Andolana originals

ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ

ಕೆ. ಟಿ. ಮೋಹನ್ ಕುಮಾರ್

ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಮಾ. ೭ರಂದು ಹಾಗೂ ಮಾ. ೮ರಂದು ಜಾತ್ರಾ ಮಹೋತ್ಸವವು ಸಾವಿರಾರು ಜನರ ನಡುವೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಈಗಾಗಲೇ ಭರದ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಶ್ರೀ ಹುಣಸಮ್ಮ ತಾಯಿಯ ಹಬ್ಬದ ಅಂಗವಾಗಿ ದೇವಸ್ಥಾನ, ಮಿರ್ಲೆ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳು ನವ ವಧುವಿನಂತೆ ಸಿಂಗಾರಗೊಳ್ಳುತ್ತಿವೆ.

ದೇವಾಲಯದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಹಾಗೂ ದೇವಸ್ಥಾನಕ್ಕೆ ಬಣ್ಣದ ಲೇಪನ ಕಾರ್ಯ ಭರದಿಂದ ಸಾಗುತ್ತಿದೆ. ಮಾ. ೭ರಂದು ಶ್ರೀ ಹುಣಸಮ್ಮ ತಾಯಿಯ ರಥೋತ್ಸವದ ಅಂಗವಾಗಿ ನವಗ್ರಾಮಗಳಲ್ಲಿ ಹಬ್ಬವು ನಡೆಯಲಿದ್ದು, ಈ ಹಬ್ಬಕ್ಕೆ ತವರಿಗೆ ಆಗಮಿಸುವ ಹೆಣ್ಣುಮಕ್ಕಳು ದೇವಸ್ಥಾನಕ್ಕೆ ತೆರಳಿ ದೇವರಿಗೆ ಮಡಿಲು ತುಂಬಿಸುವ ಶಾಸ್ತ್ರ, ತಂಬಿಟ್ಟಿನ ಆರತಿ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುವುದು ಈ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಪದ್ಧತಿಯಾಗಿದೆ.

ಇಷ್ಟೇ ಅಲ್ಲದೆ ದೇವರಿಗೆ ವಿವಿಧ ರೀತಿಯ ಆರತಿಗಳನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಮಾ. ೮ರಂದು ನಡೆಯುವ ಶ್ರೀ ಹುಣಸಮ್ಮ ತಾಯಿಯ ರಥೋತ್ಸವಕ್ಕೆ ನವಗ್ರಾಮಗಳಾದ ಮಿರ್ಲೆ, ಶಾಬಾಳು, ನಾಟನಹಳ್ಳಿ, ಹಳೇ ಮಿರ್ಲೆ, ಕೊಡಿಯಾಲ, ಹನುಮನಹಳ್ಳಿ, ಬೀಚನಹಳ್ಳಿ, ನರಚನಹಳ್ಳಿ, ಬೀಚನಹಳ್ಳಿ ಕೊಪ್ಪಲು, ಮಾಳನಾಯಕನಹಳ್ಳಿ, ಮಾಳನಾಯಕನಹಳ್ಳಿ ಕೊಪ್ಪಲು ಗ್ರಾಮಗಳಿಂದ ಐದು ಸಿಡಿಗಳು ಮತ್ತು ನಾಲ್ಕು ರಥಗಳು ಆಗಮಿಸಲಿದ್ದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ನಂತರ ಮಿರ್ಲೆ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆಯು ಸಾಗಲಿದೆ. ಶ್ರೀ ಹುಣಸಮ್ಮ ತಾಯಿ ದೇವಾಲಯದ ಆವರಣಕ್ಕೆ ರಥವನ್ನು ಧಾರ್ಮಿಕ ವಿಧಿ- ವಿಧಾನಗಳೊಂದಿಗೆ ಎಳೆದು ತರಲಿದ್ದಾರೆ. ರಥೋತ್ಸವದ ದಿನದಂದು ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಗಳು ನಡೆಯಲಿವೆ.

ಜಾತ್ರಾ ಮಹೋತ್ಸವ ಮುಗಿದ ನಂತರ ಗ್ರಾಮದ ದೇವಸ್ಥಾನದ ಮುಂಭಾಗ ಇರುವ ಉಯ್ಯಾಲೆಯಲ್ಲಿ ಶ್ರೀ ಹುಣಸಮ್ಮ ತಾಯಿ ಆಟವಾಡುತ್ತಾಳೆ ಎಂಬ ನಂಬಿಕೆಯಿಂದ ರಾತ್ರಿ ೮ ಗಂಟೆಯ ನಂತರ ಈ ದೇವಸ್ಥಾನದ ಕಡೆಗೆ ಯಾರೂ ಹೋಗುವುದಿಲ್ಲ. ಇದು ಹಿಂದಿ ನಿಂದಲೂ ನಡೆದುಕೊಂಡು ಬರುತ್ತಿರುವ ಪದ್ಧತಿಯಾಗಿದೆ.

 

ಆಂದೋಲನ ಡೆಸ್ಕ್

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

3 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

4 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

5 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

6 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

6 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

8 hours ago