Andolana originals

3 ತಿಂಗಳ ನಂತರ ಕಬಿನಿ ಡ್ಯಾಂನ 4 ಗೇಟ್‌ಗಳ ಮೂಲಕ ನದಿಗೆ ನೀರು

ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಕ್ರಮ; ಕುಡಿಯುವ ನೀರು ಪೂರೈಕೆಯ ಉದ್ದೇಶ

ಮಂಜು ಕೋಟೆ
ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯದ ಪ್ರಮುಖ ನಾಲ್ಕು ಗೇಟುಗಳ ಮೂಲಕ ೩ ತಿಂಗಳ ನಂತರ ಮತ್ತೆ ನದಿಗೆ ನೀರು ಬಿಡಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಕಬಿನಿ ಜಲಾಶಯದಿಂದ ೩ ತಿಂಗಳ ನಂತರ ಮತ್ತೆ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ೧,೦೦೦ ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗಿದೆ.

ಮೈಸೂರು, ಮಂಡ್ಯ, ಬೆಂಗಳೂರು, ಇನ್ನಿತರ ಪ್ರದೇಶಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯ ದಿಂದ ನೀರು ಬಿಡಲಾಗುತ್ತಿದೆ. ಪ್ರತಿ ಸಾಲಿನಲ್ಲೂ ಜಲಾಶಯದಿಂದ ಕುಡಿಯುವ ನೀರನ್ನು ಜಲಾಶಯದ ಪಕ್ಕದಲ್ಲಿರುವ ಸುಭಾಷ್ ವಿದ್ಯುತ್ ಘಟಕದ ಮೂಲಕ ಹರಿಸಲಾಗುತ್ತಿತ್ತು. ಆದರೆ ಒಂದು ತಿಂಗಳಿನಿಂದ ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಘಟಕದ ವರಿಗೆ ನೀರಿನ ಅಗತ್ಯವಿಲ್ಲದ್ದರಿಂದ ನೀರಾವರಿ ಇಲಾಖೆಯ ಅಧಿಕಾರಿಗಳು ೪ ಗೇಟ್‌ಗಳ ಮೂಲಕ ಕುಡಿಯುವ ನೀರಿಗಾಗಿ ನದಿಗೆ ನೀರು ಹರಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃ ತ್ವದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ನಂತರ ಅಕ್ಟೋಬರ್ ತಿಂಗಳಿನಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯದ ನಾಲ್ಕು ಗೇಟ್‌ಗಳ ಮುಖಾಂತರ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿ ಸಲಾಗಿತ್ತು. ಮತ್ತೆ ಈಗ ಜಲಾಶಯದಿಂದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ.

ಬೇಸಿಗೆ ಸಂದರ್ಭದಲ್ಲಿ ಜಲಾಶಯದ ಸುಭಾಷ್ ಘಟಕದಿಂದ ಕುಡಿಯಲು ನೀರು ಬಿಟ್ಟರೂ ನದಿಯಲ್ಲಿ ನೀರು ಹೋಗುತ್ತಿರುವುದೇ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ಜಲಾಶಯದ ಗೇಟ್‌ಗಳ ಮೂಲಕ ನೀರು ಹೋಗುತ್ತಿರುವುದರಿಂದ ಪ್ರವಾಸಿಗರಿಗೆ, ಜನಸಾಮಾನ್ಯರಿಗೆ ಆಕರ್ಷಕವಾಗಿ ಕಾಣುತ್ತಿದೆ. ಹೀಗಾಗಿ ಗೇಟಿನಿಂದ ಧುಮ್ಮಿಕ್ಕುವ ನೀರನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ.

ನಾಲ್ಕು ಗೇಟ್‌ಗಳ ಮೂಲಕ ತಲಾ ಒಂದು ಗೇಟಿನಲ್ಲಿ ೨೫೦ ಕ್ಯೂಸೆಕ್ಸ್‌ನಂತೆ ೪ ಗೇಟ್‌ಗಳಲ್ಲಿ ಒಂದು ಸಾವಿರ ಕ್ಯೂಸೆಕ್ಸ್ ನೀರು ಹರಿದುಹೋಗುತ್ತಿದೆ.

ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳಿದ್ದು, ಈಗ ಜಲಾಶಯದಲ್ಲಿ ನೀರಿನ ಮಟ್ಟ ೭೯ ಅಡಿಗಳಷ್ಟು ಸಂಗ್ರಹವಾಗಿದೆ. ಮಳೆ ಇಲ್ಲದ ಕಾರಣ ಒಳಹರಿವು ಬರುತ್ತಿಲ್ಲ. ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿ ಜಲಾಶಯದಲ್ಲಿ ೭೨ ಅಡಿಗಳಷ್ಟು ನೀರಿತ್ತು.

ಬೆಂಗಳೂರು, ಮಂಡ್ಯ, ಮೈಸೂರು ಭಾಗಗಳ ಜನರಿಗೆ ಕುಡಿಯುವ ನೀರಿಗಾಗಿ ಜಲಾಶಯದ ನಾಲ್ಕು ಗೇಟ್‌ಗಳ ಮೂಲಕ ನದಿಗೆ ನೀರನ್ನು ಬಿಡಲಾಗುತ್ತಿದೆ. ಜಲಾಶಯ ಸಮೀಪದ ವಿದ್ಯುತ್ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ -ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago