Andolana originals

3 ತಿಂಗಳ ನಂತರ ಕಬಿನಿ ಡ್ಯಾಂನ 4 ಗೇಟ್‌ಗಳ ಮೂಲಕ ನದಿಗೆ ನೀರು

ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಕ್ರಮ; ಕುಡಿಯುವ ನೀರು ಪೂರೈಕೆಯ ಉದ್ದೇಶ

ಮಂಜು ಕೋಟೆ
ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯದ ಪ್ರಮುಖ ನಾಲ್ಕು ಗೇಟುಗಳ ಮೂಲಕ ೩ ತಿಂಗಳ ನಂತರ ಮತ್ತೆ ನದಿಗೆ ನೀರು ಬಿಡಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಕಬಿನಿ ಜಲಾಶಯದಿಂದ ೩ ತಿಂಗಳ ನಂತರ ಮತ್ತೆ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ೧,೦೦೦ ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗಿದೆ.

ಮೈಸೂರು, ಮಂಡ್ಯ, ಬೆಂಗಳೂರು, ಇನ್ನಿತರ ಪ್ರದೇಶಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯ ದಿಂದ ನೀರು ಬಿಡಲಾಗುತ್ತಿದೆ. ಪ್ರತಿ ಸಾಲಿನಲ್ಲೂ ಜಲಾಶಯದಿಂದ ಕುಡಿಯುವ ನೀರನ್ನು ಜಲಾಶಯದ ಪಕ್ಕದಲ್ಲಿರುವ ಸುಭಾಷ್ ವಿದ್ಯುತ್ ಘಟಕದ ಮೂಲಕ ಹರಿಸಲಾಗುತ್ತಿತ್ತು. ಆದರೆ ಒಂದು ತಿಂಗಳಿನಿಂದ ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಘಟಕದ ವರಿಗೆ ನೀರಿನ ಅಗತ್ಯವಿಲ್ಲದ್ದರಿಂದ ನೀರಾವರಿ ಇಲಾಖೆಯ ಅಧಿಕಾರಿಗಳು ೪ ಗೇಟ್‌ಗಳ ಮೂಲಕ ಕುಡಿಯುವ ನೀರಿಗಾಗಿ ನದಿಗೆ ನೀರು ಹರಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃ ತ್ವದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ನಂತರ ಅಕ್ಟೋಬರ್ ತಿಂಗಳಿನಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯದ ನಾಲ್ಕು ಗೇಟ್‌ಗಳ ಮುಖಾಂತರ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿ ಸಲಾಗಿತ್ತು. ಮತ್ತೆ ಈಗ ಜಲಾಶಯದಿಂದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ.

ಬೇಸಿಗೆ ಸಂದರ್ಭದಲ್ಲಿ ಜಲಾಶಯದ ಸುಭಾಷ್ ಘಟಕದಿಂದ ಕುಡಿಯಲು ನೀರು ಬಿಟ್ಟರೂ ನದಿಯಲ್ಲಿ ನೀರು ಹೋಗುತ್ತಿರುವುದೇ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ಜಲಾಶಯದ ಗೇಟ್‌ಗಳ ಮೂಲಕ ನೀರು ಹೋಗುತ್ತಿರುವುದರಿಂದ ಪ್ರವಾಸಿಗರಿಗೆ, ಜನಸಾಮಾನ್ಯರಿಗೆ ಆಕರ್ಷಕವಾಗಿ ಕಾಣುತ್ತಿದೆ. ಹೀಗಾಗಿ ಗೇಟಿನಿಂದ ಧುಮ್ಮಿಕ್ಕುವ ನೀರನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ.

ನಾಲ್ಕು ಗೇಟ್‌ಗಳ ಮೂಲಕ ತಲಾ ಒಂದು ಗೇಟಿನಲ್ಲಿ ೨೫೦ ಕ್ಯೂಸೆಕ್ಸ್‌ನಂತೆ ೪ ಗೇಟ್‌ಗಳಲ್ಲಿ ಒಂದು ಸಾವಿರ ಕ್ಯೂಸೆಕ್ಸ್ ನೀರು ಹರಿದುಹೋಗುತ್ತಿದೆ.

ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳಿದ್ದು, ಈಗ ಜಲಾಶಯದಲ್ಲಿ ನೀರಿನ ಮಟ್ಟ ೭೯ ಅಡಿಗಳಷ್ಟು ಸಂಗ್ರಹವಾಗಿದೆ. ಮಳೆ ಇಲ್ಲದ ಕಾರಣ ಒಳಹರಿವು ಬರುತ್ತಿಲ್ಲ. ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿ ಜಲಾಶಯದಲ್ಲಿ ೭೨ ಅಡಿಗಳಷ್ಟು ನೀರಿತ್ತು.

ಬೆಂಗಳೂರು, ಮಂಡ್ಯ, ಮೈಸೂರು ಭಾಗಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರನ್ನು ಬಿಡಲಾಗುತ್ತಿದೆ. ಜಲಾಶಯ ಸಮೀಪದ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ -ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

21 seconds ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

18 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

39 mins ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

60 mins ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

2 hours ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

2 hours ago