Andolana originals

ಓದುಗರ ಪತ್ರ: ಅತಿಥಿ ಶಿಕ್ಷಕರಿಗೆ ಗೌರವ ಧನ ಮಂಜೂರು ಮಾಡಿ

2024-25ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರಾಗಿ ನೇಮಕಗೊಂಡಿರುವವರಿಗೆ ಕಳೆದ ಮೂರು ತಿಂಗಳ ಗೌರವ ಧನ ಮಂಜೂರಾಗದೆ ಇರುವುದರಿಂದ ಅವರ ಜೀವನ ನಿರ್ವಹಣೆ ಕಷ್ಟಕರವಾಗಿದೆ.

ಕಳೆದ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಗೌರವ ಧನ ಈವರೆಗೂ ಅತಿಥಿ ಶಿಕ್ಷಕರ ಕೈ ಸೇರಿಲ್ಲ. ಇನ್ನೇನು ಸೆಪ್ಟೆಂಬರ್ ತಿಂಗಳೂ ಮುಗಿಯುವ
ಹಂತಕ್ಕೆ ಬಂದಿದ್ದು, ನಾಲ್ಕು ತಿಂಗಳುಗಳು ಕಳೆದರೂ ವೇತನವಿಲ್ಲ ಎಂದರೆ ಶಿಕ್ಷಕರು ಹೇಗೆ ತಾನೆ ಕೆಲಸ ಮಾಡಬೇಕು?

ಸರ್ಕಾರ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ 10,000 ರೂ. ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವ ಧನವನ್ನು ನಿಗದಿ ಮಾಡಿದೆ. ಈ ವೇತನವನ್ನು ಸರಿಯಾದ ಸಮಯಕ್ಕೆ ನೀಡಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಕೂಡಲೇ ಅತಿಥಿ ಶಿಕ್ಷಕರಿಗೆ ಗೌರವ ಧನವನ್ನು ಮಂಜೂರು ಮಾಡಬೇಕಿದೆ.

ನೊಂದ ಅತಿಥಿ ಶಿಕ್ಷಕ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

2 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

2 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

2 hours ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

2 hours ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

3 hours ago