Andolana originals

ಬೃಹತ್‌ ಪಾಲಿಕೆಗೆ ಕಸರತ್ತು

4 ಗ್ರಾಮ ಪಂಚಾಯಿತಿ, 4 ಪಟ್ಟಣ ಪಂಚಾಯಿತಿ, 1 ನಗರಸಭೆ, ಇಲವಾಲ, ನಾಗನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ತರಲು ಸಿದ್ಧತೆ

ಕೆ. ಬಿ. ರಮೇಶನಾಯಕ

ಮೈಸೂರು: ನಗರದ ಹೊರವಲಯದ ಪ್ರದೇಶಗಳನ್ನು ಸೇರ್ಪಡೆಗೊಳಿಸಿ ಬೃಹತ್ ಮೈಸೂರು ಮಹಾನಗರಪಾಲಿಕೆಯನ್ನು ರಚಿ ಸಲು ಸರ್ಕಾರ ಮತ್ತೆ ಮನಸ್ಸು ಮಾಡಿರುವುದ ರಿಂದ ನನೆಗುದಿಗೆಯಲ್ಲಿದ್ದ ಪ್ರಸ್ತಾಪಕ್ಕೆ ಮರು ಜೀವ ಸಿಕ್ಕಿದೆ. ಇದರೊಂದಿಗೆ ಶೀಘ್ರದಲ್ಲೇ ನಗರ ಪಾಲಿಕೆ ಚುನಾವಣೆ ನಡೆಯಬಹುದೆಂಬ ನಿರೀಕ್ಷೆ ಹುಸಿಯಾಗುವ ಸೂಚನೆ ದೊರೆತಿದೆ.

ಹಲವು ವರ್ಷಗಳಿಂದಲೂ ಬೃಹತ್ ಮೈಸೂರು ಮಹಾ ನಗರಪಾಲಿಕೆಯನ್ನಾಗಿ ಮಾಡಬೇಕೆಂಬ ಕೂಗಿಗೆ ಕೊನೆಗೂ ಜಿಲ್ಲೆಯವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಹೀಗಾಗಿಯೇ, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಅಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ.

ನಗರಪಾಲಿಕೆ, ನಾಲ್ಕು ಪಟ್ಟಣ ಪಂಚಾಯಿತಿ ಗಳು, ಒಂದು ನಗರಸಭೆ, ನಾಲ್ಕು ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಂದ ಈಗಾಗಲೇ ಮಾಹಿತಿ ಕ್ರೋಡೀಕರಿಸಿರುವ ನಗರಪಾಲಿಕೆ ಅಧಿಕಾರಿಗಳು ಎಲ್. ಕೆ. ಅತೀಕ್ ಅವರ ಎದುರು ಪ್ರಸ್ತುತಪಡಿಸುವರು. ಈ ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಕ್ರೋಡೀ ಕರಿಸಿ ಅತೀಕ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದಾರೆ. ಇದರಿಂದಾಗಿ ಸ್ಥಳೀಯ ಸಂಸ್ಥೆ ಗಳ ಚುನಾವಣೆ ಜತೆಗೆ ಮೈಸೂರು ಮಹಾ ನಗರಪಾಲಿಕೆ ಚುನಾವಣೆ ನಡೆಯುವುದು ಸಾಧ್ಯವಿಲ್ಲ ಎನ್ನುವ ಸಂದೇಶ ಹೊರ ಬಿದ್ದಿದೆ.

೨೦೧೮ರ ಚುನಾವಣೆ ಹೊತ್ತಲ್ಲಿ ಬೃಹತ್ ನಗರಪಾಲಿಕೆ ರಚನೆ ಮಾಡಬೇಕೆಂಬ ಪ್ರಸ್ತಾಪ ಕೇಳಿ ಬಂದಿತ್ತಾದರೂ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ ಕಾಂಗ್ರೆಸ್ ಮತ್ತು ಜಾ. ದಳ ಮೈತ್ರಿ ಸರ್ಕಾರ ಈ ದುಸ್ಸಾಹಕ್ಕೆ ಕೈ ಹಾಕದೆ ವಾರ್ಡ್ ಮೀಸಲಾತಿ ಯನ್ನು ಮಾತ್ರ ಬದಲಿಸಿ ಚುನಾ ವಣೆ ನಡೆಸಿತ್ತು. ನಂತರ ಮೈತ್ರಿ ಪಕ್ಷಗಳು ಅಽಕಾರ ಹಂಚಿಕೊಂಡಿ ದ್ದವು. ಆದರೆ ೨೦೨೩ರ ನವೆಂಬರ್ ತಿಂಗಳಲ್ಲಿ ಪಾಲಿಕೆ ಸದಸ್ಯರ ಅವಧಿ ಮುಗಿದು ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಹೊಸದಾಗಿ ರಚನೆಯಾದ ಒಂದು ನಗರಸಭೆ, ನಾಲ್ಕು ಪಟ್ಟಣ ಪಂಚಾಯಿತಿ ಗಳಿಗೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಾಗಾಗಿ, ಮೈಸೂರು ನಗರ ಮತ್ತು ಹೊರ ವಲಯದ ಸ್ಥಳೀಯ ಸಂಸ್ಥೆಗಳನ್ನು ಸೇರ್ಪಡೆಗೊಳಿಸಿ ಬೃಹತ್ ಪಾಲಿಕೆ ರಚನೆ ಮಾಡಿದರೆ ಯಾವುದೇ ತೊಡಕು ಮತ್ತು ಕಾನೂನಾತ್ಮಕ ಸಮಸ್ಯೆ ಉಂಟಾಗುವುದಿಲ್ಲ ಎನ್ನು ವುದನ್ನು ಮನಗಂಡು ರಾಜ್ಯ ಸರ್ಕಾರ ಇಂತಹ ಮಹತ್ವದ ನಿರ್ಧಾರಕ್ಕೆ ಬಂದಿದೆ.

ಸ್ಥಳೀಯ ಸಂಸ್ಥೆಗಳಿಂದಲೂ ಒಪ್ಪಿಗೆ: ಬೃಹತ್ ನಗರಪಾಲಿಕೆ ರಚನೆಗೆ ಸಂಬಂಽಸಿದಂತೆ ಸ್ಥಳೀಯ ಸಂಸ್ಥೆಗಳು ಒಪ್ಪಿಗೆ ನೀಡಿವೆ. ಸಿದ್ದಲಿಂಗಪುರ ಗ್ರಾಪಂ, ರಮ್ಮನಹಳ್ಳಿ, ಕಡಕೊಳ ಪಪಂ, ಹೂಟಗಳ್ಳಿ ನಗರಸಭೆ, ಆಲನಹಳ್ಳಿ ಗ್ರಾಪಂ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ದೊರೆತಿದ್ದರೆ, ಮೈಸೂರು ನಗರ ಪಾಲಿಕೆಯು ಪ್ರಸ್ತಾವನೆ ಸಲ್ಲಿಸಿರುತ್ತದೆ. ಇಲವಾಲ ಗ್ರಾಪಂ, ಶ್ರೀರಾಂಪುರ, ಬೋಗಾದಿ ಪಟ್ಟಣ ಪಂಚಾಯಿತಿ ಗಳು ಆಡಳಿತಾಧಿಕಾರಿಗಳ ಅನುಮೋದನೆಗೆ ಮಂಡಿಸಿದ್ದರೆ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿರು ತ್ತದೆ. ಹೀಗಾಗಿ, ಯಾವುದೇ ರೀತಿಯಲ್ಲೂ ತೊಡಕುಗಳು ಉಂಟಾಗದೆ ಇರುವ ಕಾರಣ ಬೃಹತ್ ಪಾಲಿಕೆಯನ್ನಾಗಿ ಮಾಡಿ ವಾರ್ಡುಗಳ ರಚನೆ, ಬೌಂಡರಿ ಗುರುತಿಸುವಿಕೆ ಕಾರ್ಯ ಸುಲಭವಾಗಲಿದೆ ಎಂದು ಹೇಳಲಾಗಿದೆ.

ನಗರಸಭೆ
ಹೂಟಗಳ್ಳಿ
ಪಟ್ಟಣ ಪಂಚಾಯಿತಿ
ಶ್ರೀರಾಂಪುರ
ರಮ್ಮನಹಳ್ಳಿ
ಕಡಕೊಳ
ಬೋಗಾದಿ
ಗ್ರಾಮ ಪಂಚಾಯಿತಿ
ಸಿದ್ದಲಿಂಗಪುರ
ಆಲನಹಳ್ಳಿ
ಚಾಮುಂಡಿಬೆಟ್ಟ
ಇಲವಾಲ (ಇಲವಾಲ ಗ್ರಾಮ ಮಾತ್ರ) ನಾಗನಹಳ್ಳಿ (ಭಾಗಶಃ)

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

21 mins ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

23 mins ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

26 mins ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

4 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

4 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago