Andolana originals

ಬರಲಿದೆ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌

ಚಾ.ನಗರ ಹೊರವಲಯದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸುವ ಆಲೋಚನೆ

ಚಾಮರಾಜನಗರ: ನಗರದಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಲಾಗಿದ್ದು, ಇದು ಸಾಕಾರವಾದರೆ ಜಿಲ್ಲೆಯಲ್ಲಿನ ನಿರುದ್ಯೋಗ ಸಮಸ್ಯೆ ದೊಡ್ಡ ಮಟ್ಟದಲ್ಲಿ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾಲಿನ್ಸ್ ಏರೋಸ್ಪೇಸ್ ಕಂಪೆನಿಯು ಅಭಿವೃದ್ಧಿಪಡಿಸಿರುವ ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಚಾಲನೆ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರದಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದರು.

ಚಾಮರಾಜನಗರದಲ್ಲಿ ಅಂದರೆ ನಗರ-ನಂಜನಗೂಡು ಮುಖ್ಯರಸ್ತೆಯಲ್ಲಿರುವ ಬದನಗುಪ್ಪೆ -ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ನಿರ್ಮಾಣವಾಗಲಿದೆ ಎನ್ನಲಾಗಿದೆ. ಸದರಿ ಕೈಗಾರಿಕಾ ಪ್ರದೇಶದಲ್ಲಿ ಮೊದಲನೇ ಹಂತದಲ್ಲಿ ರೈತರಿಂದ ಸ್ವಾಧೀನ ಪಡಿಸಿಕೊಂಡಿರುವ ೯೮೬ ಎಕರೆ ಪ್ರದೇಶದಷ್ಟು ಭೂಮಿಯನ್ನು ಕೈಗಾರಿಕೆಗಳವರಿಗೆ ಹಂಚಿಕೆ ಮಾಡುವ ಕಾರ್ಯ ಈಗಾಗಲೇ ಪೂರ್ಣವಾಗಿದೆ.

ಎರಡನೇ ಹಂತದಲ್ಲಿ, ೯೦೭ ಎಕರೆ ಸ್ವಾಧೀನ ಮಾಡಿದ್ದು ರೈತರಿಗೆ ಪರಿಹಾರ ನೀಡುವ ಕೆಲಸ ಪ್ರಗತಿಯಲ್ಲಿದೆ. ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಎರಡನೇ ಹಂತದ ಈ ಭೂಮಿಯಲ್ಲೇ ತಲೆಎತ್ತಲಿದೆಯೋ ಅಥವಾ ೧,೨ನೇ ಹಂತದ ಭೂಮಿ ಸ್ವಾಧೀನ ಸ್ಥಳಕ್ಕೆ ಹೊಂದಿಕೊಂಡಂತೆ ಇನ್ನೂ ಸಾಕಷ್ಟು ಭೂಮಿ ಇದ್ದು ಅಲ್ಲಿ ಸ್ಥಾಪನೆಯಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್‌ಗೆ ನೂರಾರು ಎಕರೆಯಷ್ಟು ಭೂಮಿ ಬೇಕಾಗುತ್ತದೆ.ಇದರ ಒಟ್ಟು ಬಜೆಟ್ ಸುಮಾರು ೪ ಸಾವಿರ ಕೋಟಿ ರೂ. ಮೇಲಿದೆ ಎಂದು ಕೈಗಾರಿಕೋದ್ಯಮಿಯೊಬ್ಬರು ಮಾಹಿತಿ ನೀಡಿದ್ದಾರೆ. ಏರೋಸ್ಪೇಸ್‌ಗೆ ಸರ್ಕಾರ ಭೂಮಿ, ಸಬ್ಸಿಡಿಯನ್ನು ನೀಡು ತ್ತದೆ ಎಂದರೆ ಕನ್ನಡಿಗರಿಗೆ ಶೇ.೭೫ರಷ್ಟು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ದೊರೆಯುತ್ತದೆ ಎಂಬ ಸದುದ್ದೇಶವೂ ಇದೆ. ಸರೋಜಿನಿ ಮಹಿಷಿ ವರದಿ ಪ್ರಕಾರ ಶೇ.೧೦೦ರಷ್ಟು ಡಿ ಗ್ರೂಪ್ ಉದ್ಯೋಗವೂ ಸ್ಥಳೀಯರಿಗೆ ದೊರೆಯಲಿದೆ. ಏರೋಸ್ಪೇಸ್ ತುಂಬಾ ದೊಡ್ಡ ಇಂಡಸ್ಟ್ರಿ ಆಗಿರುವುದರಿಂದ ಇದಕ್ಕೆ ಪೂರಕವಾದ ಮೈಕ್ರೋ ಇಂಡಸ್ಟ್ರಿಗಳು ಕೂಡ ಕೆಲಸ ಶುರು ಮಾಡಲಿದ್ದು ಅವುಗಳಿಂದಲೂ ಹೆಚ್ಚಿನ ಉದ್ಯೋಗ ದೊರೆಯಲಿದೆ ಎಂಬ ನಿರೀಕ್ಷೆ ಇದೆ. ಇದೆಲ್ಲದರ ಹಿನ್ನೆಲೆಯಲ್ಲಿ ಸ್ಥಳೀಯ ಜನರ ಜೀವನ ಮಟ್ಟ ಸುಧಾರಿಸುತ್ತದೆ. ಆರ್ಥಿಕ ಬೆಳವಣಿಗೆ ಆಗುತ್ತದೆ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಗೆ ಇದು ಮುಂಗಾಣಿಕೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಎರಡನೇ, ಮೂರನೇ ಮತ್ತು ನಂತರದ ನಗರಗಳಲ್ಲೂ ಇಂತಹ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆಸಕ್ತಿ ತೋರಲು ಮುಖ್ಯ ಕಾರಣಗಳಲ್ಲಿ ಉದ್ಯೋಗ ಸೃಷ್ಟಿಯೂ ಒಂದಾಗಿದೆ.ಅದೇ ಕಾರಣಕ್ಕೆ ಸರ್ಕಾರ ಗಡಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದೆ ಎನ್ನಲಾಗಿದೆ.

‘ಕೆಐಎಡಿಬಿ ಭೂಮಿ ಹಂಚಿಕೆ ಘೋಷಣೆ ಆಗಬಹುದು’: 

ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಗಾಗಿ ಬದನಗುಪ್ಪೆ -ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭೂಮಿ ಹಂಚಿಕೆ ಅಥವಾ ಒಪ್ಪಂದ ಆಗಿದೆಯೇ ಎಂದು ಕೆಐಎಡಿಬಿ ಇಂಜಿನಿಯರ್‌ವೊಬ್ಬರನ್ನು ಕೇಳಿದಾಗ ಅಂತಹ ಯಾವುದೇ ಮಾಹಿತಿ ಇಲ್ಲ. ಈಗಷ್ಟೇ ಘೋಷಣೆ ಆಗಿರುವುದರಿಂದ ಮುಂದೆ ಈ ಸಂಬಂಧ ಆದೇಶ ಆಗಬಹುದು ಎಂದು ಪ್ರತಿಕ್ರಿಯಿಸಿದರು.

” ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಅನ್ನು ಚಾಮರಾಜನಗರದಲ್ಲಿ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿಯವರು ಇತ್ತೀಚೆಗೆ ಘೋಷಣೆ ಮಾಡಿದ್ದಾರೆ. ಇದು ಹೈಪವರ್ ಕಮಿಟಿ ತೀರ್ಮಾನ. ಹೆಚ್ಚಿನ ಮಾಹಿತಿ ಸದ್ಯಕ್ಕೆ ನಮಗೆ ಲಭ್ಯ ಇಲ್ಲ.”

ದೊರೆರಾಜು, ಜಂಟಿ ನಿರ್ದೇಶಕರು, ಕೈಗಾರಿಕಾ ಇಲಾಖೆ, ಚಾ.ನಗರ.

” ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಅನ್ನು ಸ್ಥಾಪನೆಮಾಡುವುದಾಗಿ ಸಿಎಂ ಹೇಳಿರುವುದು ತುಂಬಾ ಒಳ್ಳೆಯ ಬೆಳವಣಿಗೆ. ಇದರಿಂದ ನಿರುದ್ಯೋಗಸಮಸ್ಯೆ ಆದಷ್ಟು ಕಡಿಮೆಯಾಗಿ ಜನರು ಉತ್ತಮ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಲಿದೆ.”

ಕೆ.ಎಸ್.ಸೋಮಶೇಖರ್, ಗ್ರಾಪಂ ಸದಸ್ಯ, ಕೆಲ್ಲಂಬಳ್ಳಿ 

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

10 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

10 hours ago