ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ
ಮಹಾದೇಶ್ ಎಂ.ಗೌಡ
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೨೯ರಿಂದ ನವೆಂಬರ್೨ರವರೆಗೆ ಐದು ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ.
ದೀಪಾವಳಿ ಜಾತ್ರಾ ಮಹೋತ್ಸವ ಅ.೨೯ ರಂದು ಪ್ರಾರಂಭವಾಗಲಿದ್ದು, ಅಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸ ಲಾಗು ವುದು. ೩೦ರಂದು ದೀಪಾ ವಳಿ ಪ್ರಯುಕ್ತ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಎಣ್ಣೆ ಮಜ್ಜನ ಸೇವೆ ವಿವಿಧ ಉತ್ಸವಗಳು ನಡೆಯಲಿವೆ.
೩೧ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವ ಗಳು ನಡೆಯಲಿದ್ದು, ನವೆಂಬರ್ ೧ರಂದು ಅಮಾವಾಸ್ಯೆ ವಿಶೇಷ
ಪೂಜೆ ಹಾಗೂ ಉತ್ಸವಗಳು ಜರುಗಲಿವೆ. ನವೆಂಬರ್ ೨ರಂದು ಬೆಳಿಗ್ಗೆ ಮಹಾರಥೋತ್ಸವ ಜರುಗಲಿದ್ದು, ಅದೇ ದಿನ ರಾತ್ರಿ ಅಭಿಷೇಕದ ಪೂಜೆ ಮುಗಿದ ನಂತರ ಕೊಂಡೋತ್ಸವ ನಡೆಯಲಿದೆ. ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಹದೇಶ್ವರ ಬೆಟ್ಟಕ್ಕೆ ಪಾದ ಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿ ಗಳಿಗೆ ತಾಳಬೆಟ್ಟದಿಂದ ಮ.ಬೆಟ್ಟದವರೆಗಿನ ಮಾರ್ಗ ಮಧ್ಯದಲ್ಲಿ ೧೦ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಬೆಟ್ಟದ ಎರಡೂ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಜನರಿಗೆ ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಭವನದಲ್ಲಿ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು ಒಂದು ಬಾರಿಗೆ ೧,೫೦೦ ಜನರು ಪ್ರಸಾದ ಸ್ವೀಕರಿಸಬಹುದಾಗಿದೆ. ಇದಲ್ಲದೆ ಹಳೇ ದಾಸೋಹ ಭವನದ ಬಳಿ ವಿಶೇಷ ದಾಸೋಹ ಕೇಂದ್ರ ತೆರೆದು ದಿನದ ೨೪ ಗಂಟೆಯೂ ದಾಸೋಹ ಏರ್ಪಡಿಸಲಾಗುತ್ತದೆ.
ಈಗಾಗಲೇ ಸುಮಾರು ೬ರಿಂದ ೭ ಲಕ್ಷದವರೆಗೆ ಲಾಡುಗಳನ್ನು ತಯಾರು ಮಾಡಿ ಕೊಳ್ಳಲಾಗುತ್ತಿದೆ. ಈಗಾಗಲೇ ಮೂರೂವರೆ ಲಕ್ಷ ಲಾಡುಗಳನ್ನು ತಯಾರು ಮಾಡಿ ಸಂಗ್ರಹ ಮಾಡಲಾಗಿದೆ. ರಾಜಗೋಪುರದ ಎಡ ಹಾಗೂ ಬಲಭಾಗದಲ್ಲಿ ನೆರಳಿನ ವ್ಯವಸ್ಥೆ, ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಸ್ಥಳದಲ್ಲಿ ಹಾಗೂ ದಾಸೋಹ ಮುಂಭಾಗದಲ್ಲಿ ಶಾಮಿಯಾನ ಅಳವಡಿಸಲಾಗಿದೆ. ಬೆಟ್ಟದಲ್ಲಿರುವ ಶೌಚಾಲಯದ ಜೊತೆಗೆ ತಾಳಬೆಟ್ಟದಲ್ಲಿ ೫ ಹಾಗೂ ಮಲೆ ಮಹದೇಶ್ವರ ಬೆಟ್ಟದಲ್ಲಿ ೧ ಮೊಬೈಲ್ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ದೇವಸ್ಥಾನದ ಆವರಣ ಹಾಗೂ ಜನಸಂದಣಿ ಇರುವ ಕಡೆ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲಾಗಿದೆ.
ದೇವಸ್ಥಾನದ ರಾಜಗೋಪುರ ಮುಂಭಾಗ ಮತ್ತಿತರ ಜನಸಂದಣಿ ಇರುವ ಕಡೆ ಸ್ವಚ್ಛತೆ ಕಾಪಾಡಲು ಹೆಚ್ಚು ಪೌರಕಾರ್ಮಿಕ ಸಿಬ್ಬಂದಿ ಗಳನ್ನು ನಿಯೋಜಿಸಲಾಗಿದೆ. ಪಾದಯಾತ್ರೆಯ ಮೂಲಕ ಮ.ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ರಾಜಗೋಪುರದ
ಮಹಾದ್ವಾರದ ಬಳಿ ಪ್ರತ್ಯೇಕ ಕ್ಯೂಲೈನ್, ೬೦ ವರ್ಷ ಮೇಲ್ಪಟ್ಟವರಿಗೆ ಆಲಂಬಾಡಿ ಬಸವೇಶ್ವರ ಸ್ವಾಮಿಯ ಸಮೀಪ ಪ್ರತ್ಯೇಕ ಕ್ಯೂ ಲೈನ್, ಅತಿಥಿ ಗಣ್ಯರಿಗೆ ಗೇಟ್ ನಂಬರ್ ೪ರಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು
ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದ್ದಾರೆ.
ಪೊಲೀಸ್ ಬಂದೋಬಸ್ತ್: ಲಕ್ಷಾಂತರ ಜನರು ಶ್ರೀ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಬ್ಬರು ಡಿವೈಎಸ್ಪಿ, ೭ ಇನ್ಸ್ಪೆಕ್ಟರ್, ೩೪ ಎಸ್ಐ, ೫೨ ಎಎಸ್ಐ, ೨೨೭ ಪೇದೆಗಳು ೩೮ ಮಹಿಳಾ ಪೇದೆಗಳು ೨೩೮ ಗೃಹ ರಕ್ಷಕ ದಳದ ಸಿಬ್ಬಂದಿ, ೩ ಡಿಆರ್, ೧ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ.
ದ್ವಿಚಕ್ರ ವಾಹನಗಳಿಗೆ ನಿರ್ಬಂಧ
ಟ್ರಾಫಿಕ್ ಜಾಮ್ ತಡೆಗಟ್ಟಲು ಅ.೨೯ರ ಬೆಳಿಗ್ಗೆ ೬ ಗಂಟೆಯಿಂದ ನವೆಂಬರ್ ೨ರ ಸಂಜೆ ೬ ಗಂಟೆಯವರೆಗೆ ಮ.ಬೆಟ್ಟಕ್ಕೆ ದ್ವಿಚಕ್ರ
ವಾಹನದಲ್ಲಿ ಹೋಗುವುದನ್ನು ನಿರ್ಬಂಽಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಲ್ಲಿಂದ ಕೆಎಸ್ಆರ್ಟಿಸಿ ಬಸ್ ಮುಖಾಂತರ ಮಹದೇಶ್ವರ ಬೆಟ್ಟಕ್ಕೆ ತೆರಳಲು
ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.
ಕೆಎಸ್ಆರ್ಟಿಸಿಯಿಂದ ೩೫೦ ಬಸ್…
ಮ.ಬೆಟ್ಟದಲ್ಲಿ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಕೆಎಸ್ಆರ್ಟಿಸಿ ವತಿಯಿಂದ ೩೫೦ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ವಾಹನಗಳು ಕೆಟ್ಟು ನಿಂತರೆ ದುರಸ್ತಿ ಪಡಿಸಲು ೫೦ ಮಂದಿ ತಾಂತ್ರಿಕ ಸಿಬ್ಬಂದಿಗಳನ್ನು ಕೂಡ ನೇಮಕ ಮಾಡಿಕೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣ ಅಧಿಕಾರಿ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…