ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗಾಗಿ ಹೊಸ ತಂತ್ರ ಪ್ರಯೋಗ!
ಎಚ್.ಎಸ್.ದಿನೇಶ್ ಕುಮಾರ್
ಮೈಸೂರು: ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಕಡಿಮೆಯಾಗಿಲ್ಲ. ಕಾರುಗಳನ್ನು ಅಡ್ಡಗಟ್ಟಲು ಹೊಸ ಹೊಸ ತಂತ್ರಗಳನ್ನು ಕಳ್ಳರು ಪ್ರಯೋಗ ಮಾಡುತ್ತಿದ್ದಾರೆ. ಹಾಗಾಗಿ ಈ ರಸ್ತೆಯಲ್ಲಿ ವಾಹನಗಳಲ್ಲಿ ಅದರಲ್ಲಿಯೂ ಕಾರಿನಲ್ಲಿ ಪ್ರಯಾಣಿಸುವವರು ಆತಂಕಕ್ಕೊಳಗಾಗಿದ್ದಾರೆ.
ನಿರಂತರ ಅಪಘಾತ, ಟೋಲ್ ವಿವಾದಗಳಿಂದ ಸಾಕಷ್ಟು ಚರ್ಚೆಯಲ್ಲಿರುವ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಇದೀಗ ಪದೇ ಪದೆ ಪ್ರಯಾಣಿಕರನ್ನು ದೋಚುತ್ತಿರುವುದು ಪ್ರಯಾಣಿಕರ ಸುರಕ್ಷತೆಯ ಬಗ್ಗೆಯೂ ಆತಂಕ ಮೂಡುವಂತೆ ಮಾಡಿದೆ.
ಹೆದ್ದಾರಿಯಲ್ಲಿ ವಾಹನ ನಿಲುಗಡೆ ಮಾಡುವುದೇ ಅಪಾಯ ಎಂಬಂತಹಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡುವ ತಂಡ ವ್ಯವಸ್ಥಿತವಾಗಿ ಸಂಚು ಮಾಡುತ್ತಿದೆ ಎಂಬುದು ಅನೇಕ ಪ್ರಕರಣಗಳಿಂದ ಬಹಿರಂಗಗೊಂಡಿದೆ.
ಇದೀಗ ಇಂತಹುದೇ ಒಂದು ಘಟನೆ ಬೆಂಗಳೂರಿನ ಕುಂಬಳಗೋಡು ಬಳಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರನ್ನು ಕುಂಬಳಗೋಡು ಸಮೀಪ ಅಡ್ಡಗಟ್ಟಿ ನಿಲ್ಲಿಸಲು ಖದೀಮನೊಬ್ಬ ಹೊಸ ತಂತ್ರವನ್ನು ಬಳಸಿದ್ದಾನೆ. ಆದರೆ, ಆತನಿಗೆ ಕಾರು ಚಾಲಕ ಸಮಯ ಪ್ರಜ್ಞೆಯಿಂದ ಚಳ್ಳೆಹಣ್ಣು ತಿನ್ನಿಸಿ, ದರೋಡೆ ಯತ್ನವನ್ನು ವಿಫಲಗೊಳಿಸಿದ್ದಾರೆ.
ಘಟನೆ ವಿವರ: ಎರಡು ದಿನಗಳ ಹಿಂದೆ ಚಾಲಕ ದೀಪ ದರ್ಶನ್ ಎಂಬವರು ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದರು. ಈ ವೇಳೆ ಬಿಡದಿ ಬಳಿಯ ಕುಂಬಳಗೋಡು ಬಳಿ ದುಷ್ಕರ್ಮಿಯೊಬ್ಬ ರಸ್ತೆ ಬದಿಯಲ್ಲಿ ಮರದ ದೊಡ್ಡಕೊಂಬೆಯನ್ನು ಇಟ್ಟುಕೊಂಡುಕುಳಿತಿದ್ದಾನೆ. ಕಾರು ಹತ್ತಿರ ಬರುತ್ತಿದ್ದಂತೆ ಆತ ಮರದ ಕೊಂಬೆಯನ್ನು ರಸ್ತೆಗೆ ತಳ್ಳಿದ್ದಾನೆ. ತಕ್ಷಣವೇ ಎಚ್ಚೆತ್ತ ದೀಪ್ ಕಾರನ್ನು ಎಡಕ್ಕೆ ತಿರುಗಿಸಿ ವೇಗವಾಗಿ ಅಲ್ಲಿಂದ ಬಂದಿದ್ದಾರೆ. ತಕ್ಷಣವೇ ಅವರು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಬಿಡದಿ
ಠಾಣಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ನಂತರ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿ ಪತ್ತೆಗೆ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸಿದ್ದಾರೆ.
ಸರ್ವೀಸ್ ರಸ್ತೆಯಲ್ಲಿ ಕೂಡ ಸುಲಿಗೆ
ಬೆಂಗಳೂರು ಮೈಸೂರು ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿ ಕೂಡ ಆಗಿಂದಾಗ್ಗೆ ಸುಲಿಗೆ ಪ್ರಕರಣಗಳು ವರದಿಯಾಗುತ್ತವೆ. ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿರುವ ಸಮಯದಲ್ಲಿ ಪ್ರಯಾಣಿಕರನ್ನು ದೋಚಲಾಗುತ್ತಿದೆ. ಅಲ್ಲಿ ವಿದ್ಯುತ್ ದೀಪ, ಸಿಸಿ ಕ್ಯಾಮೆರಾ ಇಲ್ಲದಿರುವುದೇ ದರೋಡೆಗೆ ಕಾರಣವಾಗಿದೆ.
ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಜನರು, ಪ್ರಾಣಿಗಳು ವಿನಾಕಾರಣ ಪ್ರವೇಶ ಪಡೆಯದಂತೆ ಅಳವಡಿಸಿರುವ ಫೆನ್ಸಿಂಗ್ ಅಲ್ಲಲ್ಲಿ ಕಿತ್ತು ಹೋಗಿದ್ದು, ಇದರಿಂದಾಗಿ ಸುರಕ್ಷತೆ ಇಲ್ಲದಂತಾಗಿದೆ. ಈ ಮೂಲಕವೂ ಕಳ್ಳರು ಪ್ರವೇಶ ಪಡೆದು ದರೋಡೆಗಿಳಿಯುತ್ತಿದ್ದಾರೆ.
ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ:
ಸರ್ವೀಸ್ ರಸ್ತೆಯಲ್ಲಿ ಸಿಸಿಟಿವಿ ಅಳವಡಿಸುವುದು ಅತ್ಯಗತ್ಯವಾಗಿದೆ. ಹೆದ್ದಾರಿಯಲ್ಲಿ ಕಿತ್ತುಹೋಗಿರುವ ತಂತಿ ಬೇಲಿಗಳನ್ನು ದುರಸ್ತಿ ಮಾಡಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…