ಪ್ರಶಾಂತ್ ಎಸ್.
ಸ್ಕಾಲರ್ಶಿಪ್ ಬಳಸಿಕೊಂಡೇ ವ್ಯಾಸಂಗ ಮಾಡಿದ ಮಹಿನ್ ಸರೂರ್ ಸಾಧ
ಮೈಸೂರು: ಬಡತನದ ನಡುವೆಯೂ ಆಟೋ ಚಾಲಕನ ಪುತ್ರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಆಟೋ ಚಾಲಕರಾಗಿ ಕೆಲಸ ಮಾಡುವ ಮುಜೀಬ್ ಅಹಮ್ಮದ್ ಹಾಗೂ ಫೌಜಿಯಾ ಸುಲ್ತಾನ ಅವರ ಪುತ್ರಿ ಮಹಿನ್ ಸರೂರ್ ೫೭೬ ಅಂಕ ಗಳಿಸಿ ಮಹಾರಾಣಿ ಪದವಿಪೂರ್ವ ಕಾಲೇಜಿಗೆ ಈ ಬಾರಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಶಿಷ್ಯವೇತನದಲ್ಲೇ ಓದು: ಎಸ್ಎಸ್ಎಲ್ಎಸಿ ಪರೀಕ್ಷೆಯಲ್ಲಿಯೂ ಶೇ.೯೩ ಫಲಿತಾಂಶ ಪಡೆದಿದ್ದರಿಂದ ಶಿಷ್ಯವೇತನ ಪಡೆದುಕೊಂಡಿದ್ದರು. ಅಂದಿನಿಂದ ಪೋಷಕರಿಗೆ ಹೊರೆಯಾಗದಂತೆ ಮಹಿನ್ ಸರೂರ್ ಅವರು ಸರ್ಕಾರಿ ಸ್ಕಾಲರ್ಶಿಪ್ ಅನ್ನೇ ಬಳಸಿಕೊಂಡು ವಿದ್ಯಾಭ್ಯಾಸ ಮಾಡಿದ್ದಾರೆ. ಜೊತೆಗೆ ತಾನು ದುಡಿದು ಓದಿನಲ್ಲಿ ಮೇಲುಗೈ ಸಾಧಿಸಿದ್ದಾರೆ.
ನನಗೆ ನನ್ನ ಕುಟುಂಬವೇ ಸೂರ್ತಿ: ನೋಡಮ್ಮ ನಮಗೆ ಹೆಚ್ಚು ಓದಿಸಲು ಆಗಲ್ಲ. ನೀನು ಚೆನ್ನಾಗಿ ಓದಿದರೆ ನಿನ್ನನ್ನು ಯಾರಾದರೂ ಮುಂದೆ ಓದಿಸುತ್ತಾರೆಂದು ಅಪ್ಪ-ಅಮ್ಮ ಆಗಾಗ ಹೇಳುತ್ತಿರುವಾಗ ತುಂಬಾ ದುಃಖವಾಗುತ್ತಿತು. ಈ ಮಾತುಗಳೇ ನನ್ನ ಓದಿಗೆ ಸೂರ್ತಿಯಾಯಿತು ಎಂದು ಓದಿನ ಅನುಭವವನ್ನು ಹಂಚಿಕೊಂಡಿದ್ದಾರೆ.
” ಮನೆಯಲ್ಲಿ ಬಡತನವಿದ್ದರೂ ನನ್ನ ತಂದೆ ಆಟೋ ಓಡಿಸುತ್ತಾ ಬಂದಂತಹ ಹಣವನ್ನು ಕೂಡಿಟ್ಟು ಓದಲು ಸಹಾಯ ಮಾಡಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಹಾಕಿ ಉನ್ನತ ವಿದ್ಯಾಭ್ಯಾಸ ಮಾಡಿ ನನ್ನ ಗುರಿ ಮುಟ್ಟುತ್ತೇನೆ.”
ಮಹಿನ್ ಸರೂರ್, ವಿದ್ಯಾರ್ಥಿನಿ
” ಮಹಿನ್ ಸರೂರ್ ನಮ್ಮಕಾಲೇಜಿಗೆ ಕೀರ್ತಿ ತಂದಿದ್ದಾಳೆ. ಇದರಿಂದ ನಮ್ಮ ಸಿಬ್ಬಂದಿಗೆ ಬಹಳ ಸಂತಸವಾಗಿದೆ. ಮುಂದಿನ ವಿದ್ಯಾಭ್ಯಾಸಕ್ಕೆ ನಮ್ಮ ಕಾಲೇಜಿನ ಸಿಬ್ಬಂದಿ ವತಿಯಿಂದಲೂ ಸಹಾಯ ಮಾಡುತ್ತೇವೆ.”
ಪಿ.ಸೋಮಣ್ಣ, ಪ್ರಾಂಶುಪಾಲ, ಮಹಾರಾಣಿ ಪದವಿಪೂರ್ವ ಕಾಲೇಜು.
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…