Andolana originals

ಬೃಹತ್‌ ಪಾಲಿಕೆಗೆ ಕಸರತ್ತು

4 ಗ್ರಾಮ ಪಂಚಾಯಿತಿ, 4 ಪಟ್ಟಣ ಪಂಚಾಯಿತಿ, 1 ನಗರಸಭೆ, ಇಲವಾಲ, ನಾಗನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ತರಲು ಸಿದ್ಧತೆ

ಕೆ. ಬಿ. ರಮೇಶನಾಯಕ

ಮೈಸೂರು: ನಗರದ ಹೊರವಲಯದ ಪ್ರದೇಶಗಳನ್ನು ಸೇರ್ಪಡೆಗೊಳಿಸಿ ಬೃಹತ್ ಮೈಸೂರು ಮಹಾನಗರಪಾಲಿಕೆಯನ್ನು ರಚಿ ಸಲು ಸರ್ಕಾರ ಮತ್ತೆ ಮನಸ್ಸು ಮಾಡಿರುವುದ ರಿಂದ ನನೆಗುದಿಗೆಯಲ್ಲಿದ್ದ ಪ್ರಸ್ತಾಪಕ್ಕೆ ಮರು ಜೀವ ಸಿಕ್ಕಿದೆ. ಇದರೊಂದಿಗೆ ಶೀಘ್ರದಲ್ಲೇ ನಗರ ಪಾಲಿಕೆ ಚುನಾವಣೆ ನಡೆಯಬಹುದೆಂಬ ನಿರೀಕ್ಷೆ ಹುಸಿಯಾಗುವ ಸೂಚನೆ ದೊರೆತಿದೆ.

ಹಲವು ವರ್ಷಗಳಿಂದಲೂ ಬೃಹತ್ ಮೈಸೂರು ಮಹಾ ನಗರಪಾಲಿಕೆಯನ್ನಾಗಿ ಮಾಡಬೇಕೆಂಬ ಕೂಗಿಗೆ ಕೊನೆಗೂ ಜಿಲ್ಲೆಯವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಹೀಗಾಗಿಯೇ, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಅಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ.

ನಗರಪಾಲಿಕೆ, ನಾಲ್ಕು ಪಟ್ಟಣ ಪಂಚಾಯಿತಿ ಗಳು, ಒಂದು ನಗರಸಭೆ, ನಾಲ್ಕು ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಂದ ಈಗಾಗಲೇ ಮಾಹಿತಿ ಕ್ರೋಡೀಕರಿಸಿರುವ ನಗರಪಾಲಿಕೆ ಅಧಿಕಾರಿಗಳು ಎಲ್. ಕೆ. ಅತೀಕ್ ಅವರ ಎದುರು ಪ್ರಸ್ತುತಪಡಿಸುವರು. ಈ ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಕ್ರೋಡೀ ಕರಿಸಿ ಅತೀಕ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದಾರೆ. ಇದರಿಂದಾಗಿ ಸ್ಥಳೀಯ ಸಂಸ್ಥೆ ಗಳ ಚುನಾವಣೆ ಜತೆಗೆ ಮೈಸೂರು ಮಹಾ ನಗರಪಾಲಿಕೆ ಚುನಾವಣೆ ನಡೆಯುವುದು ಸಾಧ್ಯವಿಲ್ಲ ಎನ್ನುವ ಸಂದೇಶ ಹೊರ ಬಿದ್ದಿದೆ.

೨೦೧೮ರ ಚುನಾವಣೆ ಹೊತ್ತಲ್ಲಿ ಬೃಹತ್ ನಗರಪಾಲಿಕೆ ರಚನೆ ಮಾಡಬೇಕೆಂಬ ಪ್ರಸ್ತಾಪ ಕೇಳಿ ಬಂದಿತ್ತಾದರೂ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ ಕಾಂಗ್ರೆಸ್ ಮತ್ತು ಜಾ. ದಳ ಮೈತ್ರಿ ಸರ್ಕಾರ ಈ ದುಸ್ಸಾಹಕ್ಕೆ ಕೈ ಹಾಕದೆ ವಾರ್ಡ್ ಮೀಸಲಾತಿ ಯನ್ನು ಮಾತ್ರ ಬದಲಿಸಿ ಚುನಾ ವಣೆ ನಡೆಸಿತ್ತು. ನಂತರ ಮೈತ್ರಿ ಪಕ್ಷಗಳು ಅಽಕಾರ ಹಂಚಿಕೊಂಡಿ ದ್ದವು. ಆದರೆ ೨೦೨೩ರ ನವೆಂಬರ್ ತಿಂಗಳಲ್ಲಿ ಪಾಲಿಕೆ ಸದಸ್ಯರ ಅವಧಿ ಮುಗಿದು ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಹೊಸದಾಗಿ ರಚನೆಯಾದ ಒಂದು ನಗರಸಭೆ, ನಾಲ್ಕು ಪಟ್ಟಣ ಪಂಚಾಯಿತಿ ಗಳಿಗೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಾಗಾಗಿ, ಮೈಸೂರು ನಗರ ಮತ್ತು ಹೊರ ವಲಯದ ಸ್ಥಳೀಯ ಸಂಸ್ಥೆಗಳನ್ನು ಸೇರ್ಪಡೆಗೊಳಿಸಿ ಬೃಹತ್ ಪಾಲಿಕೆ ರಚನೆ ಮಾಡಿದರೆ ಯಾವುದೇ ತೊಡಕು ಮತ್ತು ಕಾನೂನಾತ್ಮಕ ಸಮಸ್ಯೆ ಉಂಟಾಗುವುದಿಲ್ಲ ಎನ್ನು ವುದನ್ನು ಮನಗಂಡು ರಾಜ್ಯ ಸರ್ಕಾರ ಇಂತಹ ಮಹತ್ವದ ನಿರ್ಧಾರಕ್ಕೆ ಬಂದಿದೆ.

ಸ್ಥಳೀಯ ಸಂಸ್ಥೆಗಳಿಂದಲೂ ಒಪ್ಪಿಗೆ: ಬೃಹತ್ ನಗರಪಾಲಿಕೆ ರಚನೆಗೆ ಸಂಬಂಽಸಿದಂತೆ ಸ್ಥಳೀಯ ಸಂಸ್ಥೆಗಳು ಒಪ್ಪಿಗೆ ನೀಡಿವೆ. ಸಿದ್ದಲಿಂಗಪುರ ಗ್ರಾಪಂ, ರಮ್ಮನಹಳ್ಳಿ, ಕಡಕೊಳ ಪಪಂ, ಹೂಟಗಳ್ಳಿ ನಗರಸಭೆ, ಆಲನಹಳ್ಳಿ ಗ್ರಾಪಂ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ದೊರೆತಿದ್ದರೆ, ಮೈಸೂರು ನಗರ ಪಾಲಿಕೆಯು ಪ್ರಸ್ತಾವನೆ ಸಲ್ಲಿಸಿರುತ್ತದೆ. ಇಲವಾಲ ಗ್ರಾಪಂ, ಶ್ರೀರಾಂಪುರ, ಬೋಗಾದಿ ಪಟ್ಟಣ ಪಂಚಾಯಿತಿ ಗಳು ಆಡಳಿತಾಧಿಕಾರಿಗಳ ಅನುಮೋದನೆಗೆ ಮಂಡಿಸಿದ್ದರೆ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿರು ತ್ತದೆ. ಹೀಗಾಗಿ, ಯಾವುದೇ ರೀತಿಯಲ್ಲೂ ತೊಡಕುಗಳು ಉಂಟಾಗದೆ ಇರುವ ಕಾರಣ ಬೃಹತ್ ಪಾಲಿಕೆಯನ್ನಾಗಿ ಮಾಡಿ ವಾರ್ಡುಗಳ ರಚನೆ, ಬೌಂಡರಿ ಗುರುತಿಸುವಿಕೆ ಕಾರ್ಯ ಸುಲಭವಾಗಲಿದೆ ಎಂದು ಹೇಳಲಾಗಿದೆ.

ನಗರಸಭೆ
ಹೂಟಗಳ್ಳಿ
ಪಟ್ಟಣ ಪಂಚಾಯಿತಿ
ಶ್ರೀರಾಂಪುರ
ರಮ್ಮನಹಳ್ಳಿ
ಕಡಕೊಳ
ಬೋಗಾದಿ
ಗ್ರಾಮ ಪಂಚಾಯಿತಿ
ಸಿದ್ದಲಿಂಗಪುರ
ಆಲನಹಳ್ಳಿ
ಚಾಮುಂಡಿಬೆಟ್ಟ
ಇಲವಾಲ (ಇಲವಾಲ ಗ್ರಾಮ ಮಾತ್ರ) ನಾಗನಹಳ್ಳಿ (ಭಾಗಶಃ)

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

3 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

5 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

5 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

5 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

6 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

6 hours ago