Andolana originals

ಅಮೃತ್ 2.0 ಯೋಜನೆ ಕಾಮಗಾರಿ ಚುರುಕು

ನವೀನ್ ಡಿಸೋಜ

ಪ್ರತಿ ಮನೆಗೂ ಕೊಳವೆ ಸಂಪರ್ಕ; ಒಟ್ಟು ೧೨೧.೯೪ ಕಿ.ಮೀ. ಪೈಪ್‌ಲೈನ್, ೭೯,೧೧೭ ಮನೆಗಳಿಗೆ ನೀರಿನ ಸೌಲಭ್ಯ 

ಮಡಿಕೇರಿ: ಅಮೃತ್ ೨.೦ ಯೋಜನೆಯಡಿ ನಗರದ ಹಾಲಿ ನೀರಿನ ಸಂಪರ್ಕ ಜಾಲವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಪ್ರತಿ ಮನೆಗೂ ಕೊಳವೆ ಸಂಪರ್ಕ ಕಲ್ಪಿಸುವ ೪೭.೪೧ ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೈಗೆತ್ತಿಕೊಂಡಿದೆ.

೨ ಹಂತಗಳಲ್ಲಿ ನಡೆಯಲಿರುವ ಯೋಜನೆಯ ಮೊದಲ ಹಂತದ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಮನೆ ಮನೆಗೆ ನೀರಿನ ಪೈಪ್‌ಲೈನ್ ಸಂಪರ್ಕ ಕಲ್ಪಿಸಲಾಗುತ್ತಿದೆ.  ಅಮೃತ್ ೨.೦ ಯೋಜನೆಯಡಿ ರಾಜ್ಯದಲ್ಲಿರುವ ೧ ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಯೋಜನೆ ರೂಪಿಸಲಾಗಿದ್ದು, ಅದರಲ್ಲಿ ಮಡಿಕೇರಿ ನಗರವೂ ಒಳಗೊಂಡಿದೆ.

ಮೊದಲ ಹಂತದಲ್ಲಿ ೫೭.೮೭ ಕಿ.ಮೀ. ಮತ್ತು ೨ನೇ ಹಂತದಲ್ಲಿ ೭೦.೦೭ ಕಿ.ಮೀ. ಸೇರಿದಂತೆ ಒಟ್ಟು ೧೨೧.೯೪ ಕಿ. ಮೀ. ಪೈಪ್‌ಲೈನ್ ನಿರ್ಮಾಣ ಮಾಡುವುದರೊಂದಿಗೆ ನಗರದ ೭೯,೧೧೭ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಹಾಲಿ ಇರುವ ನೀರಿನ ಸಂಗ್ರಹ, ಶುದ್ಧೀಕರಣ ಘಟಕಗಳನ್ನೂ ಅಭಿವೃದ್ಧಿಪಡಿಸುವುದು ಯೋಜನೆಯ ಉದ್ದೇಶವಾಗಿದೆ.

೨೦೧೬ರಲ್ಲಿ ಕುಂಡಾ ಮೇಸ್ತ್ರಿ ಮತ್ತು ಕೂಟು ಹೊಳೆಯಿಂದ ಮಡಿಕೇರಿ ನಗರಕ್ಕೆ ನೀರು ಪೂರೈಸುವ ಯೋಜನೆ ಆರಂಭವಾಗಿದ್ದು, ಸದ್ಯಕ್ಕೆ ನೀರಿನ ಕೊರತೆ ಇಲ್ಲ. ಆದರೆ, ಕುಂಡಾಮೇಸ್ತ್ರಿ ಯೋಜನೆಯಲ್ಲಿ ನಗರದೊಳಗಿನ ಕೊಳವೆ ಸಂಪರ್ಕಗಳನ್ನು ಬದಲಿಸಿರಲಿಲ್ಲ. ಬದಲಿಗೆ ಹಳೆಯ ಪೈಪ್ಲೈನ್‌ಗೆ ಸಂಪರ್ಕ ಕಲ್ಪಿಸುವ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ. ನಗರಕ್ಕೆ ಹೆಚ್ಚಿನ ಪ್ರಮಾಣದ ಪ್ರವಾಸಿಗರು ಭೇಟಿ ನೀಡುವುದರಿಂದ ಮತ್ತು ಈಗಿರುವ ಹಳೆಯ ಪೈಪ್ ಲೈನ್ ಮೂಲಕ ಮುಂದಿನ ದಿನಗಳಲ್ಲಿ ಹೆಚ್ಚಳವಾಗುವ ಜನಸಂಖ್ಯೆಗೆ ಅನುಗುಣವಾಗಿ ನೀರಿನ ಪೂರೈಕೆ ಕಷ್ಟವಾಗಲಿದೆ.

ಈ ಹಿನ್ನೆಲೆಯಲ್ಲಿ ಪೈಪ್‌ಲೈನ್ ಬದಲಾವಣೆ, ಹೊಸ ಸಂಪರ್ಕಗಳನ್ನು ಕಲ್ಪಿಸಲಾಗುತ್ತಿದೆ. ಆ ಮೂಲಕ ನಗರದ ಎಲ್ಲ ಮನೆಗಳಿಗೂ ಮೀಟರ್ ಸೌಲಭ್ಯದೊಂದಿಗೆ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ನಗರದಲ್ಲಿ ೩೯,೦೦೦ ಜನಸಂಖ್ಯೆಯಿದ್ದು, ನೀರಿನ ಬೇಡಿಕೆ(ತಲಾ ೧೩೫ ಲೀ.ನಂತೆ) ಪ್ರತಿ ದಿನ ೫.೨೭ ಮೆಗಾ ಲೀ. ಅವಶ್ಯವಿದೆ.

೪೭.೪೧ ಕೋಟಿ ರೂ. ಯೋಜನೆ: 

ಅಮೃತ್ ೨.೦ ಯೋಜನೆಯ ಒಟ್ಟು ವೆಚ್ಚದಲ್ಲಿ ಶೇ.೫೦ ರಷ್ಟನ್ನು ಕೇಂದ್ರ ಸರ್ಕಾರ ಭರಿಸಿದರೆ, ಶೇ.೪೦ರಷ್ಟನ್ನು ರಾಜ್ಯ ಸರ್ಕಾರ ಉಳಿದ ಶೇ.೧೦ರಷ್ಟನ್ನು ಸ್ಥಳೀಯ ಸಂಸ್ಥೆ ಭರಿಸಲಿದೆ. ಅದರಂತೆ ಮೊದಲ ಹಂತದ ಕಾಮಗಾರಿಯ ೧೯.೯೦ ಕೋಟಿ ರೂ.ಗಳ ಪೈಕಿ ಕೇಂದ್ರ ಸರ್ಕಾರ ೮.೫೫ ಕೋಟಿ ರೂ., ರಾಜ್ಯ ಸರ್ಕಾರ ೬.೮೪ ಕೋಟಿ ರೂ. ಮತ್ತು ನಗರಸಭೆಯಿಂದ ಶೇ.೪.೫೨ ಕೋಟಿ ರೂ. ಭರಿಸಲಾಗುತ್ತದೆ. ೨ನೇ ಹಂತದ ಕಾಮಗಾರಿಯ ಅಂದಾಜು ವೆಚ್ಚ ೨೭.೫೧ ಕೋಟಿ ರೂ. ಆಗಿದ್ದು, ಕೇಂದ್ರ ಸರ್ಕಾರ ೧೨.೭೭ ಕೋಟಿ ರೂ., ರಾಜ್ಯ ಸರ್ಕಾರ ೧೦.೨೨ ಕೋಟಿ ರೂ. ಮತ್ತು ನಗರಸಭೆ ೬.೧೬ ಕೋಟಿ ರೂ. ಭರಿಸಲಿದೆ.

” ಅಮೃತ್ ೨.೦ ಯೋಜನೆಯಡಿ ೨ ಹಂತಗಳ ಯೋಜನೆಯ ಕಾಮಗಾರಿ ಒಟ್ಟಾಗಿ ಆರಂಭವಾಗಿದೆ. ನಗರದ ಮನೆ ಮನೆಗೂ ಪೈಪ್ ಲೈನ್ ಮತ್ತು ಮೀಟರ್ ಅಳವಡಿಕೆ ಜತೆಗೆ ನೀರಿನ ಸಂಗ್ರಹಾಗಾರಗಳ ದುರಸ್ತಿ, ಅಭಿವೃದ್ಧಿ ಕಾಮಗಾರಿಯನ್ನೂ ಈ ಯೋಜನೆ ಒಳಗೊಂಡಿದೆ.”

-ಎ.ಪ್ರಸನ್ನ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಆಂದೋಲನ ಡೆಸ್ಕ್

Recent Posts

ಸಾಮಾಜಿಕ ಬಹಿಷ್ಕಾರಕ್ಕೆ ಕಾನೂನಿನ ಅಂಕುಶ : ಇಂದಿನಿಂದ ಹೊಸ ನಿಯಮ ಜಾರಿಗೆ

ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ…

5 hours ago

ನಾಳೆ ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿಎಂ, ಡಿಸಿಎಂ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ : ಮುಖ್ಯ ಶಿಕ್ಷಕರು ಸೇರಿ 8 ಮಂದಿ ಬಂಧನ

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…

7 hours ago

ಹುಲಿ ದಾಳಿ ; ಹಸು ಸಾವು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…

7 hours ago

ಜ.15ರಿಂದ ಐತಿಹಾಸಿಕ ಸುತ್ತೂರು ಜಾತ್ರೆ : 25 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…

7 hours ago

ರೈತನ ಮಗಳ ಸಾಧನೆ | ಮೈಸೂರು ವಿ.ವಿ ವ್ಯಾಪ್ತಿಯ ಬಿ.ಇಡಿ ಕಾಲೇಜಿಗೆ ಮೊದಲ ರ‍್ಯಾಂಕ್‌, ಚಿನ್ನದ ಪದಕ

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…

7 hours ago