Andolana originals

ಸುಗ್ಗನಹಳ್ಳಿಯ ಬಂಡಿ ಉತ್ಸವಕ್ಕೆ ಸಕಲ ಸಿದ್ಧತೆ

ಭೇರ್ಯ: ಕೆ.ಆರ್.ನಗರ ತಾಲ್ಲೂಕು ಸುಗ್ಗನಹಳ್ಳಿ ಗ್ರಾಮದಲ್ಲಿ ಮೇ 24ರ ಶುಕ್ರವಾರ ರಾತ್ರಿ ನಡೆಯಲಿರುವ ಬಂಡಿ ಉತ್ಸವದ ಹಬ್ಬಕ್ಕೆ ಸಕಲ ಸಿದ್ಧತೆ ನಡೆದಿದೆ. ಗ್ರಾಮೀಣ ಸಂಪ್ರದಾಯದಂತೆ ಗ್ರಾಮ ದೇವತೆಯ ಹೆಸರಿನಲ್ಲಿ ನಡೆಸುವ ಈ ಹಬ್ಬವನ್ನು ಕೆಲವು ಕಡೆ ಹಸಿರುಬಂಡಿ ಎನ್ನುತ್ತಾರೆ. ಸುಗ್ಗನಹಳ್ಳಿ ಗ್ರಾಮದಲ್ಲಿ 1950ರಿಂದಲೂ ಈ ಗ್ರಾಮದ ಪೂರ್ವಿಕರು, ಹಿರಿಯರು ಸಾಂಪ್ರದಾಯಿಕವಾಗಿ ಬಂಡಿಹಬ್ಬವನ್ನು ಆಚರಣೆ ಮಾಡುತ್ತಾ ಬಂದಿದ್ದಾರೆ.

ಇದೇ ಮೇ 24ರ ಶುಕ್ರವಾರ ಗ್ರಾಮದ ತುಂಬೆಲ್ಲ ಹಸಿರೆಲೆಯ ತೋರಣ, ತೆಂಗಿನ ಗರಿ, ಅಡಕೆ, ಹೊಂಬಾಳೆ ಇವುಗಳಿಂದ ಅಲಂಕರಿಸಿ, ಜೊತೆಗೆ ಕಲ್ಲಿನ ಚಕ್ರದಿಂದ ನಿರ್ಮಾಣ ಮಾಡಿರುವ ಬಂಡಿಯನ್ನು ವಿಶೇಷವಾಗಿ ವಿವಿಧ ಬಣ್ಣಗಳಿಂದ ಅಲಂಕರಿಸಿ, ಬಾಳೆ ಗೊನೆ ಕಟ್ಟಿ, ತಮಟೆ, ಡೊಳ್ಳು, ನಗಾರಿಯೊಂದಿಗೆ ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾನೆಯವರೆಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಂಡಿ ಎಳೆಯುತ್ತಾರೆ.

ಇದಕ್ಕೂ ಮೊದಲು ಯುವತಿಯರು, ಮುತ್ತೈದೆಯರು ತಂಬಿಟ್ಟು ಆರತಿ ಬೆಳಗಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಾರೆ. ಈ ಹಬ್ಬಕ್ಕೂ ಮೊದಲು ಕನ್ನಂಬಾಡಿ ಅಮ್ಮನವರ ಹಬ್ಬ ಹರಿಸೇವೆ ಜೊತೆಗೆ ಅನ್ನದಾನ, ಮುನಿಯಪ್ಪನ ಹಬ್ಬ ಆಚರಣೆ ಮಾಡಿದ ನಂತರ ಬಹಳ ವಿಶಿಷ್ಟವಾಗಿ ಬಂಡಿ ಹಬ್ಬ ಆಚರಣೆ ಮಾಡಲಾಗುವುದು ಎಂದು ಮುಖಂಡ ಬಂಡೆಕುಮಾರ್ ತಿಳಿಸಿದರು.

ಗ್ರಾಮದೇವತೆ ಪಟ್ಟಲದಮ್ಮದೇವಿಗೆ ಹರಕೆ, ಮುಡಿಪು ಕಾಣಿಕೆ ಒಪ್ಪಿಸುವ ಸಲುವಾಗಿ ಗ್ರಾಮದ ಶ್ರೀ ತಿರುಮಲ ವೆಂಕಟೇಶ್ವರ ದೇವಸ್ಥಾನದ ಮುಂಭಾಗದಿಂದ ಬಂಡಿ ಚಕ್ರವನ್ನು ಎಳೆಯುವ ಸಂದರ್ಭದಲ್ಲಿ ದೂಳ್‌ಮರಿ ಹೊಡೆಯಲಾಗುತ್ತದೆ.

ಈ ಹಬ್ಬವನ್ನು ಸಾಮರಸ್ಯದಿಂದ ಯಾವುದೇ ಜಾತಿ-ಭೇದವಿಲ್ಲದೆ ಎಲ್ಲಾ ಸಮುದಾಯದವರು ಒಟ್ಟಾಗಿ ಸೇರಿ ಆಚರಿಸುವುದು ವಿಶೇಷ. ಮುಖಂಡರಾದ ಡೇರಿ ಅಧ್ಯಕ್ಷ ರಾಜು, ವಿಜಯ್, ರಾಜಶೆಟ್ಟಿ, ರಾಜಶೇಖರ್, ತಿಮ್ಮೇಗೌಡ, ಧರಣಿ, ವೀರಭದ್ರಶೆಟ್ಟಿ, ವೆಂಕಟೇಶ್, ಮೂರ್ತಿ, ಪುನೀತ್, ರವೀಶ್, ಅಮರ್, ಬಾಂಡ್ ರವಿ, ವಿಜಿ, ಮಹದೇವ ಸೇರಿದಂತೆ ಗ್ರಾಮದ ಅನೇಕ ಯುವಕರು ಗ್ರಾಮದಲ್ಲಿ ಹಬ್ಬವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಬಂಡಿ ಹಬ್ಬವನ್ನು ಗ್ರಾಮದಲ್ಲಿ ಸಾಮರಸ್ಯದಿಂದ ಯಾವುದೇ ಜಾತಿ-ಭೇದವಿಲ್ಲದೆ ನಮ್ಮ ಪೂರ್ವಿಕರ ಕಾಲದಿಂದಲೂ ಆಚರಣೆ ಮಾಡುತ್ತಾ ಬಂದಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ಸಾಂಪ್ರದಾಯಿಕ ಜನಪದ ಸೊಗಡು ಇಂದಿಗೂ ಉಳಿದಿದೆ. – ಬಂಡೆ ಕುಮಾರ್, ಹಿರಿಯ ಮುಖಂಡ, ಸುಗ್ಗನಹಳ್ಳಿ.

ಭೇರ್ಯ ಮಹೇಶ್

ಮೂಲತಃ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಸಮೀಪದ ಬಟಿಗನಹಳ್ಳಿ ಗ್ರಾಮದವನಾದ ನಾನು ಭೇರ್ಯ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮುಗಿಸಿ ಹೊಸ ಅಗ್ರಹಾರದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದೇನೆ. 2002 ಹಾಗೂ 2004ರಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದೇನೆ. 1992ರಿಂದ ಆಂದೋಲನ ಮತ್ತು ಮೈಸೂರು ಮಿತ್ರ ಸೇರಿದಂತೆ ಪತ್ರಿಕಾ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದು, 2000ರಲ್ಲಿ ಪ್ರಜಾನುಡಿ ದಿನ ಪತ್ರಿಕೆಯ ಕೆ.ಆರ್.ನಗರ ತಾಲ್ಲೂಕು ಗ್ರಾಮಾಂತರ ವರದಿಗಾರನಾಗಿ ತದ ನಂತರ ಆಂದೋಲನ ಮತ್ತು ಕನ್ನಡ ಪ್ರಭ ಪತ್ರಿಕೆಯ ತಾಲ್ಲೂಕು ಗ್ರಾಮಾಂತರ ಮತ್ತು ಭೇರ್ಯ ಗ್ರಾಮದ ವರದಿಗಾರನಾಗಿ ಕಾರ್ಯನಿರ್ವಹಿಸಿ ಪ್ರಸ್ತುತ 2021ರಿಂದ ಕೆ.ಆರ್.ನಗರ ತಾಲ್ಲೂಕು ಆಂದೋಲನ ಪತ್ರಿಕೆಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

15 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago