Andolana originals

ಮರದ ಕೊಂಬೆ ರಸ್ತೆಗೆ ಎಸೆದು ಕಾರು ಅಡ್ಡಗಟ್ಟುವ ಯತ್ನ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗಾಗಿ ಹೊಸ ತಂತ್ರ ಪ್ರಯೋಗ!

ಎಚ್.ಎಸ್.ದಿನೇಶ್ ಕುಮಾರ್

ಮೈಸೂರು: ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಕಡಿಮೆಯಾಗಿಲ್ಲ. ಕಾರುಗಳನ್ನು ಅಡ್ಡಗಟ್ಟಲು ಹೊಸ ಹೊಸ ತಂತ್ರಗಳನ್ನು ಕಳ್ಳರು ಪ್ರಯೋಗ ಮಾಡುತ್ತಿದ್ದಾರೆ. ಹಾಗಾಗಿ ಈ ರಸ್ತೆಯಲ್ಲಿ ವಾಹನಗಳಲ್ಲಿ ಅದರಲ್ಲಿಯೂ ಕಾರಿನಲ್ಲಿ ಪ್ರಯಾಣಿಸುವವರು ಆತಂಕಕ್ಕೊಳಗಾಗಿದ್ದಾರೆ.

ನಿರಂತರ ಅಪಘಾತ, ಟೋಲ್ ವಿವಾದಗಳಿಂದ ಸಾಕಷ್ಟು ಚರ್ಚೆಯಲ್ಲಿರುವ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇದೀಗ ಪದೇ ಪದೆ ಪ್ರಯಾಣಿಕರನ್ನು ದೋಚುತ್ತಿರುವುದು ಪ್ರಯಾಣಿಕರ ಸುರಕ್ಷತೆಯ ಬಗ್ಗೆಯೂ ಆತಂಕ ಮೂಡುವಂತೆ ಮಾಡಿದೆ.

ಹೆದ್ದಾರಿಯಲ್ಲಿ ವಾಹನ ನಿಲುಗಡೆ ಮಾಡುವುದೇ ಅಪಾಯ ಎಂಬಂತಹಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡುವ ತಂಡ ವ್ಯವಸ್ಥಿತವಾಗಿ ಸಂಚು ಮಾಡುತ್ತಿದೆ ಎಂಬುದು ಅನೇಕ ಪ್ರಕರಣಗಳಿಂದ ಬಹಿರಂಗಗೊಂಡಿದೆ.

ಇದೀಗ ಇಂತಹುದೇ ಒಂದು ಘಟನೆ ಬೆಂಗಳೂರಿನ ಕುಂಬಳಗೋಡು ಬಳಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರನ್ನು ಕುಂಬಳಗೋಡು ಸಮೀಪ ಅಡ್ಡಗಟ್ಟಿ ನಿಲ್ಲಿಸಲು ಖದೀಮನೊಬ್ಬ ಹೊಸ ತಂತ್ರವನ್ನು ಬಳಸಿದ್ದಾನೆ. ಆದರೆ, ಆತನಿಗೆ ಕಾರು ಚಾಲಕ ಸಮಯ ಪ್ರಜ್ಞೆಯಿಂದ ಚಳ್ಳೆಹಣ್ಣು ತಿನ್ನಿಸಿ, ದರೋಡೆ ಯತ್ನವನ್ನು ವಿಫಲಗೊಳಿಸಿದ್ದಾರೆ.

ಘಟನೆ ವಿವರ: ಎರಡು ದಿನಗಳ ಹಿಂದೆ ಚಾಲಕ ದೀಪ ದರ್ಶನ್ ಎಂಬವರು ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದರು. ಈ ವೇಳೆ ಬಿಡದಿ ಬಳಿಯ ಕುಂಬಳಗೋಡು ಬಳಿ ದುಷ್ಕರ್ಮಿಯೊಬ್ಬ ರಸ್ತೆ ಬದಿಯಲ್ಲಿ ಮರದ ದೊಡ್ಡಕೊಂಬೆಯನ್ನು ಇಟ್ಟುಕೊಂಡುಕುಳಿತಿದ್ದಾನೆ. ಕಾರು ಹತ್ತಿರ ಬರುತ್ತಿದ್ದಂತೆ ಆತ ಮರದ ಕೊಂಬೆಯನ್ನು ರಸ್ತೆಗೆ ತಳ್ಳಿದ್ದಾನೆ. ತಕ್ಷಣವೇ ಎಚ್ಚೆತ್ತ ದೀಪ್ ಕಾರನ್ನು ಎಡಕ್ಕೆ ತಿರುಗಿಸಿ ವೇಗವಾಗಿ ಅಲ್ಲಿಂದ ಬಂದಿದ್ದಾರೆ. ತಕ್ಷಣವೇ ಅವರು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಬಿಡದಿ
ಠಾಣಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ನಂತರ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿ ಪತ್ತೆಗೆ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸಿದ್ದಾರೆ.

ಸರ್ವೀಸ್ ರಸ್ತೆಯಲ್ಲಿ ಕೂಡ ಸುಲಿಗೆ
ಬೆಂಗಳೂರು ಮೈಸೂರು ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿ ಕೂಡ ಆಗಿಂದಾಗ್ಗೆ ಸುಲಿಗೆ ಪ್ರಕರಣಗಳು ವರದಿಯಾಗುತ್ತವೆ. ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿರುವ ಸಮಯದಲ್ಲಿ ಪ್ರಯಾಣಿಕರನ್ನು ದೋಚಲಾಗುತ್ತಿದೆ. ಅಲ್ಲಿ ವಿದ್ಯುತ್‌ ದೀಪ, ಸಿಸಿ ಕ್ಯಾಮೆರಾ ಇಲ್ಲದಿರುವುದೇ ದರೋಡೆಗೆ ಕಾರಣವಾಗಿದೆ.

ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಜನರು, ಪ್ರಾಣಿಗಳು ವಿನಾಕಾರಣ ಪ್ರವೇಶ ಪಡೆಯದಂತೆ ಅಳವಡಿಸಿರುವ ಫೆನ್ಸಿಂಗ್ ಅಲ್ಲಲ್ಲಿ ಕಿತ್ತು ಹೋಗಿದ್ದು, ಇದರಿಂದಾಗಿ ಸುರಕ್ಷತೆ ಇಲ್ಲದಂತಾಗಿದೆ. ಈ ಮೂಲಕವೂ ಕಳ್ಳರು ಪ್ರವೇಶ ಪಡೆದು ದರೋಡೆಗಿಳಿಯುತ್ತಿದ್ದಾರೆ.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ:
ಸರ್ವೀಸ್ ರಸ್ತೆಯಲ್ಲಿ ಸಿಸಿಟಿವಿ ಅಳವಡಿಸುವುದು ಅತ್ಯಗತ್ಯವಾಗಿದೆ. ಹೆದ್ದಾರಿಯಲ್ಲಿ ಕಿತ್ತುಹೋಗಿರುವ ತಂತಿ ಬೇಲಿಗಳನ್ನು ದುರಸ್ತಿ ಮಾಡಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago