Andolana originals

3 ತಿಂಗಳ ನಂತರ ಕಬಿನಿ ಡ್ಯಾಂನ 4 ಗೇಟ್‌ಗಳ ಮೂಲಕ ನದಿಗೆ ನೀರು

ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಕ್ರಮ; ಕುಡಿಯುವ ನೀರು ಪೂರೈಕೆಯ ಉದ್ದೇಶ

ಮಂಜು ಕೋಟೆ
ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯದ ಪ್ರಮುಖ ನಾಲ್ಕು ಗೇಟುಗಳ ಮೂಲಕ ೩ ತಿಂಗಳ ನಂತರ ಮತ್ತೆ ನದಿಗೆ ನೀರು ಬಿಡಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಕಬಿನಿ ಜಲಾಶಯದಿಂದ ೩ ತಿಂಗಳ ನಂತರ ಮತ್ತೆ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ೧,೦೦೦ ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗಿದೆ.

ಮೈಸೂರು, ಮಂಡ್ಯ, ಬೆಂಗಳೂರು, ಇನ್ನಿತರ ಪ್ರದೇಶಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯ ದಿಂದ ನೀರು ಬಿಡಲಾಗುತ್ತಿದೆ. ಪ್ರತಿ ಸಾಲಿನಲ್ಲೂ ಜಲಾಶಯದಿಂದ ಕುಡಿಯುವ ನೀರನ್ನು ಜಲಾಶಯದ ಪಕ್ಕದಲ್ಲಿರುವ ಸುಭಾಷ್ ವಿದ್ಯುತ್ ಘಟಕದ ಮೂಲಕ ಹರಿಸಲಾಗುತ್ತಿತ್ತು. ಆದರೆ ಒಂದು ತಿಂಗಳಿನಿಂದ ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಘಟಕದ ವರಿಗೆ ನೀರಿನ ಅಗತ್ಯವಿಲ್ಲದ್ದರಿಂದ ನೀರಾವರಿ ಇಲಾಖೆಯ ಅಧಿಕಾರಿಗಳು ೪ ಗೇಟ್‌ಗಳ ಮೂಲಕ ಕುಡಿಯುವ ನೀರಿಗಾಗಿ ನದಿಗೆ ನೀರು ಹರಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃ ತ್ವದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ನಂತರ ಅಕ್ಟೋಬರ್ ತಿಂಗಳಿನಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯದ ನಾಲ್ಕು ಗೇಟ್‌ಗಳ ಮುಖಾಂತರ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿ ಸಲಾಗಿತ್ತು. ಮತ್ತೆ ಈಗ ಜಲಾಶಯದಿಂದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ.

ಬೇಸಿಗೆ ಸಂದರ್ಭದಲ್ಲಿ ಜಲಾಶಯದ ಸುಭಾಷ್ ಘಟಕದಿಂದ ಕುಡಿಯಲು ನೀರು ಬಿಟ್ಟರೂ ನದಿಯಲ್ಲಿ ನೀರು ಹೋಗುತ್ತಿರುವುದೇ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ಜಲಾಶಯದ ಗೇಟ್‌ಗಳ ಮೂಲಕ ನೀರು ಹೋಗುತ್ತಿರುವುದರಿಂದ ಪ್ರವಾಸಿಗರಿಗೆ, ಜನಸಾಮಾನ್ಯರಿಗೆ ಆಕರ್ಷಕವಾಗಿ ಕಾಣುತ್ತಿದೆ. ಹೀಗಾಗಿ ಗೇಟಿನಿಂದ ಧುಮ್ಮಿಕ್ಕುವ ನೀರನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ.

ನಾಲ್ಕು ಗೇಟ್‌ಗಳ ಮೂಲಕ ತಲಾ ಒಂದು ಗೇಟಿನಲ್ಲಿ ೨೫೦ ಕ್ಯೂಸೆಕ್ಸ್‌ನಂತೆ ೪ ಗೇಟ್‌ಗಳಲ್ಲಿ ಒಂದು ಸಾವಿರ ಕ್ಯೂಸೆಕ್ಸ್ ನೀರು ಹರಿದುಹೋಗುತ್ತಿದೆ.

ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳಿದ್ದು, ಈಗ ಜಲಾಶಯದಲ್ಲಿ ನೀರಿನ ಮಟ್ಟ ೭೯ ಅಡಿಗಳಷ್ಟು ಸಂಗ್ರಹವಾಗಿದೆ. ಮಳೆ ಇಲ್ಲದ ಕಾರಣ ಒಳಹರಿವು ಬರುತ್ತಿಲ್ಲ. ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿ ಜಲಾಶಯದಲ್ಲಿ ೭೨ ಅಡಿಗಳಷ್ಟು ನೀರಿತ್ತು.

ಬೆಂಗಳೂರು, ಮಂಡ್ಯ, ಮೈಸೂರು ಭಾಗಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರನ್ನು ಬಿಡಲಾಗುತ್ತಿದೆ. ಜಲಾಶಯ ಸಮೀಪದ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ -ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

30 mins ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

3 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

3 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

3 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

3 hours ago