Andolana originals

ನಾಣ್ಯ, ಅಂಚೆ ಚೀಟಿಗಳಲ್ಲಿ ಅಂಬೇಡ್ಕರ್ ಅನಾವರಣ!

ಚಿರಂಜೀವಿ ಸಿ. ಹುಲ್ಲಹಳ್ಳಿ

೨೦ ವರ್ಷಗಳಿಂದ ಅಂಚೆ ಚೀಟಿ, ನಾಣ್ಯ ಸಂಗ್ರಹಿಸಿರುವ ಮುಳುಬಾಗಿಲಿನ ಸತೀಶ್

ಮೈಸೂರು: ಬಾಬಾ ಸಾಹೇಬರ ಪ್ರಜ್ಞೆಯ ಬೆಳಕು ಚೆಲ್ಲುವ ಬಹುರೂಪಿ ನಾಟಕೋತ್ಸವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು, ಅವರ ಆಶಯಗಳನ್ನು ದರ್ಶಿಸುವ ರೂಪಕಗಳು ಮೈದಾಳಿವೆ. ವಿಶೇಷವೆಂದರೆ ೧೦ ಸಾವಿರ ನಾಣ್ಯಗಳಲ್ಲಿ ಅಂಬೇಡ್ಕರ್ ಅವರನ್ನು ಕಾಣುವ ಅಪರೂಪದ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಇತಿಹಾಸದ ವಿದ್ಯಾರ್ಥಿಯಾಗಿರುವ ಸತೀಶ್, ಹಾಸನ ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾ ಲಯದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಸಂಬಳದ ಅರ್ಧ ಹಣವನ್ನು ಇದಕ್ಕಾಗಿ ಮೀಸಲಿಟ್ಟು, ದೇಶದ ಮೂಲೆ ಮೂಲೆಗಳನ್ನು ಸುತ್ತಿ ೧೦ ಸಾವಿರ ನಾಣ್ಯಗಳನ್ನು ಸಂಗ್ರಹಿಸಿ ಪ್ರದರ್ಶನ ಮಾಡುವ ಮೂಲಕ, ಮುಂದಿನ ಪೀಳಿಗೆಗೆ ಸಂವಿಧಾನದ ಆಶಯಗಳು, ನಾಡಿನ ಇತಿಹಾಸ ತಿಳಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ.

ಕಳೆದ ೪ ವರ್ಷಗಳಿಂದ ನಾಡಿನ ಮೂಲೆ ಮೂಲೆಗಳಲ್ಲಿ ಪ್ರದರ್ಶನ ನೀಡುತ್ತಾ ಬಂದಿದ್ದು, ಇದು ಅವರ ೧೪೭ನೇ ಪ್ರದರ್ಶನವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಶತಮಾನೋತ್ಸವ ನೆನಪಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹೊರತಂದ ವಿಶೇಷ ನಾಣ್ಯವನ್ನು ಸಂಗ್ರಹಿಸಲು ದೇಶದ ಎಲ್ಲ ರಾಜ್ಯಗಳಲ್ಲಿ ಸುತ್ತಾಡಿ ೧೦ ಸಾವಿರ ನಾಣ್ಯ ಸಂಗ್ರಹಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಮಹಾರಾಷ್ಟ್ರ ವ್ಯಕ್ತಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

೫೦೦ ಸ್ವಾತಂತ್ರ್ಯ ಹೋರಾಟಗಾರರ ಅಂಚೆ ಚೀಟಿಗಳು: ಅಂಬೇಡ್ಕರ್ ೭೫ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ೧೯೬೫ರಲ್ಲಿ ಬಾಬಾ ಸಾಹೇಬರ ಮೊದಲ ಅಂಚೆಚೀಟಿ ಬಿಡುಗಡೆ ಮಾಡಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಬಂದಿರುವ ಬಾಬಾ ಸಾಹೇಬರ ಅಂಚೆಚೀಟಿಗಳು, ಸಂವಿಧಾನದ ಆರ್ಟಿಕಲ್‌ಗೆ ಅನುಗುಣವಾಗಿರುವ ಇತರೆ ಅಂಚೆ ಚೀಟಿಗಳು, ಸ್ವಾತಂತ್ರ್ಯ ಹೋರಾಟಗಾರರ ೫೦೦ ವಿಶೇಷ ಸ್ಟಾಂಪ್‌ಗಳ ಪ್ರದರ್ಶನ ಇಲ್ಲಿ ಮೇಳೈಸಿದೆ.

ಇಲ್ಲಿಯ ವರೆಗೂ ೧೪೭ ಪ್ರದರ್ಶನ ನೀಡಿರುವ ಸತೀಶ್ ಪ್ರದರ್ಶನದ ಸ್ಥಳಕ್ಕೆ ತಮ್ಮ ಸ್ವಂತ ಖರ್ಚಿನಲ್ಲೇ ತೆರಳುತ್ತಿ ದ್ದಾರೆ. ಇದರಲ್ಲಿ ಕೇವಲ ೨೦ರಿಂದ ೨೨ ಪ್ರದರ್ಶ ನಗಳಲ್ಲಿ ಮಾತ್ರ ಗೌರವಧನ ಮತ್ತು ಪ್ರಯಾಣ ಭತ್ಯೆಯನ್ನು ಕೊಟ್ಟಿದ್ದಾರೆ.

ಸತೀಶ್ ಅವರಿಗೆ ರಾಷ್ಟ್ರೀಯ ಪುರಸ್ಕಾರ:  ವಿಶ್ವದ ಮೊದಲ ಖಾದಿ ಅಂಚೆ, ತ್ರಿಡಿ ಸ್ಟ್ಯಾಂಪ್, ಪ್ಲಾಸ್ಟಿಕ್ ಸ್ಟ್ಯಾಂಪ್, ವಿಶ್ವದ ಮೊದಲ ರೇಷ್ಮೆ ಲಕೋಟೆ, ಅಂಚೆ ಇಲಾಖೆ ಹೊರತಂದಿರುವ ಅಂಬೇಡ್ಕರ್ ಅವರ ಎಲ್ಲ ಚೀಟಿಗಳನ್ನು ಸಂಗ್ರಹಿಸಿರುವ ಸತೀಶ್ ಅವರು ೪ ರಾಷ್ಟ್ರೀಯ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

” ಗಿನ್ನಿಸ್ ದಾಖಲೆ ನಿರೀಕ್ಷೆ ಲಿಮ್ಕಾ ಮತ್ತು ಗಿನ್ನಿಸ್ ದಾಖಲೆಯಾಗುವಷ್ಟು ನಾಣ್ಯಗಳು ಇವರ ಬಳಿ ಇವೆ. ಹಳೆಯ ದಾಖಲೆಗಳ ಪ್ರಕಾರ ೮ ಸಾವಿರ ನಾಣ್ಯಗಳು ಈ ದಾಖಲೆಗೆ ಭಾಜನವಾಗಿದ್ದು, ನನ್ನ ಬಳಿ ಈಗ ೧೦ ಸಾವಿರ ನಾಣ್ಯಗಳಿವೆ. ಆದರೆ, ಈ ದಾಖಲೆಗಳಿಗೆ ಅರ್ಜಿ ಸಲ್ಲಿಸಲು ಸಮಯವಿಲ್ಲದೆ ಪ್ರದರ್ಶನ ನೀಡುತ್ತಿದ್ದೇನೆ ಎನ್ನುತ್ತಾರೆ ಸತೀಶ್.”

 

 

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

5 mins ago

ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ…

39 mins ago

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

5 hours ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

5 hours ago

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…

5 hours ago