Andolana originals

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಗಾಂಧಿ ಆತ್ಮಕತೆಯ ಆಯ್ದ ತುಣುಕು ; ಬಾಲ್ಯ ವಿವಾಹವೆಂಬ ನಾಚಿಕೆಗೇಡಿನ ಸಂಗತಿ

ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ.

ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ ನನ್ನ ವಿಷಯಾಸಕ್ತಿಯೂ ಭೋಗಲಾಲಸೆಯೂ ಕಡಿಮೆಯಾಗಿರಲಿಲ್ಲ. ಶ್ರದ್ಧಾಪೂರ್ವಕವಾಗಿ ನನ್ನ ಎಲ್ಲ ಸುಖಗಳನ್ನೂ ಬಿಡಬೇಕೆಂಬುದನ್ನು ನಾನು ಇನ್ನೂ ಕಲಿತಿರಲಿಲ್ಲ. ನನ್ನ ಭೋಗೇಚ್ಛೆಗಾಗಿ ನನ್ನನ್ನು ಶಿಕ್ಷಿಸುವುದಕ್ಕೋ ಎಂಬಂತೆ ನಡೆದ ಒಂದು ದುರ್ಘಟನೆ, ನನ್ನ ಜೀವಮಾನವೆಲ್ಲಾ ಮನಸ್ಸಲ್ಲಿ ಕೊರೆಯುತ್ತಿದೆ. ಆ ಸಂಗತಿಯನ್ನು ಮುಂದೆ ತಿಳಿಸುವೆನು. ನಿಷ್ಕುಲಾನಂದರು ಹೀಗೆ ಹಾಡುತ್ತಾರೆ:

ಭೋಗವನ್ನು ಸವಿಯುವ ಆಸೆಯನ್ನು ಬಿಡದೆ ಭೋಗ ಸಾಮಗ್ರಿಯನ್ನು ಮಾತ್ರ ಬಿಟ್ಟರೆ ವೈರಾಗ್ಯ ಲಭಿಸುವುದಿಲ್ಲ. ತ್ಯಾಗವೆಂಬುದು ಒಂದು ಮನೋವೃತ್ತಿ. ಮನಸ್ಸು ಸ್ವಾಧೀನದಲ್ಲಿಲ್ಲದೆ ಬಾಹ್ಯವರ್ತನೆಯಿಂದ ಶಾಶ್ವತ ಫಲ ದೊರೆಯುವುದಿಲ್ಲ…. ನನ್ನ ಪಾಡಿಗೆ ನಾನು ಈ ಹಾಡನ್ನು ಹಾಡಿ ಕೊಂಡಾಗಲಾಗಲೀ, ಇತರರು ಹಾಡಿದಾಗಲಾಗಲೀ ಆ ದುರ್ಘಟನೆ ಮತ್ತು ಕಹಿಪ್ರಸಂಗ ನನಗೆ ಜ್ಞಾಪಕ ಬಂದು ನನ್ನಲ್ಲಿ ಲಜ್ಜೆಯನ್ನು ತುಂಬುತ್ತದೆ.

ನಮ್ಮ ತಂದೆ ತಾಯಿ ನನಗೆ ಬಾಲ್ಯ ವಿವಾಹವನ್ನು ಮಾಡಿದುದಕ್ಕಾಗಿ ಅವರನ್ನು ನಾನು ಮುಂದೆ ಟೀಕಿಸ ಬೇಕಾಗಬಹುದೆಂದು ನನಗೆ ಸ್ಪಪ್ನದಲ್ಲಿಯೂ ಆಗ ಹೊಳೆಯಲಿಲ್ಲ. ಆ ಸಮಯದಲ್ಲಿ ನನಗೆ ಎಲ್ಲವೂ ಯೋಗ್ಯವಾಗಿ, ಉಚಿತವಾಗಿ, ಇಷ್ಟವಾಗಿ ತೋರಿತು. ವಿವಾಹವಾಗಲು ನಾನೂ ತುಂಬ ಉತ್ಸುಕನಾಗಿದ್ದೆ. ಆಗ ನಮ್ಮ ತಂದೆ ಮಾಡಿದುದೆಲ್ಲ ನನಗೆ ನಿರ್ದುಷ್ಟವಾಗಿ ತೋರಿದುದರಿಂದ, ನಡೆದ ಸಂಗತಿಗಳೆಲ್ಲ ನನಗೆ ಸ್ಪಷ್ಟವಾಗಿ ನೆನಪಿದೆ.

ನಮ್ಮಲ್ಲಿ ಪರಸ್ಪರ ಸ್ಪಲ್ಪ ಭಯವೂ ಲಜ್ಜೆಯೂ ಇದ್ದಿತು. ಕ್ರಮೇಣ ಒಬ್ಬರನ್ನೊಬ್ಬರು ಅರಿತುಕೊಂಡು ನಿರಾತಂಕದಿಂದ ಮಾತನಾಡತೊಡಗಿದೆವು. ನಾವಿಬ್ಬರೂ ಒಂದೇ ವಯಸ್ಸಿನವರಾಗಿದ್ದೆವು. ಆದರೆ ನಾನು ಗಂಡನ ಅಧಿಕಾರವನ್ನು ವಹಿಸಿ ಕೊಳ್ಳಲು ತಡಮಾಡಲಿಲ್ಲ.

 

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago