Andolana originals

3 ತಿಂಗಳ ನಂತರ ಕಬಿನಿ ಡ್ಯಾಂನ 4 ಗೇಟ್‌ಗಳ ಮೂಲಕ ನದಿಗೆ ನೀರು

ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಕ್ರಮ; ಕುಡಿಯುವ ನೀರು ಪೂರೈಕೆಯ ಉದ್ದೇಶ

ಮಂಜು ಕೋಟೆ
ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯದ ಪ್ರಮುಖ ನಾಲ್ಕು ಗೇಟುಗಳ ಮೂಲಕ ೩ ತಿಂಗಳ ನಂತರ ಮತ್ತೆ ನದಿಗೆ ನೀರು ಬಿಡಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಕಬಿನಿ ಜಲಾಶಯದಿಂದ ೩ ತಿಂಗಳ ನಂತರ ಮತ್ತೆ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ೧,೦೦೦ ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗಿದೆ.

ಮೈಸೂರು, ಮಂಡ್ಯ, ಬೆಂಗಳೂರು, ಇನ್ನಿತರ ಪ್ರದೇಶಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯ ದಿಂದ ನೀರು ಬಿಡಲಾಗುತ್ತಿದೆ. ಪ್ರತಿ ಸಾಲಿನಲ್ಲೂ ಜಲಾಶಯದಿಂದ ಕುಡಿಯುವ ನೀರನ್ನು ಜಲಾಶಯದ ಪಕ್ಕದಲ್ಲಿರುವ ಸುಭಾಷ್ ವಿದ್ಯುತ್ ಘಟಕದ ಮೂಲಕ ಹರಿಸಲಾಗುತ್ತಿತ್ತು. ಆದರೆ ಒಂದು ತಿಂಗಳಿನಿಂದ ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಘಟಕದ ವರಿಗೆ ನೀರಿನ ಅಗತ್ಯವಿಲ್ಲದ್ದರಿಂದ ನೀರಾವರಿ ಇಲಾಖೆಯ ಅಧಿಕಾರಿಗಳು ೪ ಗೇಟ್‌ಗಳ ಮೂಲಕ ಕುಡಿಯುವ ನೀರಿಗಾಗಿ ನದಿಗೆ ನೀರು ಹರಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃ ತ್ವದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ನಂತರ ಅಕ್ಟೋಬರ್ ತಿಂಗಳಿನಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯದ ನಾಲ್ಕು ಗೇಟ್‌ಗಳ ಮುಖಾಂತರ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿ ಸಲಾಗಿತ್ತು. ಮತ್ತೆ ಈಗ ಜಲಾಶಯದಿಂದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ.

ಬೇಸಿಗೆ ಸಂದರ್ಭದಲ್ಲಿ ಜಲಾಶಯದ ಸುಭಾಷ್ ಘಟಕದಿಂದ ಕುಡಿಯಲು ನೀರು ಬಿಟ್ಟರೂ ನದಿಯಲ್ಲಿ ನೀರು ಹೋಗುತ್ತಿರುವುದೇ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ಜಲಾಶಯದ ಗೇಟ್‌ಗಳ ಮೂಲಕ ನೀರು ಹೋಗುತ್ತಿರುವುದರಿಂದ ಪ್ರವಾಸಿಗರಿಗೆ, ಜನಸಾಮಾನ್ಯರಿಗೆ ಆಕರ್ಷಕವಾಗಿ ಕಾಣುತ್ತಿದೆ. ಹೀಗಾಗಿ ಗೇಟಿನಿಂದ ಧುಮ್ಮಿಕ್ಕುವ ನೀರನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ.

ನಾಲ್ಕು ಗೇಟ್‌ಗಳ ಮೂಲಕ ತಲಾ ಒಂದು ಗೇಟಿನಲ್ಲಿ ೨೫೦ ಕ್ಯೂಸೆಕ್ಸ್‌ನಂತೆ ೪ ಗೇಟ್‌ಗಳಲ್ಲಿ ಒಂದು ಸಾವಿರ ಕ್ಯೂಸೆಕ್ಸ್ ನೀರು ಹರಿದುಹೋಗುತ್ತಿದೆ.

ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳಿದ್ದು, ಈಗ ಜಲಾಶಯದಲ್ಲಿ ನೀರಿನ ಮಟ್ಟ ೭೯ ಅಡಿಗಳಷ್ಟು ಸಂಗ್ರಹವಾಗಿದೆ. ಮಳೆ ಇಲ್ಲದ ಕಾರಣ ಒಳಹರಿವು ಬರುತ್ತಿಲ್ಲ. ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿ ಜಲಾಶಯದಲ್ಲಿ ೭೨ ಅಡಿಗಳಷ್ಟು ನೀರಿತ್ತು.

ಬೆಂಗಳೂರು, ಮಂಡ್ಯ, ಮೈಸೂರು ಭಾಗಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರನ್ನು ಬಿಡಲಾಗುತ್ತಿದೆ. ಜಲಾಶಯ ಸಮೀಪದ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ -ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

5 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

37 mins ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

50 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

58 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago