Andolana originals

ಸುಗ್ಗನಹಳ್ಳಿಯ ಬಂಡಿ ಉತ್ಸವಕ್ಕೆ ಸಕಲ ಸಿದ್ಧತೆ

ಭೇರ್ಯ: ಕೆ.ಆರ್.ನಗರ ತಾಲ್ಲೂಕು ಸುಗ್ಗನಹಳ್ಳಿ ಗ್ರಾಮದಲ್ಲಿ ಮೇ 24ರ ಶುಕ್ರವಾರ ರಾತ್ರಿ ನಡೆಯಲಿರುವ ಬಂಡಿ ಉತ್ಸವದ ಹಬ್ಬಕ್ಕೆ ಸಕಲ ಸಿದ್ಧತೆ ನಡೆದಿದೆ. ಗ್ರಾಮೀಣ ಸಂಪ್ರದಾಯದಂತೆ ಗ್ರಾಮ ದೇವತೆಯ ಹೆಸರಿನಲ್ಲಿ ನಡೆಸುವ ಈ ಹಬ್ಬವನ್ನು ಕೆಲವು ಕಡೆ ಹಸಿರುಬಂಡಿ ಎನ್ನುತ್ತಾರೆ. ಸುಗ್ಗನಹಳ್ಳಿ ಗ್ರಾಮದಲ್ಲಿ 1950ರಿಂದಲೂ ಈ ಗ್ರಾಮದ ಪೂರ್ವಿಕರು, ಹಿರಿಯರು ಸಾಂಪ್ರದಾಯಿಕವಾಗಿ ಬಂಡಿಹಬ್ಬವನ್ನು ಆಚರಣೆ ಮಾಡುತ್ತಾ ಬಂದಿದ್ದಾರೆ.

ಇದೇ ಮೇ 24ರ ಶುಕ್ರವಾರ ಗ್ರಾಮದ ತುಂಬೆಲ್ಲ ಹಸಿರೆಲೆಯ ತೋರಣ, ತೆಂಗಿನ ಗರಿ, ಅಡಕೆ, ಹೊಂಬಾಳೆ ಇವುಗಳಿಂದ ಅಲಂಕರಿಸಿ, ಜೊತೆಗೆ ಕಲ್ಲಿನ ಚಕ್ರದಿಂದ ನಿರ್ಮಾಣ ಮಾಡಿರುವ ಬಂಡಿಯನ್ನು ವಿಶೇಷವಾಗಿ ವಿವಿಧ ಬಣ್ಣಗಳಿಂದ ಅಲಂಕರಿಸಿ, ಬಾಳೆ ಗೊನೆ ಕಟ್ಟಿ, ತಮಟೆ, ಡೊಳ್ಳು, ನಗಾರಿಯೊಂದಿಗೆ ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾನೆಯವರೆಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಂಡಿ ಎಳೆಯುತ್ತಾರೆ.

ಇದಕ್ಕೂ ಮೊದಲು ಯುವತಿಯರು, ಮುತ್ತೈದೆಯರು ತಂಬಿಟ್ಟು ಆರತಿ ಬೆಳಗಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಾರೆ. ಈ ಹಬ್ಬಕ್ಕೂ ಮೊದಲು ಕನ್ನಂಬಾಡಿ ಅಮ್ಮನವರ ಹಬ್ಬ ಹರಿಸೇವೆ ಜೊತೆಗೆ ಅನ್ನದಾನ, ಮುನಿಯಪ್ಪನ ಹಬ್ಬ ಆಚರಣೆ ಮಾಡಿದ ನಂತರ ಬಹಳ ವಿಶಿಷ್ಟವಾಗಿ ಬಂಡಿ ಹಬ್ಬ ಆಚರಣೆ ಮಾಡಲಾಗುವುದು ಎಂದು ಮುಖಂಡ ಬಂಡೆಕುಮಾರ್ ತಿಳಿಸಿದರು.

ಗ್ರಾಮದೇವತೆ ಪಟ್ಟಲದಮ್ಮದೇವಿಗೆ ಹರಕೆ, ಮುಡಿಪು ಕಾಣಿಕೆ ಒಪ್ಪಿಸುವ ಸಲುವಾಗಿ ಗ್ರಾಮದ ಶ್ರೀ ತಿರುಮಲ ವೆಂಕಟೇಶ್ವರ ದೇವಸ್ಥಾನದ ಮುಂಭಾಗದಿಂದ ಬಂಡಿ ಚಕ್ರವನ್ನು ಎಳೆಯುವ ಸಂದರ್ಭದಲ್ಲಿ ದೂಳ್‌ಮರಿ ಹೊಡೆಯಲಾಗುತ್ತದೆ.

ಈ ಹಬ್ಬವನ್ನು ಸಾಮರಸ್ಯದಿಂದ ಯಾವುದೇ ಜಾತಿ-ಭೇದವಿಲ್ಲದೆ ಎಲ್ಲಾ ಸಮುದಾಯದವರು ಒಟ್ಟಾಗಿ ಸೇರಿ ಆಚರಿಸುವುದು ವಿಶೇಷ. ಮುಖಂಡರಾದ ಡೇರಿ ಅಧ್ಯಕ್ಷ ರಾಜು, ವಿಜಯ್, ರಾಜಶೆಟ್ಟಿ, ರಾಜಶೇಖರ್, ತಿಮ್ಮೇಗೌಡ, ಧರಣಿ, ವೀರಭದ್ರಶೆಟ್ಟಿ, ವೆಂಕಟೇಶ್, ಮೂರ್ತಿ, ಪುನೀತ್, ರವೀಶ್, ಅಮರ್, ಬಾಂಡ್ ರವಿ, ವಿಜಿ, ಮಹದೇವ ಸೇರಿದಂತೆ ಗ್ರಾಮದ ಅನೇಕ ಯುವಕರು ಗ್ರಾಮದಲ್ಲಿ ಹಬ್ಬವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಬಂಡಿ ಹಬ್ಬವನ್ನು ಗ್ರಾಮದಲ್ಲಿ ಸಾಮರಸ್ಯದಿಂದ ಯಾವುದೇ ಜಾತಿ-ಭೇದವಿಲ್ಲದೆ ನಮ್ಮ ಪೂರ್ವಿಕರ ಕಾಲದಿಂದಲೂ ಆಚರಣೆ ಮಾಡುತ್ತಾ ಬಂದಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ಸಾಂಪ್ರದಾಯಿಕ ಜನಪದ ಸೊಗಡು ಇಂದಿಗೂ ಉಳಿದಿದೆ. – ಬಂಡೆ ಕುಮಾರ್, ಹಿರಿಯ ಮುಖಂಡ, ಸುಗ್ಗನಹಳ್ಳಿ.

ಭೇರ್ಯ ಮಹೇಶ್

ಮೂಲತಃ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಸಮೀಪದ ಬಟಿಗನಹಳ್ಳಿ ಗ್ರಾಮದವನಾದ ನಾನು ಭೇರ್ಯ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮುಗಿಸಿ ಹೊಸ ಅಗ್ರಹಾರದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದೇನೆ. 2002 ಹಾಗೂ 2004ರಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದೇನೆ. 1992ರಿಂದ ಆಂದೋಲನ ಮತ್ತು ಮೈಸೂರು ಮಿತ್ರ ಸೇರಿದಂತೆ ಪತ್ರಿಕಾ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದು, 2000ರಲ್ಲಿ ಪ್ರಜಾನುಡಿ ದಿನ ಪತ್ರಿಕೆಯ ಕೆ.ಆರ್.ನಗರ ತಾಲ್ಲೂಕು ಗ್ರಾಮಾಂತರ ವರದಿಗಾರನಾಗಿ ತದ ನಂತರ ಆಂದೋಲನ ಮತ್ತು ಕನ್ನಡ ಪ್ರಭ ಪತ್ರಿಕೆಯ ತಾಲ್ಲೂಕು ಗ್ರಾಮಾಂತರ ಮತ್ತು ಭೇರ್ಯ ಗ್ರಾಮದ ವರದಿಗಾರನಾಗಿ ಕಾರ್ಯನಿರ್ವಹಿಸಿ ಪ್ರಸ್ತುತ 2021ರಿಂದ ಕೆ.ಆರ್.ನಗರ ತಾಲ್ಲೂಕು ಆಂದೋಲನ ಪತ್ರಿಕೆಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

3 hours ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

3 hours ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

4 hours ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

4 hours ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

12 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

12 hours ago