಿಂದ ಆನ್‌ಲೈನ್ ಮೂಲಕ ಅನುಮತಿ ನೀಡಲಾಗಿದ್ದರೂ ಭಕ್ತಾದಿಗಳ ಸಂಖ್ಯೆ ಕ್ಷೀಣಿಸಿರುವುದರಿಂದ ಮ. ಬೆಟ್ಟ ಗ್ರಾಪಂ ವ್ಯಾಪ್ತಿಯ ನಿವಾಸಿಗಳು ಗುಳೆ ಹೊರಟಿದ್ದಾರೆ.

ಮೆಂದಾರೆಯಲ್ಲಿ ಯಾವುದೇ ಕೆಲಸವಿಲ್ಲದೆ ಇರುವುದರಿಂದ ಕಾಫಿ ತೋಟಕ್ಕೆ ಕೆಲಸಕ್ಕಾಗಿ ಹೋಗುತ್ತಿದ್ದೇವೆ. ಎರಡು ತಿಂಗಳು ಅಲ್ಲಿಯೇ ಇದ್ದು ಕಾಫಿ ಹಾಗೂ ಮೆಣಸು ಕೊಯ್ಲು ಮುಗಿದ ನಂತರ ವಾಪಸ್ ಗ್ರಾಮಕ್ಕೆ ಬರುತ್ತೇವೆ. ಸರ್ಕಾರ ಮೆಂದಾರೆ ಗ್ರಾಮವನ್ನು ಶೀಘ್ರದಲ್ಲಿ ಸ್ಥಳಾಂತರ ಮಾಡಿದರೆ ನಮ್ಮ ಜೀವನವನ್ನು ರೂಪಿಸಿಕೊಳ್ಳಲು ಅವಕಾಶ ಸಿಗುತ್ತದೆ. -ಪಡಗಲ, ಮೆಂದಾರೆ ನಿವಾಸಿ ಮೆಂದಾರೆ,

ಇಂಡಿಗನತ್ತ, ಕಾಡುಹೊಲ ಗ್ರಾಮಗಳ ವಿವಿಧ ಕಾಮಗಾರಿಗಳಿಗೆ ಈಗಾಗಲೇ ಹಿರಿಯ ಅಽಕಾರಿಗಳಿಂದ ಅನು ಮತಿ ಸಿಕ್ಕಿದೆ. ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಇರುವ ವರು ಕೂಲಿ ಕೆಲಸಕ್ಕೆ ಅರ್ಜಿ ಸಲ್ಲಿಸಿದರೆ ನಾಳೆಯಿಂದಲೇ ಅನು ಮತಿ ನೀಡಲಾಗುವುದು. ಕೆಲವು ಗ್ರಾಮಗಳಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಲಿ ಕೆಲಸಕ್ಕೆ ತೆರಳಿದ್ದಾರೆ. ಆದರೆ ನರೇಗಾ ಯೋಜನೆ ಯಡಿ ಕೂಲಿ ಕೆಲಸ ಸಿಗುತ್ತಿಲ್ಲ ಎಂಬುದು ಸತ್ಯಕ್ಕೆ ದೂರವಾಗಿದೆ. -ಕಿರಣ್, ಪಿಡಿಒ, ಮಲೆ ಮಹದೇಶ್ವರ ಬೆಟ್ಟ

ನಮ್ಮ ಭಾಗದಲ್ಲಿ ನರೇಗಾ ಯೋಜನೆಯಡಿ ಸಮರ್ಪಕ ಕೂಲಿ ಕೆಲಸಗಳು ಸಿಗುತ್ತಿಲ್ಲ. ಈ ಬಾರಿ ಮಳೆಯನ್ನೇ ನಂಬಿಕೊಂಡು ಬಿತ್ತನೆ ಮಾಡಿದ್ದು, ಉತ್ತಮ ಮಳೆಯಾಯಿತು. ಆದರೆ, ಬೆಳೆ ಕಟಾವು ಸಂದರ್ಭದಲ್ಲಿ ಸೈಕ್ಲೋನ್ ಉಂಟಾಗಿ ಮಳೆಗೆ ಬೆಳೆಗಳೆಲ್ಲ ಕೊಳೆತು ಹೋಗಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸರ್ಕಾರದಿಂದ ಇದುವರೆಗೂ ಬೆಳೆ ಪರಿಹಾರ ಬಾರದೇ ಇರುವುದರಿಂದ ಜೀವನ ಕಷ್ಟದಲ್ಲಿದೆ. ಹೀಗಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದೇವೆ. -ಭಾಗ್ಯ, ಆಣೆಹೊಲ ಗ್ರಾಮದ ನಿವಾಸಿ

 

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

10 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

14 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago