Andolana originals

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್

ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ

ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವದ ಧಾರ್ಮಿಕ ಪೂಜಾ ಕಾರ್ಯಗಳು ಆರಂಭಗೊಂಡಿದ್ದು, ಜ.೩ರಂದು ಬಂಡಿ ಉತ್ಸವ ಹಾಗೂ ೫ರಂದು ರಥೋತ್ಸವ ನಡೆಯಲಿದೆ.

ಮೂಗಾಸುರನನ್ನು ಸಂಹರಿಸಿ, ರಕ್ತ ಬೀಜಾಸುರರನ್ನು ಸಹೋದರಿ ದೇವತೆಗಳ ಜೊತೆಗೂಡಿ ನಿರ್ನಾಮಗೊಳಿಸಿ ಮೂಗೂರು ಗ್ರಾಮದಲ್ಲಿ ಆದಿಶಕ್ತಿಯಾಗಿ ನೆಲೆಗೊಂಡಿದ್ದಾರೆ ಎಂಬ ಪ್ರತೀತಿ ಇರುವ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರೋತ್ಸವ ವೈಭವದಿಂದ ನಡೆಯಲಿದೆ.

ಡಿ.೩೦ರಂದು ಪೂರ್ಣಾಭಿಷೇಕ, ೩೧ರಂದು ವಧೆ ಉತ್ಸವ, ಜ.೧ರಂದು ಶೇಷ ವಾಹನೋತ್ಸವ ಹಾಗೂ ಪಕ್ಷಿ ವಾಹನೋತ್ಸವ, ಜ.೨ರಂದು ಸಿಂಹ ವಾಹನೋತ್ಸವ ಮತ್ತು ಚಂದ್ರಮಂಡ ಲೋತ್ಸವ ಆಯೋಜನೆಗೊಳ್ಳಲಿವೆ.

ಆಕರ್ಷಕ ಬಂಡಿ ಉತ್ಸವ: ಹುಣ್ಣಿಮೆಯ ದಿನವಾದ ಜ.೩ರ ಶನಿವಾರ ಆಕರ್ಷಣೆಯ ಬಂಡಿ ಉತ್ಸವ ಗ್ರಾಮದ ಬಂಡಿ ಬೀದಿಯಲ್ಲಿ ನಡೆಯಲಿದೆ. ರುದ್ರಾಕ್ಷಿ ಮಂಟಪೋತ್ಸವವೂ ನಡೆಯಲಿದೆ. ಇಲ್ಲಿನ ಬಂಡಿ ಉತ್ಸವಕ್ಕೂ ಮುನ್ನ ಸುತ್ತಮುತ್ತಲ ಗ್ರಾಮಗಳಲ್ಲಿ ಆಯಾಯ ನಿಗದಿತ ದಿನಾಂಕಗಳಂದು ಬಂಡಿ ಉತ್ಸವ ನಡೆಯುತ್ತದೆ. ಬಳಿಕ ಅಂತಿಮ ದೊಡ್ಡ ಬಂಡಿ ಉತ್ಸವ ಮೂಗೂರಿನಲ್ಲಿ ನಡೆಯುತ್ತದೆ. ಜ.೪ರಂದು ಗ್ರಾಮದ ಕಲ್ಯಾಣಿಯಲ್ಲಿ ಅಲಂಕೃತ ತೆಪ್ಪೋತ್ಸವ, ಅಮ್ಮನವರ ಹೂವಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಜ.೫ ರಂದು ರಥೋತ್ಸವ ವೈಭವ: ಜ.೫ರ ಸೋಮವಾರ ಮಧ್ಯಾಹ್ನ ೩ರಿಂದ ೪.೩೦ಕ್ಕೆ ಅಮ್ಮನವರ ಬ್ರಹ್ಮರಥೋತ್ಸವವು ಸಂಪ್ರದಾಯದಂತೆ ನಡೆಯಲಿದೆ. ಅಂದು ರಾತ್ರಿ ಆನೆ ವಾಹನೋತ್ಸವ ಜರುಗಲಿದೆ. ಜ.೬ರ ಮಂಗಳವಾರ ಶ್ರೀ ಅಮ್ಮನವರು ಉತ್ಸವ ಹೊಸಹಳ್ಳಿಗೆ ಬರಲಿದೆ. ಅಲ್ಲಿ ಮರದ ಕೊಂಬೆಯೊಂದನ್ನು ಸವರಿ ಬಿಟ್ಟಿದ್ದು ಮುಂಜಾನೆಯಲ್ಲಿ ಚಿಗುರು ಕಡಿಯುತ್ತದೆ. ಚಿಗುರಿದ ಎಲೆಗಳ ಸಂಖ್ಯೆಯ ಮೇಲೆ ಗ್ರಾಮಕ್ಕೆ ಶುಭ- ಅಶುಭ ಫಲಗಳ ಸೂಚನೆ ಸಿಗುತ್ತದೆ ಎಂಬುದು ಇಲ್ಲಿನ ನಂಬಿಕೆ. ಮತ್ತೆ ಉತ್ಸವ ಮೂಗೂರಿಗೆ ಆಗಮಿಸ ಲಿದೆ. ಬಳಿಕ ಕುದುರೆ ವಾಹನೋತ್ಸವ ನಡೆಯಲಿದೆ. ಜ.೭ರಂದು ಅಮ್ಮನವರ ಪಲ್ಲಕ್ಕಿ ಉತ್ಸವ ಹಾಗೂ ವೈಮಾಳಿಗೆ ಉತ್ಸವ ಹಾಗೂ ರಾತ್ರಿ ಪೂರ್ಣಾಭಿ ಷೇಕದೊಂದಿಗೆ ೧೫ ದಿನಗಳ ಮೂಗೂರು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.

ಪ್ರತಿ ವರ್ಷದಂತೆ ಈ ಸಾಲಿನ ರಥೋತ್ಸವಕ್ಕೆ ಮೂಲಸೌಕರ್ಯಗಳಾದ ಕುಡಿಯುವ ನೀರು ಮತ್ತು ಮಹಿಳೆ ಹಾಗೂ ಪುರುಷರಿಗೆ ಶೌಚಾಲಯ ವ್ಯವಸ್ಥೆ, ದೇವಾಲಯದ ಹೊರ ಹಾಗೂ ಒಳಾವರಣದಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ತಾತ್ಕಾಲಿಕ ಆರೋಗ್ಯ ಕೇಂದ್ರ, ಮುಡಿಕಟ್ಟೆ ವ್ಯವಸ್ಥೆ, ಗ್ರಾಮದ ಬೀದಿಗಳಲ್ಲಿ ಸ್ವಚ್ಛತೆ, ಹೊಸಹಳ್ಳಿಗೆ ತೆರಳುವ ರಸ್ತೆ ಸ್ವಚ್ಛತಾ ಕಾರ್ಯ, ಭಕ್ತಾದಿಗಳಿಗೆ ದರ್ಶನ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಕಲ್ಪಿಸಲು ತಾಲ್ಲೂಕು ಆಡಳಿತ ಗ್ರಾಮಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗಿದೆ.

” ಜಾತ್ರೋತ್ಸವಕ್ಕೆ ಬರುವ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಜವಾಬ್ದಾರಿ ನೀಡಿದ್ದು, ಪೊಲೀಸರಿಂದ ಶಾಂತಿ ಸಭೆಯನ್ನು ನಡೆಸಿ,ಅಧಿಕಾರಿಗಳಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.”

-ಟಿ.ಜಿ.ಸುರೇಶಾಚಾರ್, ತಹಸಿಲ್ದಾರ್, ತಿ.ನರಸೀಪುರ

” ಮೂಗೂರು ಗ್ರಾಮದಲ್ಲಿ ಪುರಾತನ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರು ಜಾತ್ರೋತ್ಸವದ ಪೂಜಾ ಉತ್ಸವಗಳು ಈಗಾಗಲೇ ಆರಂಭಗೊಂಡಿವೆ. ಬಂಡಿ ಉತ್ಸವ, ರಥೋತ್ಸವ ಹಾಗೂ ಚಿಗುರು ಕಡಿಯುವ ಉತ್ಸವಗಳಿಗೆ ವಿಶೇಷತೆಯಿದೆ. ತಾಲ್ಲೂಕು ಆಡಳಿತದ ಮಾರ್ಗದರ್ಶನದಲ್ಲಿ ಹಬ್ಬದ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳು ನಡೆಯಲಿವೆ.”

-ಎಂ.ಬಿ.ಸಾಗರ್, ಪಾರುಪತ್ತೆಗಾರ, ಮೂಗೂರು

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

10 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

11 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

11 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

12 hours ago