Andolana originals

ಶಾಲಾ ಹಿಂಭಾಗದ ಜಾಗ ತಿಪ್ಪೆ ಗುಂಡಿಯಾಗಿ ಬಳಕೆ: ಆರೋಪ

ಚಿಲ್ಕುಂದ ಸರ್ಕಾರಿ ಪ್ರೌಢಶಾಲೆ ಹಿಂಭಾಗದ ಜಾಗದಲ್ಲಿ ಅವ್ಯವಸ್ಥೆ: ಗ್ರಾಮಸ್ಥರ ಅಸಮಾಧಾನ

ಹುಣಸೂರು: ತಾಲ್ಲೂಕಿನ ಗ್ರಾಮ ಪಂಚಾಯಿತಿ ಕೇಂದ್ರವಾದ ಚಿಲ್ಕುಂದ ಸರ್ಕಾರಿ ಪ್ರೌಢಶಾಲೆ ಆವರಣದ ಹಿಂಭಾಗದ ಜಾಗ ಒತ್ತುವರಿಯಾಗಿದ್ದು, ತಿಪ್ಪೆ, ಬಯಲು ಶೌಚಾಲಯವಾಗಿಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಆವರಣದಲ್ಲಿ ಗಿಡಗಂಟಿಗಳು ಬೆಳೆದು ಶಾಲಾ ವಾತಾವರಣವೇ ಹಾಳಾಗಿದೆ. ಶಾಲೆಯು ೧೯೬೩ ಆರಂಭಗೊಂಡಿದ್ದು, ೫.೩೧ ಎಕರೆ ಪ್ರದೇಶದಲ್ಲಿದೆ. ಶಾಲಾವರಣದ ಮುಂಭಾಗ ಹಾಗೂ ಮತ್ತೊಂದು ಬದಿಯಲ್ಲಿ ಕಾಂಪೌಂಡ್ ನಿರ್ಮಾಣವಾಗಿದ್ದರೆ, ಹಿಂಭಾಗ ಹಾಗೂ ಇನ್ನೊಂದು ಬದಿಯಲ್ಲಿ ಸುಮಾರು ೪೦೦ ಮೀ.ನಷ್ಟು ಕಾಂಪೌಂಡ್ ನಿರ್ಮಾಣವಾಗಬೇಕಿದೆ. ಸುಮಾರು ಅರ್ಧ ಎಕರೆ ಪ್ರದೇಶದಷ್ಟು ಒತ್ತುವರಿಯಾಗಿದೆ.

ಕಸದ ತಿಪ್ಪೆ: ಶಾಲಾ ಕಟ್ಟಡದ ಹಿಂಭಾಗ ಕಾಂಪೌಂಡ್ ಇಲ್ಲದ ಪರಿಣಾಮ ಹಿಂಭಾಗದಲ್ಲಿ ಕೆಲವರು ತಿಪ್ಪೆಗುಂಡಿ ಮಾಡಿಕೊಂಡಿದ್ದಾರೆ. ಕಟ್ಟಡದ ತ್ಯಾಜ್ಯಗಳನ್ನು ಇಲ್ಲಿಗೆ ತಂದು ಬೀಸಾಡುತ್ತಿದ್ದು, ಬಯಲು ಶೌಚಾಲಯವಾ ಗಿಸಿದ್ದಾರೆ. ಸುತ್ತ ದೊಡ್ಡ ಮರಗಳು ಬೆಳೆದು ಕೊಂಡು ಕಾಡಿನಂತಾಗಿದೆ. ಹಾವುಗಳ ಕಾಟವೂ ಸಾಕಷ್ಟಿದ್ದು, ಹಲವಾರು ಬಾರಿ ಕೊಠಡಿಗೆ ನುಗ್ಗಿದ ಹಾವುಗಳನ್ನು ಹಿಡಿಸಲಾಗಿದೆ.

ಶಾಲೆಗೆ ರಜೆ ಇದ್ದರೆ ಸಾಕು ಶಾಲಾ ಕಟ್ಟಡ ಬಟ್ಟೆ ಒಗೆಯುವ ಸ್ಥಳವಾಗಿ ಮಾರ್ಪಡುತ್ತದೆ. ಅಲ್ಲಿಯೇ ಬಟ್ಟೆಗಳನ್ನು ಒಣಗಿ ಹಾಕುತ್ತಾರೆ. ಇನ್ನು ಬಿಡಾಡಿ ದನಗಳ ಮೇವಿನ ತಾಣವೂ ಆಗಿದೆ. ಆಗಾಗ್ಗೆ ಶೌಚಾಲಯದ ಬಾಗಿಲು ಒಡೆದು ಹಾಕಲಾಗುತ್ತಿದ್ದು, ವಿದ್ಯಾರ್ಥಿಗಳ ಬಹಿರ್ದೆಸೆಗೂ ಕಷ್ಟವಾಗಿದೆ. ಶಾಲಾ ಆವರಣದಲ್ಲಿ ಶಿಕ್ಷಕರಿಗಾಗಿ ಈ ಹಿಂದೆ ನಿರ್ಮಿಸಿದ್ದ ಎರಡು ವಸತಿಗೃಹಗಳು ಪಾಳು ಬಿದ್ದಿವೆ. ಶಾಲಾ ಪರಿಸರ ಉತ್ತಮವಾಗಿಸಲು ಸಾಕಷ್ಟು ಗಿಡ ಮರ ಬೆಳೆಸಲು ಅವಕಾಶವಿದ್ದರೂ ಜಾನುವಾರುಗಳ ಕಾಟದಿಂದಾಗಿ ಯಾವುದೇ ಸಸಿ ಬೆಳೆಸಲು ಸಾಧ್ಯವಾಗುತ್ತಿಲ್ಲ ಎಂಬುದು ವಿದ್ಯಾರ್ಥಿಗಳ ಅಳಲು.ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಶಿಕ್ಷಕರು ಪಾಠ ಮಾಡಬೇಕಾದ ದುಸ್ಥಿತಿ ಇದೆ

” ಒತ್ತುವರಿಯಾಗಿರುವ ಶಾಲಾ ಭೂಮಿಯನ್ನು ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸಿ ಕಾಂಪೌಂಡ್ ನಿರ್ಮಿಸಲು ಹತ್ತಾರು ಬಾರಿ ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಿದರೂ ಯಾವುದೇ ಕ್ರಮವಾಗಿಲ್ಲ. ಅಲ್ಲದೆ,ನೇರಳಕುಪ್ಪೆಯಲ್ಲಿ ನಡೆದ ಹನಗೋಡು ಹೋಬಳಿ ಮಟ್ಟದ ಜನಸ್ಪಂದನ ಸಭೆಯಲ್ಲೂ ಅಂದಿನ ಜಿಲ್ಲಾಧಿಕಾರಿ ರಾಜೇಂದ್ರ ಅವರಿಗೆ ಮನವಿ ಮಾಡಿ ದರೂ, ಕೆಡಿಪಿ ಸಭೆಯಲ್ಲೂ ಪ್ರಸ್ತಾಪವಾದರೂ ಯಾವುದೇ ಕ್ರಮವಾಗಿಲ್ಲ.”

-ಗ್ರಾಮಸ್ಥರು

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

20 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago