ಓದುಗರ ಪತ್ರ
2024-25ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರಾಗಿ ನೇಮಕಗೊಂಡಿರುವವರಿಗೆ ಕಳೆದ ಮೂರು ತಿಂಗಳ ಗೌರವ ಧನ ಮಂಜೂರಾಗದೆ ಇರುವುದರಿಂದ ಅವರ ಜೀವನ ನಿರ್ವಹಣೆ ಕಷ್ಟಕರವಾಗಿದೆ.
ಕಳೆದ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಗೌರವ ಧನ ಈವರೆಗೂ ಅತಿಥಿ ಶಿಕ್ಷಕರ ಕೈ ಸೇರಿಲ್ಲ. ಇನ್ನೇನು ಸೆಪ್ಟೆಂಬರ್ ತಿಂಗಳೂ ಮುಗಿಯುವ
ಹಂತಕ್ಕೆ ಬಂದಿದ್ದು, ನಾಲ್ಕು ತಿಂಗಳುಗಳು ಕಳೆದರೂ ವೇತನವಿಲ್ಲ ಎಂದರೆ ಶಿಕ್ಷಕರು ಹೇಗೆ ತಾನೆ ಕೆಲಸ ಮಾಡಬೇಕು?
ಸರ್ಕಾರ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ 10,000 ರೂ. ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವ ಧನವನ್ನು ನಿಗದಿ ಮಾಡಿದೆ. ಈ ವೇತನವನ್ನು ಸರಿಯಾದ ಸಮಯಕ್ಕೆ ನೀಡಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಕೂಡಲೇ ಅತಿಥಿ ಶಿಕ್ಷಕರಿಗೆ ಗೌರವ ಧನವನ್ನು ಮಂಜೂರು ಮಾಡಬೇಕಿದೆ.
–ನೊಂದ ಅತಿಥಿ ಶಿಕ್ಷಕ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…