Andolana originals

ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ

ಕೆ. ಟಿ. ಮೋಹನ್ ಕುಮಾರ್

ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಮಾ. ೭ರಂದು ಹಾಗೂ ಮಾ. ೮ರಂದು ಜಾತ್ರಾ ಮಹೋತ್ಸವವು ಸಾವಿರಾರು ಜನರ ನಡುವೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಈಗಾಗಲೇ ಭರದ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಶ್ರೀ ಹುಣಸಮ್ಮ ತಾಯಿಯ ಹಬ್ಬದ ಅಂಗವಾಗಿ ದೇವಸ್ಥಾನ, ಮಿರ್ಲೆ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳು ನವ ವಧುವಿನಂತೆ ಸಿಂಗಾರಗೊಳ್ಳುತ್ತಿವೆ.

ದೇವಾಲಯದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಹಾಗೂ ದೇವಸ್ಥಾನಕ್ಕೆ ಬಣ್ಣದ ಲೇಪನ ಕಾರ್ಯ ಭರದಿಂದ ಸಾಗುತ್ತಿದೆ. ಮಾ. ೭ರಂದು ಶ್ರೀ ಹುಣಸಮ್ಮ ತಾಯಿಯ ರಥೋತ್ಸವದ ಅಂಗವಾಗಿ ನವಗ್ರಾಮಗಳಲ್ಲಿ ಹಬ್ಬವು ನಡೆಯಲಿದ್ದು, ಈ ಹಬ್ಬಕ್ಕೆ ತವರಿಗೆ ಆಗಮಿಸುವ ಹೆಣ್ಣುಮಕ್ಕಳು ದೇವಸ್ಥಾನಕ್ಕೆ ತೆರಳಿ ದೇವರಿಗೆ ಮಡಿಲು ತುಂಬಿಸುವ ಶಾಸ್ತ್ರ, ತಂಬಿಟ್ಟಿನ ಆರತಿ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುವುದು ಈ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಪದ್ಧತಿಯಾಗಿದೆ.

ಇಷ್ಟೇ ಅಲ್ಲದೆ ದೇವರಿಗೆ ವಿವಿಧ ರೀತಿಯ ಆರತಿಗಳನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಮಾ. ೮ರಂದು ನಡೆಯುವ ಶ್ರೀ ಹುಣಸಮ್ಮ ತಾಯಿಯ ರಥೋತ್ಸವಕ್ಕೆ ನವಗ್ರಾಮಗಳಾದ ಮಿರ್ಲೆ, ಶಾಬಾಳು, ನಾಟನಹಳ್ಳಿ, ಹಳೇ ಮಿರ್ಲೆ, ಕೊಡಿಯಾಲ, ಹನುಮನಹಳ್ಳಿ, ಬೀಚನಹಳ್ಳಿ, ನರಚನಹಳ್ಳಿ, ಬೀಚನಹಳ್ಳಿ ಕೊಪ್ಪಲು, ಮಾಳನಾಯಕನಹಳ್ಳಿ, ಮಾಳನಾಯಕನಹಳ್ಳಿ ಕೊಪ್ಪಲು ಗ್ರಾಮಗಳಿಂದ ಐದು ಸಿಡಿಗಳು ಮತ್ತು ನಾಲ್ಕು ರಥಗಳು ಆಗಮಿಸಲಿದ್ದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ನಂತರ ಮಿರ್ಲೆ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆಯು ಸಾಗಲಿದೆ. ಶ್ರೀ ಹುಣಸಮ್ಮ ತಾಯಿ ದೇವಾಲಯದ ಆವರಣಕ್ಕೆ ರಥವನ್ನು ಧಾರ್ಮಿಕ ವಿಧಿ- ವಿಧಾನಗಳೊಂದಿಗೆ ಎಳೆದು ತರಲಿದ್ದಾರೆ. ರಥೋತ್ಸವದ ದಿನದಂದು ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಗಳು ನಡೆಯಲಿವೆ.

ಜಾತ್ರಾ ಮಹೋತ್ಸವ ಮುಗಿದ ನಂತರ ಗ್ರಾಮದ ದೇವಸ್ಥಾನದ ಮುಂಭಾಗ ಇರುವ ಉಯ್ಯಾಲೆಯಲ್ಲಿ ಶ್ರೀ ಹುಣಸಮ್ಮ ತಾಯಿ ಆಟವಾಡುತ್ತಾಳೆ ಎಂಬ ನಂಬಿಕೆಯಿಂದ ರಾತ್ರಿ ೮ ಗಂಟೆಯ ನಂತರ ಈ ದೇವಸ್ಥಾನದ ಕಡೆಗೆ ಯಾರೂ ಹೋಗುವುದಿಲ್ಲ. ಇದು ಹಿಂದಿ ನಿಂದಲೂ ನಡೆದುಕೊಂಡು ಬರುತ್ತಿರುವ ಪದ್ಧತಿಯಾಗಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

54 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago