Andolana originals

ರಸ್ತೆ ಮಧ್ಯದಲ್ಲೆ ತೆರೆದ ಮ್ಯಾನ್‌ಹೋಲ್; ಅಪಾಯಕ್ಕೆ ಆಹ್ವಾನ

ಅವಘಡಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ

ಎಂ. ನಾರಾಯಣ
ತಿ. ನರಸೀಪುರ: ಪಟ್ಟಣದ ಪ್ರಮುಖ ಭಾಗದಲ್ಲೇ ಒಳಚರಂಡಿಯ ಮ್ಯಾನ್ ಹೋಲ್ ತೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಸಂಬಂಧಪಟ್ಟವರು ಗಮನಹರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಮಧ್ಯಭಾಗದಲ್ಲಿ ಮ್ಯಾನ್ ಹೋಲ್ ಮುಚ್ಚಳ ತೆರೆದುಕೊಂಡಿದ್ದು, ಅಪಘಾತಗಳಾಗಿ ಸಾವು ನೋವು ಸಂಭವಿಸುವ ಮುನ್ನ ಪುರಸಭೆ ಎಚ್ಚೆತ್ತು ಅದನ್ನು ಮುಚ್ಚಬೇಕು ಎಂದು ಪಟ್ಟಣದ ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯವರು ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮ್ಯಾನ್ ಹೋಲ್ ಮುಚ್ಚಳ ತೆರೆದು ತಿಂಗಳುಗಳೇ ಕಳೆದರೂ ಪುರಸಭೆ ಇತ್ತ ಗಮನ ಹರಿಸಿಲ್ಲ. ಮ್ಯಾನ್ ಹೋಲ್ ಮುಚ್ಚಳ ತೆರೆದಿರುವ ಸಮೀಪದಲ್ಲೇ ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಇದ್ದು, ಪ್ರತಿನಿತ್ಯ ಸಾವಿರಾರು ಮಕ್ಕಳು ಈ ರಸ್ತೆಯ ಮೂಲಕ ಶಾಲೆಗೆ ತೆರಳುತ್ತಾರೆ. ಪೋಷಕರು ವಾಹನಗಳಲ್ಲಿ ಮಕ್ಕಳನ್ನು ಕರೆತರುತ್ತಾರೆ. ಈ ವೇಳೆ ಅವಘಡಗಳಾದರೆ ಯಾರು ಹೊಣೆ ಎಂಬ ಪ್ರಶ್ನೆ ಉದ್ಭವವಾಗಿದೆ.

ಅಪಘಾತಗಳು ಸಂಭವಿಸುವ ಮುನ್ನವೇ ಮುಚ್ಚುವ ಕಾರ್ಯ ಕೈಗೊಳ್ಳ ಬೇಕು ಎಂದು ವಿವೇಕಾನಂದ ನಗರದ ನಿವಾಸಿಗಳು ಮನವಿ ಮಾಡಿದ್ದಾರೆ. ಸೇಂಟ್ ಮೇರಿಸ್ ಶಾಲೆ ವತಿಯಿಂದ ಸ್ಥಳೀಯ ಪುರಸಭಾ ಸದಸ್ಯೆ ರೂಪ ಪರಮೇಶ್ ಹಾಗೂ ತಾಲ್ಲೂಕು ತಹಸಿಲ್ದಾರ್‌ರವರಿಗೂ ಮನವಿ ಮಾಡಿದ್ದರೂ ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ.

ಸೆಂಟ್ ಮೇರಿಸ್ ಶಾಲೆಯ ಮುಖ್ಯ ದ್ವಾರದ ಬಳಿಯ ರಸ್ತೆಯಲ್ಲಿ ಮ್ಯಾನ್ ಹೋಲ್ ಮುಚ್ಚಳವು ತೆರೆದ ಸ್ಥಿತಿಯಲ್ಲಿದ್ದು, ಶಾಲೆಯ ಮಕ್ಕಳು ವಾಹನಗಳಲ್ಲಿ ಈ ರಸ್ತೆಯಲ್ಲಿ ಚಲಿಸು ವುದರಿಂದ ಸಮಸ್ಯೆ ಆಗುತ್ತದೆ. ಮ್ಯಾನ್ ಹೋಲ್ ಮುಚ್ಚಿಸುವಂತೆ ಪುರಸಭೆಗೆ ಶಾಲೆ ವತಿಯಿಂದ ಲಿಖಿತ ಮನವಿ ಸಲ್ಲಿಸಲಿದ್ದೇವೆ. -ಆರ್. ಗೋವಿಂದ, ಉಪ ಪ್ರಾಂಶುಪಾಲರು, ಸೇಂಟ್ ಮೇರಿಸ್ ಶಾಲೆ, ತಿ. ನರಸೀಪುರ.

ಪುರಸಭಾ ವ್ಯಾಪ್ತಿಯಲ್ಲಿ ಹಲವು ಕಡೆ ಒಳಚರಂಡಿ ವ್ಯವಸ್ಥೆ ಪೂರ್ಣಗೊಂಡಿಲ್ಲ. ಕಾಮಗಾರಿ ಪೂರ್ಣಗೊಂಡಿರುವ ಕೆಲವು ಕಡೆ ಮ್ಯಾನ್‌ಹೋಲ್‌ಗಳ ಮುಚ್ಚಳ ತೆಗೆದುಕೊಂಡಿವೆ. ಮತ್ತೆ ಕೆಲವು ಕಡೆ ದುರಸ್ತಿಯಲ್ಲಿವೆ. ಈ ಬಗ್ಗೆ ಪುರಸಭೆ ವತಿಯಿಂದ ಕೆಯುಐಡಿ ಎಫ್‌ಸಿಗೆ ಪತ್ರ ಬರೆಯಲಾಗಿದ್ದು, ವರ್ಕ್ ಆರ್ಡರ್ ಕೂಡ ಆಗಿದೆ. ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ. -ಸಿದ್ದಯ್ಯ, ಇಂಜಿನಿಯರ್, ಪುರಸಭೆ, ತಿ. ನರಸೀಪುರ.

ಆಂದೋಲನ ಡೆಸ್ಕ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

2 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

4 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

5 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

7 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

10 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

10 hours ago