Andolana originals

ನಾಣ್ಯ, ಅಂಚೆ ಚೀಟಿಗಳಲ್ಲಿ ಅಂಬೇಡ್ಕರ್ ಅನಾವರಣ!

ಚಿರಂಜೀವಿ ಸಿ. ಹುಲ್ಲಹಳ್ಳಿ

೨೦ ವರ್ಷಗಳಿಂದ ಅಂಚೆ ಚೀಟಿ, ನಾಣ್ಯ ಸಂಗ್ರಹಿಸಿರುವ ಮುಳುಬಾಗಿಲಿನ ಸತೀಶ್

ಮೈಸೂರು: ಬಾಬಾ ಸಾಹೇಬರ ಪ್ರಜ್ಞೆಯ ಬೆಳಕು ಚೆಲ್ಲುವ ಬಹುರೂಪಿ ನಾಟಕೋತ್ಸವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು, ಅವರ ಆಶಯಗಳನ್ನು ದರ್ಶಿಸುವ ರೂಪಕಗಳು ಮೈದಾಳಿವೆ. ವಿಶೇಷವೆಂದರೆ ೧೦ ಸಾವಿರ ನಾಣ್ಯಗಳಲ್ಲಿ ಅಂಬೇಡ್ಕರ್ ಅವರನ್ನು ಕಾಣುವ ಅಪರೂಪದ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಇತಿಹಾಸದ ವಿದ್ಯಾರ್ಥಿಯಾಗಿರುವ ಸತೀಶ್, ಹಾಸನ ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾ ಲಯದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಸಂಬಳದ ಅರ್ಧ ಹಣವನ್ನು ಇದಕ್ಕಾಗಿ ಮೀಸಲಿಟ್ಟು, ದೇಶದ ಮೂಲೆ ಮೂಲೆಗಳನ್ನು ಸುತ್ತಿ ೧೦ ಸಾವಿರ ನಾಣ್ಯಗಳನ್ನು ಸಂಗ್ರಹಿಸಿ ಪ್ರದರ್ಶನ ಮಾಡುವ ಮೂಲಕ, ಮುಂದಿನ ಪೀಳಿಗೆಗೆ ಸಂವಿಧಾನದ ಆಶಯಗಳು, ನಾಡಿನ ಇತಿಹಾಸ ತಿಳಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ.

ಕಳೆದ ೪ ವರ್ಷಗಳಿಂದ ನಾಡಿನ ಮೂಲೆ ಮೂಲೆಗಳಲ್ಲಿ ಪ್ರದರ್ಶನ ನೀಡುತ್ತಾ ಬಂದಿದ್ದು, ಇದು ಅವರ ೧೪೭ನೇ ಪ್ರದರ್ಶನವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಶತಮಾನೋತ್ಸವ ನೆನಪಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹೊರತಂದ ವಿಶೇಷ ನಾಣ್ಯವನ್ನು ಸಂಗ್ರಹಿಸಲು ದೇಶದ ಎಲ್ಲ ರಾಜ್ಯಗಳಲ್ಲಿ ಸುತ್ತಾಡಿ ೧೦ ಸಾವಿರ ನಾಣ್ಯ ಸಂಗ್ರಹಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಮಹಾರಾಷ್ಟ್ರ ವ್ಯಕ್ತಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

೫೦೦ ಸ್ವಾತಂತ್ರ್ಯ ಹೋರಾಟಗಾರರ ಅಂಚೆ ಚೀಟಿಗಳು: ಅಂಬೇಡ್ಕರ್ ೭೫ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ೧೯೬೫ರಲ್ಲಿ ಬಾಬಾ ಸಾಹೇಬರ ಮೊದಲ ಅಂಚೆಚೀಟಿ ಬಿಡುಗಡೆ ಮಾಡಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಬಂದಿರುವ ಬಾಬಾ ಸಾಹೇಬರ ಅಂಚೆಚೀಟಿಗಳು, ಸಂವಿಧಾನದ ಆರ್ಟಿಕಲ್‌ಗೆ ಅನುಗುಣವಾಗಿರುವ ಇತರೆ ಅಂಚೆ ಚೀಟಿಗಳು, ಸ್ವಾತಂತ್ರ್ಯ ಹೋರಾಟಗಾರರ ೫೦೦ ವಿಶೇಷ ಸ್ಟಾಂಪ್‌ಗಳ ಪ್ರದರ್ಶನ ಇಲ್ಲಿ ಮೇಳೈಸಿದೆ.

ಇಲ್ಲಿಯ ವರೆಗೂ ೧೪೭ ಪ್ರದರ್ಶನ ನೀಡಿರುವ ಸತೀಶ್ ಪ್ರದರ್ಶನದ ಸ್ಥಳಕ್ಕೆ ತಮ್ಮ ಸ್ವಂತ ಖರ್ಚಿನಲ್ಲೇ ತೆರಳುತ್ತಿ ದ್ದಾರೆ. ಇದರಲ್ಲಿ ಕೇವಲ ೨೦ರಿಂದ ೨೨ ಪ್ರದರ್ಶ ನಗಳಲ್ಲಿ ಮಾತ್ರ ಗೌರವಧನ ಮತ್ತು ಪ್ರಯಾಣ ಭತ್ಯೆಯನ್ನು ಕೊಟ್ಟಿದ್ದಾರೆ.

ಸತೀಶ್ ಅವರಿಗೆ ರಾಷ್ಟ್ರೀಯ ಪುರಸ್ಕಾರ:  ವಿಶ್ವದ ಮೊದಲ ಖಾದಿ ಅಂಚೆ, ತ್ರಿಡಿ ಸ್ಟ್ಯಾಂಪ್, ಪ್ಲಾಸ್ಟಿಕ್ ಸ್ಟ್ಯಾಂಪ್, ವಿಶ್ವದ ಮೊದಲ ರೇಷ್ಮೆ ಲಕೋಟೆ, ಅಂಚೆ ಇಲಾಖೆ ಹೊರತಂದಿರುವ ಅಂಬೇಡ್ಕರ್ ಅವರ ಎಲ್ಲ ಚೀಟಿಗಳನ್ನು ಸಂಗ್ರಹಿಸಿರುವ ಸತೀಶ್ ಅವರು ೪ ರಾಷ್ಟ್ರೀಯ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

” ಗಿನ್ನಿಸ್ ದಾಖಲೆ ನಿರೀಕ್ಷೆ ಲಿಮ್ಕಾ ಮತ್ತು ಗಿನ್ನಿಸ್ ದಾಖಲೆಯಾಗುವಷ್ಟು ನಾಣ್ಯಗಳು ಇವರ ಬಳಿ ಇವೆ. ಹಳೆಯ ದಾಖಲೆಗಳ ಪ್ರಕಾರ ೮ ಸಾವಿರ ನಾಣ್ಯಗಳು ಈ ದಾಖಲೆಗೆ ಭಾಜನವಾಗಿದ್ದು, ನನ್ನ ಬಳಿ ಈಗ ೧೦ ಸಾವಿರ ನಾಣ್ಯಗಳಿವೆ. ಆದರೆ, ಈ ದಾಖಲೆಗಳಿಗೆ ಅರ್ಜಿ ಸಲ್ಲಿಸಲು ಸಮಯವಿಲ್ಲದೆ ಪ್ರದರ್ಶನ ನೀಡುತ್ತಿದ್ದೇನೆ ಎನ್ನುತ್ತಾರೆ ಸತೀಶ್.”

 

 

ಆಂದೋಲನ ಡೆಸ್ಕ್

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

30 mins ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

1 hour ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

1 hour ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

2 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

2 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

2 hours ago