ಪ್ರಶಾಂತ್ ಎಸ್.
ಸ್ಕಾಲರ್ಶಿಪ್ ಬಳಸಿಕೊಂಡೇ ವ್ಯಾಸಂಗ ಮಾಡಿದ ಮಹಿನ್ ಸರೂರ್ ಸಾಧ
ಮೈಸೂರು: ಬಡತನದ ನಡುವೆಯೂ ಆಟೋ ಚಾಲಕನ ಪುತ್ರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಆಟೋ ಚಾಲಕರಾಗಿ ಕೆಲಸ ಮಾಡುವ ಮುಜೀಬ್ ಅಹಮ್ಮದ್ ಹಾಗೂ ಫೌಜಿಯಾ ಸುಲ್ತಾನ ಅವರ ಪುತ್ರಿ ಮಹಿನ್ ಸರೂರ್ ೫೭೬ ಅಂಕ ಗಳಿಸಿ ಮಹಾರಾಣಿ ಪದವಿಪೂರ್ವ ಕಾಲೇಜಿಗೆ ಈ ಬಾರಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಶಿಷ್ಯವೇತನದಲ್ಲೇ ಓದು: ಎಸ್ಎಸ್ಎಲ್ಎಸಿ ಪರೀಕ್ಷೆಯಲ್ಲಿಯೂ ಶೇ.೯೩ ಫಲಿತಾಂಶ ಪಡೆದಿದ್ದರಿಂದ ಶಿಷ್ಯವೇತನ ಪಡೆದುಕೊಂಡಿದ್ದರು. ಅಂದಿನಿಂದ ಪೋಷಕರಿಗೆ ಹೊರೆಯಾಗದಂತೆ ಮಹಿನ್ ಸರೂರ್ ಅವರು ಸರ್ಕಾರಿ ಸ್ಕಾಲರ್ಶಿಪ್ ಅನ್ನೇ ಬಳಸಿಕೊಂಡು ವಿದ್ಯಾಭ್ಯಾಸ ಮಾಡಿದ್ದಾರೆ. ಜೊತೆಗೆ ತಾನು ದುಡಿದು ಓದಿನಲ್ಲಿ ಮೇಲುಗೈ ಸಾಧಿಸಿದ್ದಾರೆ.
ನನಗೆ ನನ್ನ ಕುಟುಂಬವೇ ಸೂರ್ತಿ: ನೋಡಮ್ಮ ನಮಗೆ ಹೆಚ್ಚು ಓದಿಸಲು ಆಗಲ್ಲ. ನೀನು ಚೆನ್ನಾಗಿ ಓದಿದರೆ ನಿನ್ನನ್ನು ಯಾರಾದರೂ ಮುಂದೆ ಓದಿಸುತ್ತಾರೆಂದು ಅಪ್ಪ-ಅಮ್ಮ ಆಗಾಗ ಹೇಳುತ್ತಿರುವಾಗ ತುಂಬಾ ದುಃಖವಾಗುತ್ತಿತು. ಈ ಮಾತುಗಳೇ ನನ್ನ ಓದಿಗೆ ಸೂರ್ತಿಯಾಯಿತು ಎಂದು ಓದಿನ ಅನುಭವವನ್ನು ಹಂಚಿಕೊಂಡಿದ್ದಾರೆ.
” ಮನೆಯಲ್ಲಿ ಬಡತನವಿದ್ದರೂ ನನ್ನ ತಂದೆ ಆಟೋ ಓಡಿಸುತ್ತಾ ಬಂದಂತಹ ಹಣವನ್ನು ಕೂಡಿಟ್ಟು ಓದಲು ಸಹಾಯ ಮಾಡಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಹಾಕಿ ಉನ್ನತ ವಿದ್ಯಾಭ್ಯಾಸ ಮಾಡಿ ನನ್ನ ಗುರಿ ಮುಟ್ಟುತ್ತೇನೆ.”
ಮಹಿನ್ ಸರೂರ್, ವಿದ್ಯಾರ್ಥಿನಿ
” ಮಹಿನ್ ಸರೂರ್ ನಮ್ಮಕಾಲೇಜಿಗೆ ಕೀರ್ತಿ ತಂದಿದ್ದಾಳೆ. ಇದರಿಂದ ನಮ್ಮ ಸಿಬ್ಬಂದಿಗೆ ಬಹಳ ಸಂತಸವಾಗಿದೆ. ಮುಂದಿನ ವಿದ್ಯಾಭ್ಯಾಸಕ್ಕೆ ನಮ್ಮ ಕಾಲೇಜಿನ ಸಿಬ್ಬಂದಿ ವತಿಯಿಂದಲೂ ಸಹಾಯ ಮಾಡುತ್ತೇವೆ.”
ಪಿ.ಸೋಮಣ್ಣ, ಪ್ರಾಂಶುಪಾಲ, ಮಹಾರಾಣಿ ಪದವಿಪೂರ್ವ ಕಾಲೇಜು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…