Andolana originals

ಆಟೋ ಚಾಲಕನ ಪುತ್ರಿಗೆ ಒಲಿದ ವಿದ್ಯೆ!

ಪ್ರಶಾಂತ್ ಎಸ್.

ಸ್ಕಾಲರ್‌ಶಿಪ್ ಬಳಸಿಕೊಂಡೇ ವ್ಯಾಸಂಗ ಮಾಡಿದ ಮಹಿನ್ ಸರೂರ್ ಸಾಧ

ಮೈಸೂರು: ಬಡತನದ ನಡುವೆಯೂ ಆಟೋ ಚಾಲಕನ ಪುತ್ರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಆಟೋ ಚಾಲಕರಾಗಿ ಕೆಲಸ ಮಾಡುವ ಮುಜೀಬ್ ಅಹಮ್ಮದ್ ಹಾಗೂ ಫೌಜಿಯಾ ಸುಲ್ತಾನ ಅವರ ಪುತ್ರಿ ಮಹಿನ್ ಸರೂರ್ ೫೭೬ ಅಂಕ ಗಳಿಸಿ ಮಹಾರಾಣಿ ಪದವಿಪೂರ್ವ ಕಾಲೇಜಿಗೆ ಈ ಬಾರಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.

ಶಿಷ್ಯವೇತನದಲ್ಲೇ ಓದು: ಎಸ್‌ಎಸ್ಎಲ್‌ಎಸಿ ಪರೀಕ್ಷೆಯಲ್ಲಿಯೂ ಶೇ.೯೩ ಫಲಿತಾಂಶ ಪಡೆದಿದ್ದರಿಂದ ಶಿಷ್ಯವೇತನ ಪಡೆದುಕೊಂಡಿದ್ದರು. ಅಂದಿನಿಂದ ಪೋಷಕರಿಗೆ ಹೊರೆಯಾಗದಂತೆ ಮಹಿನ್ ಸರೂರ್ ಅವರು ಸರ್ಕಾರಿ ಸ್ಕಾಲರ್‌ಶಿಪ್ ಅನ್ನೇ ಬಳಸಿಕೊಂಡು ವಿದ್ಯಾಭ್ಯಾಸ ಮಾಡಿದ್ದಾರೆ. ಜೊತೆಗೆ ತಾನು ದುಡಿದು ಓದಿನಲ್ಲಿ ಮೇಲುಗೈ ಸಾಧಿಸಿದ್ದಾರೆ.

ನನಗೆ ನನ್ನ ಕುಟುಂಬವೇ ಸೂರ್ತಿ: ನೋಡಮ್ಮ ನಮಗೆ ಹೆಚ್ಚು ಓದಿಸಲು ಆಗಲ್ಲ. ನೀನು ಚೆನ್ನಾಗಿ ಓದಿದರೆ ನಿನ್ನನ್ನು ಯಾರಾದರೂ ಮುಂದೆ ಓದಿಸುತ್ತಾರೆಂದು ಅಪ್ಪ-ಅಮ್ಮ ಆಗಾಗ ಹೇಳುತ್ತಿರುವಾಗ ತುಂಬಾ ದುಃಖವಾಗುತ್ತಿತು. ಈ ಮಾತುಗಳೇ ನನ್ನ ಓದಿಗೆ ಸೂರ್ತಿಯಾಯಿತು ಎಂದು ಓದಿನ ಅನುಭವವನ್ನು ಹಂಚಿಕೊಂಡಿದ್ದಾರೆ.

” ಮನೆಯಲ್ಲಿ ಬಡತನವಿದ್ದರೂ ನನ್ನ ತಂದೆ ಆಟೋ ಓಡಿಸುತ್ತಾ ಬಂದಂತಹ ಹಣವನ್ನು ಕೂಡಿಟ್ಟು ಓದಲು ಸಹಾಯ ಮಾಡಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಹಾಕಿ ಉನ್ನತ ವಿದ್ಯಾಭ್ಯಾಸ ಮಾಡಿ ನನ್ನ ಗುರಿ ಮುಟ್ಟುತ್ತೇನೆ.”

ಮಹಿನ್ ಸರೂರ್, ವಿದ್ಯಾರ್ಥಿನಿ

” ಮಹಿನ್ ಸರೂರ್ ನಮ್ಮಕಾಲೇಜಿಗೆ ಕೀರ್ತಿ ತಂದಿದ್ದಾಳೆ. ಇದರಿಂದ ನಮ್ಮ ಸಿಬ್ಬಂದಿಗೆ ಬಹಳ ಸಂತಸವಾಗಿದೆ. ಮುಂದಿನ ವಿದ್ಯಾಭ್ಯಾಸಕ್ಕೆ ನಮ್ಮ ಕಾಲೇಜಿನ ಸಿಬ್ಬಂದಿ ವತಿಯಿಂದಲೂ ಸಹಾಯ ಮಾಡುತ್ತೇವೆ.”

ಪಿ.ಸೋಮಣ್ಣ, ಪ್ರಾಂಶುಪಾಲ, ಮಹಾರಾಣಿ ಪದವಿಪೂರ್ವ ಕಾಲೇಜು.

ಆಂದೋಲನ ಡೆಸ್ಕ್

Recent Posts

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

3 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

8 mins ago

ಕೆಸರುಗದ್ದೆ ಕ್ರೀಡಾಕೂಟಕೂಟ: ಕಾಡುತ್ತಿರುವ ಮಳೆ ಕೊರತೆ!

ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…

13 mins ago

ಟಿಎಪಿಸಿಎಂಎಸ್ ಅಧಿಕಾರ ಹಿಡಿಯಲು ತಂತ್ರ-ಪ್ರತಿತಂತ್ರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…

17 mins ago

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago