Andolana originals

ಮ.ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಸಕಲ ಸಿದ್ಧತೆ

ಮಹಾದೇಶ್ ಎಂ.ಗೌಡ

ಏ.೨೪ರಂದು ನಡೆಯಲಿರುವ ಸಭೆಯಲ್ಲಿ ಸಿಎಂ, ಡಿಸಿಎಂ, ಸಚಿವರು ಭಾಗಿ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ ೨೪ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಽಕಾರ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಮೂರು ಬಾರಿ ಮುಂದೂಡಲ್ಪಟ್ಟ ಸಂಪುಟ ಸಭೆಯನ್ನು ಏ.೨೪ರಂದು ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡುವಿನ ಮಲೆ ಮಹದೇಶ್ವರ ಪ್ರತಿಮೆ ಸ್ಥಳದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ತಜ್ಞರು ದೀಪದಗಿರಿ ಒಡ್ಡು ಎತ್ತರದ ಪ್ರದೇಶದಲ್ಲಿ ಇರುವುದರಿಂದ ಸಭೆ ನಡೆಸಲು ಸೂಕ್ತವಾಗಿಲ್ಲ ಎಂದು ವರದಿ ನೀಡಿದ ಹಿನ್ನೆಲೆಯಲ್ಲಿ ವಜ್ರಮಲೆ ಭವನ ಮುಂಭಾಗದ ಖಾಲಿ ನಿವೇಶನದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಂಪುಟ ಸಭೆಗೆ ಹಾಜರಾಗುವ ೩೪ ಸಚಿವರು, ವಿವಿಧ ಇಲಾಖೆಗಳ ಕಾರ್ಯದರ್ಶಿಗಳಿಗಾಗಿ ತಜ್ಞರ ಮಾರ್ಗದರ್ಶನದಲ್ಲಿ ಅಗತ್ಯ ಸಿದ್ಧತೆ ಭರದಿಂದ ಸಾಗಿದೆ.

ಸಭೆಗೆ ಸಿಎಂ, ಡಿಸಿಎಂ, ಸಚಿವರುಗಳು, ಹಿರಿಯ ಅಧಿಕಾರಿಗಳು ಆಗಮಿಸುವುದರಿಂದ ಕ್ಯಾಬಿನೆಟ್ ಸಭೆ ನಡೆಯುವ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಕ್ರಮ ವಹಿಸಲಾಗಿದೆ. ಕ್ಯಾಬಿನೆಟ್ ಸಭೆಯ ಆವರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದು ಬಂದೋಬಸ್ತ್ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.

ಪಾರ್ಕಿಂಗ್ ವ್ಯವಸ್ಥೆ: ಸಚಿವರು, ಶಾಸಕರು, ಮುಖ್ಯ ಕಾರ್ಯದರ್ಶಿಗಳು, ಅಪರ ಕಾರ್ಯದರ್ಶಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಿಯಾಗಲಿರುವುದರಿಂದ ನೂತನ ವಜ್ರಮಲೆ ವಸತಿಗೃಹದಲ್ಲಿರುವ ಕೆಳಹಂತದ ಪಾರ್ಕಿಂಗ್ ನಿಲುಗಡೆ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ೩೦೦ಕ್ಕೂ ಹೆಚ್ಚು ಕಾರುಗಳನ್ನು ನಿಲುಗಡೆ ಮಾಡಬಹುದು. ಇದಲ್ಲದೆ ಬೇರೆ ಸ್ಥಳದಲ್ಲಿ ೨೦೦ ವಾಹನಗಳನ್ನು ನಿಲ್ಲಿಸಲು ಕ್ರಮವಹಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದ್ದಾರೆ.

ತಾತ್ಕಾಲಿಕ ಹೆಲಿಪ್ಯಾಡ್ ವ್ಯವಸ್ಥೆ: ಸಿಎಂ, ಡಿಸಿಎಂ, ಸಚಿವರು ಹೆಲಿಕ್ಯಾಪ್ಟರ್ ಮೂಲಕ ಬರುವ ನಿರೀಕ್ಷೆ ಇರುವುದರಿಂದ ಹಾಲಿ ಇರುವ ಹೆಲಿಪ್ಯಾಡ್ ಜೊತೆಗೆ ಹೆಚ್ಚುವರಿ ಹೆಲಿಪ್ಯಾಡ್ಗಳನ್ನು ನಿರ್ಮಾಣ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದು, ಹಳೆಯೂರು ಸಮೀಪ ೩ ಹೆಚ್ಚುವರಿ ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ

” ಮ.ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತಸದ ವಿಚಾರ. ನಮ್ಮ ಕ್ಷೇತ್ರದಲ್ಲಿಯೇ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಎಲ್ಲ ಕಾಮಗಾರಿಗಳಿಗೂ ಚಾಲನೆ ಸಿಗಲಿದ್ದು, ಕ್ಷೇತ್ರದ ನೀರಾವರಿ, ರಸ್ತೆ, ಸಾರಿಗೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಬೇಕಾದ ಅನುದಾನ ನೀಡುವ ನಿರೀಕ್ಷೆಯಿದೆ.”

-ಎಂ.ಆರ್.ಮಂಜುನಾಥ್, ಶಾಸಕ

” ಸಚಿವ ಸಂಪುಟ ಸಭೆಯ ಬಂದೋಬಸ್ತ್‌ಗಾಗಿ ೨ ಡಿಐಜಿ, ೨ ಎಸ್‌ಪಿ, ೨ ಎಎಸ್‌ಪಿ, ೧೧ ಡಿವೈಎಸ್ಪಿ, ೩೧ ಇನ್‌ಸ್ಪೆಕ್ಟರ್ ಸೇರಿದಂತೆ ೨,೦೦೦ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.”

-ಧರ್ಮೇಂದ್ರ, ಡಿವೈಎಸ್ಪಿ, ಕೊಳ್ಳೇಗಾಲ ಉಪ ವಿಭಾಗ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago