ನವೀನ್ ಡಿಸೋಜ
ಪ್ರತಿ ಮನೆಗೂ ಕೊಳವೆ ಸಂಪರ್ಕ; ಒಟ್ಟು ೧೨೧.೯೪ ಕಿ.ಮೀ. ಪೈಪ್ಲೈನ್, ೭೯,೧೧೭ ಮನೆಗಳಿಗೆ ನೀರಿನ ಸೌಲಭ್ಯ
ಮಡಿಕೇರಿ: ಅಮೃತ್ ೨.೦ ಯೋಜನೆಯಡಿ ನಗರದ ಹಾಲಿ ನೀರಿನ ಸಂಪರ್ಕ ಜಾಲವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಪ್ರತಿ ಮನೆಗೂ ಕೊಳವೆ ಸಂಪರ್ಕ ಕಲ್ಪಿಸುವ ೪೭.೪೧ ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೈಗೆತ್ತಿಕೊಂಡಿದೆ.
೨ ಹಂತಗಳಲ್ಲಿ ನಡೆಯಲಿರುವ ಯೋಜನೆಯ ಮೊದಲ ಹಂತದ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಮನೆ ಮನೆಗೆ ನೀರಿನ ಪೈಪ್ಲೈನ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಅಮೃತ್ ೨.೦ ಯೋಜನೆಯಡಿ ರಾಜ್ಯದಲ್ಲಿರುವ ೧ ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಯೋಜನೆ ರೂಪಿಸಲಾಗಿದ್ದು, ಅದರಲ್ಲಿ ಮಡಿಕೇರಿ ನಗರವೂ ಒಳಗೊಂಡಿದೆ.
ಮೊದಲ ಹಂತದಲ್ಲಿ ೫೭.೮೭ ಕಿ.ಮೀ. ಮತ್ತು ೨ನೇ ಹಂತದಲ್ಲಿ ೭೦.೦೭ ಕಿ.ಮೀ. ಸೇರಿದಂತೆ ಒಟ್ಟು ೧೨೧.೯೪ ಕಿ. ಮೀ. ಪೈಪ್ಲೈನ್ ನಿರ್ಮಾಣ ಮಾಡುವುದರೊಂದಿಗೆ ನಗರದ ೭೯,೧೧೭ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಹಾಲಿ ಇರುವ ನೀರಿನ ಸಂಗ್ರಹ, ಶುದ್ಧೀಕರಣ ಘಟಕಗಳನ್ನೂ ಅಭಿವೃದ್ಧಿಪಡಿಸುವುದು ಯೋಜನೆಯ ಉದ್ದೇಶವಾಗಿದೆ.
೨೦೧೬ರಲ್ಲಿ ಕುಂಡಾ ಮೇಸ್ತ್ರಿ ಮತ್ತು ಕೂಟು ಹೊಳೆಯಿಂದ ಮಡಿಕೇರಿ ನಗರಕ್ಕೆ ನೀರು ಪೂರೈಸುವ ಯೋಜನೆ ಆರಂಭವಾಗಿದ್ದು, ಸದ್ಯಕ್ಕೆ ನೀರಿನ ಕೊರತೆ ಇಲ್ಲ. ಆದರೆ, ಕುಂಡಾಮೇಸ್ತ್ರಿ ಯೋಜನೆಯಲ್ಲಿ ನಗರದೊಳಗಿನ ಕೊಳವೆ ಸಂಪರ್ಕಗಳನ್ನು ಬದಲಿಸಿರಲಿಲ್ಲ. ಬದಲಿಗೆ ಹಳೆಯ ಪೈಪ್ಲೈನ್ಗೆ ಸಂಪರ್ಕ ಕಲ್ಪಿಸುವ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ. ನಗರಕ್ಕೆ ಹೆಚ್ಚಿನ ಪ್ರಮಾಣದ ಪ್ರವಾಸಿಗರು ಭೇಟಿ ನೀಡುವುದರಿಂದ ಮತ್ತು ಈಗಿರುವ ಹಳೆಯ ಪೈಪ್ ಲೈನ್ ಮೂಲಕ ಮುಂದಿನ ದಿನಗಳಲ್ಲಿ ಹೆಚ್ಚಳವಾಗುವ ಜನಸಂಖ್ಯೆಗೆ ಅನುಗುಣವಾಗಿ ನೀರಿನ ಪೂರೈಕೆ ಕಷ್ಟವಾಗಲಿದೆ.
ಈ ಹಿನ್ನೆಲೆಯಲ್ಲಿ ಪೈಪ್ಲೈನ್ ಬದಲಾವಣೆ, ಹೊಸ ಸಂಪರ್ಕಗಳನ್ನು ಕಲ್ಪಿಸಲಾಗುತ್ತಿದೆ. ಆ ಮೂಲಕ ನಗರದ ಎಲ್ಲ ಮನೆಗಳಿಗೂ ಮೀಟರ್ ಸೌಲಭ್ಯದೊಂದಿಗೆ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ನಗರದಲ್ಲಿ ೩೯,೦೦೦ ಜನಸಂಖ್ಯೆಯಿದ್ದು, ನೀರಿನ ಬೇಡಿಕೆ(ತಲಾ ೧೩೫ ಲೀ.ನಂತೆ) ಪ್ರತಿ ದಿನ ೫.೨೭ ಮೆಗಾ ಲೀ. ಅವಶ್ಯವಿದೆ.
೪೭.೪೧ ಕೋಟಿ ರೂ. ಯೋಜನೆ:
ಅಮೃತ್ ೨.೦ ಯೋಜನೆಯ ಒಟ್ಟು ವೆಚ್ಚದಲ್ಲಿ ಶೇ.೫೦ ರಷ್ಟನ್ನು ಕೇಂದ್ರ ಸರ್ಕಾರ ಭರಿಸಿದರೆ, ಶೇ.೪೦ರಷ್ಟನ್ನು ರಾಜ್ಯ ಸರ್ಕಾರ ಉಳಿದ ಶೇ.೧೦ರಷ್ಟನ್ನು ಸ್ಥಳೀಯ ಸಂಸ್ಥೆ ಭರಿಸಲಿದೆ. ಅದರಂತೆ ಮೊದಲ ಹಂತದ ಕಾಮಗಾರಿಯ ೧೯.೯೦ ಕೋಟಿ ರೂ.ಗಳ ಪೈಕಿ ಕೇಂದ್ರ ಸರ್ಕಾರ ೮.೫೫ ಕೋಟಿ ರೂ., ರಾಜ್ಯ ಸರ್ಕಾರ ೬.೮೪ ಕೋಟಿ ರೂ. ಮತ್ತು ನಗರಸಭೆಯಿಂದ ಶೇ.೪.೫೨ ಕೋಟಿ ರೂ. ಭರಿಸಲಾಗುತ್ತದೆ. ೨ನೇ ಹಂತದ ಕಾಮಗಾರಿಯ ಅಂದಾಜು ವೆಚ್ಚ ೨೭.೫೧ ಕೋಟಿ ರೂ. ಆಗಿದ್ದು, ಕೇಂದ್ರ ಸರ್ಕಾರ ೧೨.೭೭ ಕೋಟಿ ರೂ., ರಾಜ್ಯ ಸರ್ಕಾರ ೧೦.೨೨ ಕೋಟಿ ರೂ. ಮತ್ತು ನಗರಸಭೆ ೬.೧೬ ಕೋಟಿ ರೂ. ಭರಿಸಲಿದೆ.
” ಅಮೃತ್ ೨.೦ ಯೋಜನೆಯಡಿ ೨ ಹಂತಗಳ ಯೋಜನೆಯ ಕಾಮಗಾರಿ ಒಟ್ಟಾಗಿ ಆರಂಭವಾಗಿದೆ. ನಗರದ ಮನೆ ಮನೆಗೂ ಪೈಪ್ ಲೈನ್ ಮತ್ತು ಮೀಟರ್ ಅಳವಡಿಕೆ ಜತೆಗೆ ನೀರಿನ ಸಂಗ್ರಹಾಗಾರಗಳ ದುರಸ್ತಿ, ಅಭಿವೃದ್ಧಿ ಕಾಮಗಾರಿಯನ್ನೂ ಈ ಯೋಜನೆ ಒಳಗೊಂಡಿದೆ.”
-ಎ.ಪ್ರಸನ್ನ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…