ಬಾಂಗ್ಲಾದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎನ್ನುವ ಬೆನ್ನಲ್ಲೆ ಅಲ್ಲಿ ಈಗ ಹಿಂಸಾಚಾರ ಭುಗಿಲೆದ್ದಿದೆ. ಮೀಸಲಾತಿಯನ್ನು ವಿರೋಧಿಸುವ ಹೆಸರಿನಲ್ಲಿ ಆರಂಭವಾದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾ ಚಾರಕ್ಕೆ ತಿರುಗಿದ್ದು, ನೂರಾರು ಮಂದಿ ಬಲಿಯಾಗಿದ್ದಾರೆ.
ಬಾಂಗ್ಲಾದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಅಧಿಕಾರದ ದಾಹ ಒಂದು ದೇಶವನ್ನು ಯಾವ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ ಎಂಬುದಕ್ಕೆ ಬಾಂಗ್ಲಾದೇಶಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರಗಳಲ್ಲಿ ಸರ್ವಾಧಿಕಾರ ತೋರುವ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂಬುದಕ್ಕೆ ನಮ್ಮ ನೆರೆಯ ಬಾಂಗ್ಲಾದೇಶವೇ ಸಾಕ್ಷಿ. ಬಾಂಗ್ಲಾದೇಶದ ಆಡಳಿತ ವ್ಯವಸ್ಥೆ ಅಲ್ಲಿನ ಜನರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವ ಮತ್ತು ಜನರ ಧ್ವನಿಯನ್ನು ದಮನಿಸುವ ಪ್ರಯತ್ನ ಮಾಡಿತು. ಅದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿ ಹಿಂಸಾಚಾರಕ್ಕೆ ತಿರುಗಿದೆ.
ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟಿಸಬೇಕು ನಿಜ. ಆದರೆ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಅಮಾಯಕರು ಬಲಿಯಾಗುವಂತಾಗಬಾರದು. ಅದೇ ರೀತಿ ಅಧಿಕಾರದ ಚುಕ್ಕಾಣಿ ಹಿಡಿದಿರುವವರು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಬೇಕೇ ವಿನಾ ಅದನ್ನು ದುರ್ಬಲಗೊಳಿಸಲು ಮುಂದಾದರೆ ಇಂತಹ ಹಿಂಸಾಚಾರಕ್ಕೆ ಕಾರಣವಾಗಬಹುದು. ಆದ್ದರಿಂದ ನೆರೆಯ ಬಾಂಗ್ಲಾದೇಶದ ರಾಜಕೀಯ ಅರಾಜಕತೆ ನಮಗೆ ಎಚ್ಚರಿಕೆಯ ಘಂಟೆಯಾಗಿದೆ. ಅದನ್ನು ಅರಿತು ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ನಡೆದುಕೊಳ್ಳಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…