Andolana originals

ಬೃಹತ್‌ ಪಾಲಿಕೆಗೆ ಕಸರತ್ತು

4 ಗ್ರಾಮ ಪಂಚಾಯಿತಿ, 4 ಪಟ್ಟಣ ಪಂಚಾಯಿತಿ, 1 ನಗರಸಭೆ, ಇಲವಾಲ, ನಾಗನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ತರಲು ಸಿದ್ಧತೆ

ಕೆ. ಬಿ. ರಮೇಶನಾಯಕ

ಮೈಸೂರು: ನಗರದ ಹೊರವಲಯದ ಪ್ರದೇಶಗಳನ್ನು ಸೇರ್ಪಡೆಗೊಳಿಸಿ ಬೃಹತ್ ಮೈಸೂರು ಮಹಾನಗರಪಾಲಿಕೆಯನ್ನು ರಚಿ ಸಲು ಸರ್ಕಾರ ಮತ್ತೆ ಮನಸ್ಸು ಮಾಡಿರುವುದ ರಿಂದ ನನೆಗುದಿಗೆಯಲ್ಲಿದ್ದ ಪ್ರಸ್ತಾಪಕ್ಕೆ ಮರು ಜೀವ ಸಿಕ್ಕಿದೆ. ಇದರೊಂದಿಗೆ ಶೀಘ್ರದಲ್ಲೇ ನಗರ ಪಾಲಿಕೆ ಚುನಾವಣೆ ನಡೆಯಬಹುದೆಂಬ ನಿರೀಕ್ಷೆ ಹುಸಿಯಾಗುವ ಸೂಚನೆ ದೊರೆತಿದೆ.

ಹಲವು ವರ್ಷಗಳಿಂದಲೂ ಬೃಹತ್ ಮೈಸೂರು ಮಹಾ ನಗರಪಾಲಿಕೆಯನ್ನಾಗಿ ಮಾಡಬೇಕೆಂಬ ಕೂಗಿಗೆ ಕೊನೆಗೂ ಜಿಲ್ಲೆಯವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಹೀಗಾಗಿಯೇ, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಅಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ.

ನಗರಪಾಲಿಕೆ, ನಾಲ್ಕು ಪಟ್ಟಣ ಪಂಚಾಯಿತಿ ಗಳು, ಒಂದು ನಗರಸಭೆ, ನಾಲ್ಕು ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಂದ ಈಗಾಗಲೇ ಮಾಹಿತಿ ಕ್ರೋಡೀಕರಿಸಿರುವ ನಗರಪಾಲಿಕೆ ಅಧಿಕಾರಿಗಳು ಎಲ್. ಕೆ. ಅತೀಕ್ ಅವರ ಎದುರು ಪ್ರಸ್ತುತಪಡಿಸುವರು. ಈ ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಕ್ರೋಡೀ ಕರಿಸಿ ಅತೀಕ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದಾರೆ. ಇದರಿಂದಾಗಿ ಸ್ಥಳೀಯ ಸಂಸ್ಥೆ ಗಳ ಚುನಾವಣೆ ಜತೆಗೆ ಮೈಸೂರು ಮಹಾ ನಗರಪಾಲಿಕೆ ಚುನಾವಣೆ ನಡೆಯುವುದು ಸಾಧ್ಯವಿಲ್ಲ ಎನ್ನುವ ಸಂದೇಶ ಹೊರ ಬಿದ್ದಿದೆ.

೨೦೧೮ರ ಚುನಾವಣೆ ಹೊತ್ತಲ್ಲಿ ಬೃಹತ್ ನಗರಪಾಲಿಕೆ ರಚನೆ ಮಾಡಬೇಕೆಂಬ ಪ್ರಸ್ತಾಪ ಕೇಳಿ ಬಂದಿತ್ತಾದರೂ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ ಕಾಂಗ್ರೆಸ್ ಮತ್ತು ಜಾ. ದಳ ಮೈತ್ರಿ ಸರ್ಕಾರ ಈ ದುಸ್ಸಾಹಕ್ಕೆ ಕೈ ಹಾಕದೆ ವಾರ್ಡ್ ಮೀಸಲಾತಿ ಯನ್ನು ಮಾತ್ರ ಬದಲಿಸಿ ಚುನಾ ವಣೆ ನಡೆಸಿತ್ತು. ನಂತರ ಮೈತ್ರಿ ಪಕ್ಷಗಳು ಅಽಕಾರ ಹಂಚಿಕೊಂಡಿ ದ್ದವು. ಆದರೆ ೨೦೨೩ರ ನವೆಂಬರ್ ತಿಂಗಳಲ್ಲಿ ಪಾಲಿಕೆ ಸದಸ್ಯರ ಅವಧಿ ಮುಗಿದು ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಹೊಸದಾಗಿ ರಚನೆಯಾದ ಒಂದು ನಗರಸಭೆ, ನಾಲ್ಕು ಪಟ್ಟಣ ಪಂಚಾಯಿತಿ ಗಳಿಗೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಾಗಾಗಿ, ಮೈಸೂರು ನಗರ ಮತ್ತು ಹೊರ ವಲಯದ ಸ್ಥಳೀಯ ಸಂಸ್ಥೆಗಳನ್ನು ಸೇರ್ಪಡೆಗೊಳಿಸಿ ಬೃಹತ್ ಪಾಲಿಕೆ ರಚನೆ ಮಾಡಿದರೆ ಯಾವುದೇ ತೊಡಕು ಮತ್ತು ಕಾನೂನಾತ್ಮಕ ಸಮಸ್ಯೆ ಉಂಟಾಗುವುದಿಲ್ಲ ಎನ್ನು ವುದನ್ನು ಮನಗಂಡು ರಾಜ್ಯ ಸರ್ಕಾರ ಇಂತಹ ಮಹತ್ವದ ನಿರ್ಧಾರಕ್ಕೆ ಬಂದಿದೆ.

ಸ್ಥಳೀಯ ಸಂಸ್ಥೆಗಳಿಂದಲೂ ಒಪ್ಪಿಗೆ: ಬೃಹತ್ ನಗರಪಾಲಿಕೆ ರಚನೆಗೆ ಸಂಬಂಽಸಿದಂತೆ ಸ್ಥಳೀಯ ಸಂಸ್ಥೆಗಳು ಒಪ್ಪಿಗೆ ನೀಡಿವೆ. ಸಿದ್ದಲಿಂಗಪುರ ಗ್ರಾಪಂ, ರಮ್ಮನಹಳ್ಳಿ, ಕಡಕೊಳ ಪಪಂ, ಹೂಟಗಳ್ಳಿ ನಗರಸಭೆ, ಆಲನಹಳ್ಳಿ ಗ್ರಾಪಂ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ದೊರೆತಿದ್ದರೆ, ಮೈಸೂರು ನಗರ ಪಾಲಿಕೆಯು ಪ್ರಸ್ತಾವನೆ ಸಲ್ಲಿಸಿರುತ್ತದೆ. ಇಲವಾಲ ಗ್ರಾಪಂ, ಶ್ರೀರಾಂಪುರ, ಬೋಗಾದಿ ಪಟ್ಟಣ ಪಂಚಾಯಿತಿ ಗಳು ಆಡಳಿತಾಧಿಕಾರಿಗಳ ಅನುಮೋದನೆಗೆ ಮಂಡಿಸಿದ್ದರೆ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿರು ತ್ತದೆ. ಹೀಗಾಗಿ, ಯಾವುದೇ ರೀತಿಯಲ್ಲೂ ತೊಡಕುಗಳು ಉಂಟಾಗದೆ ಇರುವ ಕಾರಣ ಬೃಹತ್ ಪಾಲಿಕೆಯನ್ನಾಗಿ ಮಾಡಿ ವಾರ್ಡುಗಳ ರಚನೆ, ಬೌಂಡರಿ ಗುರುತಿಸುವಿಕೆ ಕಾರ್ಯ ಸುಲಭವಾಗಲಿದೆ ಎಂದು ಹೇಳಲಾಗಿದೆ.

ನಗರಸಭೆ
ಹೂಟಗಳ್ಳಿ
ಪಟ್ಟಣ ಪಂಚಾಯಿತಿ
ಶ್ರೀರಾಂಪುರ
ರಮ್ಮನಹಳ್ಳಿ
ಕಡಕೊಳ
ಬೋಗಾದಿ
ಗ್ರಾಮ ಪಂಚಾಯಿತಿ
ಸಿದ್ದಲಿಂಗಪುರ
ಆಲನಹಳ್ಳಿ
ಚಾಮುಂಡಿಬೆಟ್ಟ
ಇಲವಾಲ (ಇಲವಾಲ ಗ್ರಾಮ ಮಾತ್ರ) ನಾಗನಹಳ್ಳಿ (ಭಾಗಶಃ)

ಆಂದೋಲನ ಡೆಸ್ಕ್

Recent Posts

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

13 mins ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

1 hour ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

4 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

4 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

4 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

4 hours ago